nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌ | ಲಂಚ ಕೇಳಿದ ಆರೋಪ: ಗ್ರಾಮ ಲೆಕ್ಕಿಗ ಅಮಾನತು

    October 21, 2025

    ಹಳ್ಳಕ್ಕೆ ಉರುಳಿದ ಕಾರು: ಒಬ್ಬ ವ್ಯಕ್ತಿ ಸಾವು

    October 21, 2025

    ಮಳೆ ಸುರಿಯುತ್ತಿದ್ದರೂ ಪಟಾಕಿ ಖರೀದಿ ಜೋರು: ಎಲ್ಲೆಡೆ ಹಬ್ಬದ ಸಂಭ್ರಮ

    October 20, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್‌ | ಲಂಚ ಕೇಳಿದ ಆರೋಪ: ಗ್ರಾಮ ಲೆಕ್ಕಿಗ ಅಮಾನತು
    • ಹಳ್ಳಕ್ಕೆ ಉರುಳಿದ ಕಾರು: ಒಬ್ಬ ವ್ಯಕ್ತಿ ಸಾವು
    • ಮಳೆ ಸುರಿಯುತ್ತಿದ್ದರೂ ಪಟಾಕಿ ಖರೀದಿ ಜೋರು: ಎಲ್ಲೆಡೆ ಹಬ್ಬದ ಸಂಭ್ರಮ
    • ಕೇಳಿ ಬಂತು, ಮತ್ತೊಂದು ಹುಲಿಯ ಘರ್ಜನೆ: ಕೂಂಬಿಂಗ್ ಕಾರ್ಯಾಚರಣೆ ಆರಂಭ
    • ಮಾವತ್ತೂರು ಸೊಸೈಟಿಗೆ 6 ಜನ ನಿರ್ದೇಶಕರ ರಾಜೀನಾಮೆ
    • ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ
    • ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಾದರೆ ತಡೆಯುವ ಶಕ್ತಿ ಯಾರಿಗೂ ಇಲ್ಲ: ಶಿವಾಚಾರ್ಯ ಸ್ವಾಮೀಜಿ
    • ತುಮಕೂರು | ರಾಜ್ಯದಮಟ್ಟದ ಕಬಡ್ಡಿ: ದಕ್ಷಿಣ ಕನ್ನಡ ತಂಡಕ್ಕೆ ಅವಳಿ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳು ಭವಿಷ್ಯ ರೂಪಿಸಿಕೊಳ್ಳಲು ಫಲ ಪುಷ್ಪ ಪ್ರದರ್ಶನಗಳು ಪ್ರೇರಣೆ: ಜಿ.ಪ್ರಭು
    ತುಮಕೂರು January 24, 2025

    ಮಕ್ಕಳು ಭವಿಷ್ಯ ರೂಪಿಸಿಕೊಳ್ಳಲು ಫಲ ಪುಷ್ಪ ಪ್ರದರ್ಶನಗಳು ಪ್ರೇರಣೆ: ಜಿ.ಪ್ರಭು

    By adminJanuary 24, 2025No Comments2 Mins Read
    g prabhu

    ತುಮಕೂರು:  ಮಕ್ಕಳು ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾದ ಜ್ಞಾನ ಮೂಡಿಸುವಂತಹ ಫಲ–ಪುಷ್ಪ ಪ್ರದರ್ಶನವನ್ನು ಈ ಬಾರಿ ವಿಶೇಷವಾಗಿ ಏರ್ಪಡಿಸಲಾಗಿದೆ. ಆಕರ್ಷಕ ವಿನ್ಯಾಸದ ಫಲ-ಪುಷ್ಪ ಪ್ರದರ್ಶನಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.

    ಇಂದು ತೋಟಗಾರಿಕೆ ಇಲಾಖೆ ಸಭಾಂಗಣದಲ್ಲಿ ‘ಫಲಪುಷ್ಪ ಪ್ರದರ್ಶನ 2024–25’ಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಫಲ–ಪುಷ್ಪ ಪ್ರದರ್ಶನವನ್ನು ನಗರದ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಜನವರಿ 26 ರಿಂದ 28 ರವರೆಗೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.


    Provided by
    Provided by
    Provided by

    ಫಲಪುಷ್ಪ ಪ್ರದರ್ಶನದಲ್ಲಿ ಮಂಧರಗಿರಿ ಮರು ಸೃಷ್ಠಿ, ಸಿರಿಧಾನ್ಯ ಕಲಾಕೃತಿ, ತರಕಾರಿ ಕೆತ್ತನೆಯಲ್ಲಿ ಇಸ್ರೋಗೆ ನಮನ, ಜಾನುರ್ ಕಲೆಯಲ್ಲಿ ಹೊಮ್ಮುವ ರೈತ ಜೀವನ, ಮರಳು ಕಲಾಕೃತಿ, ಆಕರ್ಷಕ ವಿನ್ಯಾಸದ ಪುಷ್ಪ ಪ್ರದರ್ಶನ ವಿಶೇಷ ಆಕರ್ಷಣೆಯಾಗಿವೆ ಎಂದು ತಿಳಿಸಿದರು.

