ಬೆಳಗಾವಿ: ಗ್ರಾಮದಲ್ಲಿ ಗುಟ್ಕಾ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳದಲ್ಲಿ ನಡೆದಿದೆ.
45 ವರ್ಷದ ಮಂಜುನಾಥ್ ಸುಣಗಾರ ಕೊಲೆಯಾದ ವ್ಯಕ್ತಿ. ಅಜಯ್ ಹಿರೇಮಠ ಎಂಬಾತ ಕೊಲೆ ಆರೋಪಿಯಾಗಿದ್ದು, ಕೃತ್ಯದ ಬಳಿಕ ಪರಾರಿಯಾಗಿದ್ದಾನೆ. ಇಬ್ಬರು ಕುಡಿದು ಪಾನ್ ಶಾಪ್ ಬಳಿ ನಿಂತಿದ್ದರು. ಗುಟ್ಕಾ ತಿಂದು ಉಗುಳಿದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಉಂಟಾಗಿದೆ.
ಈ ವೇಳೆ ಜಗಳ ವಿಕೋಪಕ್ಕೆ ಹೋಗಿ ಅಜಯ್ ಹಿರೇಮಠ ಮಂಜುನಾಥ್ ಅವರನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ್ದಲ್ಲದೇ ಆತನ ತಲೆ ಮೇಲೆ ಕಲ್ಲು ಎತ್ತಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಸ್ಥಳದಿಂದ ಆರೋಪಿ ಅಜಯ್ ಪರಾರಿಯಾಗಿದ್ದು, ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


