ತುಮಕೂರು : ಏಪ್ರಿಲ್ 10ರಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಯಾದ ಜಿ. ಪರಮೇಶ್ವರ್ ಅವರ ಸವ್ಯಸಾಚಿ ಗ್ರಂಥ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು, ಅಖಿಲ ಕರ್ನಾಟಕ ಜಿ ಪರಮೇಶ್ವರ್ ಯುವ ಸಂಘದ ಪದಾಧಿಕಾರಿಗಳೆಲ್ಲರೂ ಭಾಗವಹಿಸುವಂತೆ ಸಂಘಟನೆಯ ರಾಜ್ಯಾಧ್ಯಕ್ಷ ಮಧುಕರ್ ರಂಗನಾಥ್ ಮನವಿ ಮಾಡಿದರು.
ಅಖಿಲ ಕರ್ನಾಟಕ ಪರಮೇಶ್ವರ್ ಸೇನೆ ರಾಜ್ಯಾದ್ಯಂತ ಇದೆ. ಎಲ್ಲಾ ಜಿಲ್ಲಾಧ್ಯಕ್ಷರು ತಾಲೂಕು ಅಧ್ಯಕ್ಷರು ಮತ್ತು ಸಾಮಾಜಿಕ ಜಾಲತಾಣ ಸದಸ್ಯರು . ಪರಮೇಶ್ವರ್ ಸೈನ್ಯದ ಪದಾಧಿಕಾರಿಗಳು ಹತ್ತನೇ ತಾರೀಕು ಸಿದ್ದಾರ್ಥ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆಯುವಂತಹ ಕಾರ್ಯಕ್ರಮಕ್ಕೆ ಎಲ್ಲರೂ ಭಾಗವಹಿಸಿ ಯಶಸ್ಸು ಗೊಳಿಸಬೇಕು ಎಂದರು.
ರಾಜ್ಯ ಕಾರ್ಯದರ್ಶಿ ಎನ್ ಕೆ ರವಿಕುಮಾರ್ ಮಾತನಾಡಿ, ಪರಮೇಶ್ವರ ರವರ ಗೌರವಗ್ರಂಥ ಸವ್ಯಸಾಚಿ ಬಿಡುಗಡೆ ಕಾರ್ಯಕ್ರಮಕ್ಕೆ ಎಲ್ಲ ಹಿರಿಯರು ಬುದ್ಧಿಜೀವಿಗಳು, ಪ್ರಗತಿಪರ ಚಿಂತಕರು, ವಿಚಾರವಂತರು ಕಾರ್ಯಕ್ರಮಕ್ಕೆ ಎಲ್ಲಾ ಜಾತ್ಯಾತೀತ ನಾಯಕರುಗಳು ಬಂದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ವರದಿ: ಎ.ಎನ್. ಪೀರ್ ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5