    ಕೃಷಿ ಇಲಾಖೆಯಿಂದ ಪಾರಂಪರಿಕ ಹಾಗೂ ಆಧುನಿಕ ಕೃಷಿ ಸಲಕರಣೆಗಳು ಮತ್ತು ಯಂತ್ರೋಪಕರಣಗಳ ಪ್ರದರ್ಶನ, ಮೀನುಗಾರಿಕೆ ಇಲಾಖೆಯಿಂದ ಆಕರ್ಷಕ ಅಕ್ವೇರಿಯಂ ಪ್ರದರ್ಶನ, ಪಶು ಸಂಗೋಪನೆ ಇಲಾಖೆಯಿಂದ ದೇಶಿ ತಳಿಗಳ ಪರಿಚಯ, ರೇಷ್ಮೆ ಇಲಾಖೆಯಿಂದ ರೇಷ್ಮೆ ಗೂಡಿನ ಕರಕುಶಲ ವಸ್ತುಗಳ ಪ್ರದರ್ಶನ, ಅರಣ್ಯ ಇಲಾಖೆಯಿಂದ ವನ್ಯ ಜಗತ್ತು ಪರಿಚಯ, ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಮಹಿಳಾ ಸಬಲೀಕರಣ ಹಾಗೂ ಗ್ರಾಮೀಣ ಅಭಿವೃದ್ಧಿ ಮಾದರಿ ಪ್ರದರ್ಶನ, ಸಾಮಾಜಿಕ ಅಭಿವೃದ್ಧಿಯಿಂದ ವಸತಿ ಶಿಕ್ಷಣ ಸಮುಚ್ಛಯ, ಗಂಗಾ ಕಲ್ಯಾಣ ಯೋಜನೆಗಳ ಅನಾವರಣ, ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ನಮ್ಮೂರ ರೇಷ್ಮೆ, ಗ್ರಂಥಾಲಯದಿಂದ ಜ್ಞಾನ ಭಂಡಾರ, ಪ್ರವಾಸೋದ್ಯಮ ಇಲಾಖೆಯಿಮದ ಪ್ರವಾಸಿ ತಾಣಗಳ ಛಾಯಚಿತ್ರ ಪ್ರದರ್ಶನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯ ಸೇವೆಗಳ ಪರಿಚಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಮ್ಮೂರ ಅಂಗನವಾಡಿ ಮಾದರಿ, ಶಿಕ್ಷಣ ಇಲಾಖೆಯಿಂದ ವಿಜ್ಞಾನ ಲೋಕ, ಬೆಸ್ಕಾಂ ವತಿಯಿಂದ ಗೃಹ ಜ್ಯೋತಿ ಮಾದರಿ ಪ್ರದರ್ಶನ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಿಂದ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

    ಫಲಪುಷ್ಪ ಪ್ರದರ್ಶನ ಅಂಗವಾಗಿ ಉದ್ಯಾನವನ ಮಾಡಲ್ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳ ಚಿತ್ರಕಲಾ ಸ್ಪರ್ಧೆಯನ್ನು ಸಹ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿಶೇಷ ವಿದ್ಯುತ್ ದೀಪಾಲಂಕಾರವನ್ನು ಮಾಡಲಾಗಿದ್ದು, ಫಲಪುಷ್ಪ ಪ್ರದರ್ಶನ ನೋಡಲು ಬರುವ ಎಲ್ಲರಿಗೂ ಉಚಿತ ಪ್ರವೇಶಾವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

    ಸುದ್ದಿಗೋಷ್ಠಿಯ ನಂತರ ಅಧಿಕಾರಿಗಳೊಂದಿಗೆ ಫಲಪುಷ್ಪ ಪ್ರದರ್ಶನದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದರು. ಪತ್ರಿಕಾಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಬಿ.ಸಿ. ಶಾರದಮ್ಮ, ತೋಟಗಾರಿಕೆ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಹಳ್ಳಕ್ಕೆ ಉರುಳಿದ ಕಾರು: ಒಬ್ಬ ವ್ಯಕ್ತಿ ಸಾವು

    October 21, 2025

    ತುಮಕೂರು | ರಾಜ್ಯದಮಟ್ಟದ ಕಬಡ್ಡಿ: ದಕ್ಷಿಣ ಕನ್ನಡ ತಂಡಕ್ಕೆ ಅವಳಿ ಪ್ರಶಸ್ತಿ

    October 20, 2025

    ಜಿಲ್ಲಾಧಿಕಾರಿ ಜೊತೆಗೆ ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಂಡ ಗೃಹ ಸಚಿವ ಪರಮೇಶ್ವರ್ !

    October 20, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌ | ಲಂಚ ಕೇಳಿದ ಆರೋಪ: ಗ್ರಾಮ ಲೆಕ್ಕಿಗ ಅಮಾನತು

    October 21, 2025

    ರೈತರ ಬಳಿ ಹಣ ಕೇಳಿರುವ ಆಡಿಯೋ ಆರೋಪದಡಿ ಔರಾದ್‌ ತಾಲ್ಲೂಕಿನ ವಡಗಾಂವ(ದೇ) ಗ್ರಾಮದ ಗ್ರಾಮ ಲೆಕ್ಕಿಗ ನಾಮದೇವ ಮೇತ್ರೆ ಅವರನ್ನು…

    ಹಳ್ಳಕ್ಕೆ ಉರುಳಿದ ಕಾರು: ಒಬ್ಬ ವ್ಯಕ್ತಿ ಸಾವು

    October 21, 2025

    ಮಳೆ ಸುರಿಯುತ್ತಿದ್ದರೂ ಪಟಾಕಿ ಖರೀದಿ ಜೋರು: ಎಲ್ಲೆಡೆ ಹಬ್ಬದ ಸಂಭ್ರಮ

    October 20, 2025

    ಕೇಳಿ ಬಂತು, ಮತ್ತೊಂದು ಹುಲಿಯ ಘರ್ಜನೆ: ಕೂಂಬಿಂಗ್ ಕಾರ್ಯಾಚರಣೆ ಆರಂಭ

    October 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.