ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ ಗಣಪತಿಗಳ ವಿಸರ್ಜನಾ ಕಾರ್ಯಕ್ರಮ ಇತಿಹಾಸ ಸೃಷ್ಟಿಸಿದ್ದು, ಹಿಂದೂ- ಮುಸ್ಲಿಂ ಸಮುದಾಯದ ಭಾವೈಕ್ಯತೆಯ ಸಂಗಮಕ್ಕೆ ಸಾಕ್ಷಿಯಾಗಿದೆ.
ಏಕಕಾಲದಲ್ಲಿ 14 ಗಣಪತಿಗಳ ಕಲ್ಯಾಣಿಯಲ್ಲಿ ವಿಸರ್ಜನೆ ಮಾಡಲಾಯಿತು. ಕೊರಟಗೆರೆ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರಿಂದ ಸ್ನೇಹ ಮಿಲನದ ಕಾರ್ಯಕ್ರಮ ಎಂದರೆ ತಪ್ಪಾಗಲಾರದು. ಕಾರ್ಯಕ್ರಮದಲ್ಲಿ 250ಕ್ಕೂ ಹೆಚ್ಚು ಪೊಲೀಸ್ ನಿಯೋಜನೆ ಮಾಡಲಾಗಿತ್ತು.
ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಎಲ್ಲಾ ವಾರ್ಡ್ ಗಳ ಗಣಪತಿಗಳನ್ನ ಗಣಪತಿ ಹಬ್ಬದಿಂದ 11 ದಿನಗಳ ಕಾಲ ಪ್ರತಿಷ್ಠಾಪಿಸಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿ 11ನೇ ದಿನಕ್ಕೆ ವಿಸರ್ಜನೆ ಮಾಡಲು ನಿರ್ಧರಿಸಲಾಗಿತ್ತು. ಅದರಂತೆ ಇಂದು ಅದ್ದೂರಿಯಾಗಿ ಪಟ್ಟಣದ ರಾಜ ಬೀದಿಗಳಲ್ಲಿ ವಿವಿಧ ಸಂಸ್ಕೃತಿ ಕಾರ್ಯಕ್ರಮಗಳೊಂದಿಗೆ ಮೆರವಣಿಗೆಯನ್ನು ಮಾಡಿ. ಸಿಡಿ ಮದ್ದುಗಳನ್ನ ಸಿಡಿಸಿ ಸಿಹಿ ಹಂಚಿ ಸಾರ್ವಜನಿಕರು ಸಂಭ್ರಮಿಸಿದರು.
ಮುಸಲ್ಮಾನರು ಕೂಡ ಗಣೇಶ ಮೂರ್ತಿಗಳ ಮೆರವಣಿಗೆ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಕ್ತಾದಿಗಳಿಗೆ ಮಜ್ಜಿಗೆ ವಿತರಣೆ ಮಾಡಿ ಭಾವೈಕ್ಯತೆ ಬೆರೆದರು.
ಕೊರಟಗೆರೆಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ವೈಭವದ ಮೆರೆಗು ತಂದ ಗಣಪತಿಗಳ ವಿಸರ್ಜನಾ ಕಾರ್ಯಕ್ರಮ ಇದಾಗಿದ್ದು. ದಕ್ಷಿಣ ಕಾಶಿ ಎಂದೆ ಪ್ರಸಿದ್ಧವಾಗಿರುವ ಕೊರಟಗೆರೆ ಕ್ಷೇತ್ರದ ಶ್ರೀ ಕಟ್ಟೆ ಗಣಪತಿ, ಸತ್ಯ ಗಣಪತಿ, ಕೋಟೆ ಗಣಪತಿ ಇನ್ನು ಮುಂತಾದ ವಾರ್ಡ್ ಗಳಲ್ಲಿ ಪ್ರತಿಷ್ಠಾಪಿಸಿದ ಗಣಪತಿಗಳನ್ನು ಪಟ್ಟಣದ ತುಂಬೆಲ್ಲ ಸಡಗರ ಸಂಭ್ರಮದಿಂದ ಮೆರವಣಿಗೆ ನಡೆಸಲಾಯಿತು.
ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ತಾಲೂಕು ದಂಡಾಧಿಕಾರಿಗಳಾದ ಮಂಜುನಾಥ್, ಸರ್ಕಲ್ ಇನ್ಸ್ಪೆಕ್ಟರ್ ಅನಿಲ್, ಸಬ್ ಇನ್ಸ್ಪೆಕ್ಟರ್ ಚೇತನ್ ಎ.ಎಸ್. ಐಗಳಾದ ಮಂಜುನಾಥ್, ಯೋಗೇಶ್ ಸೇರದಂತೆ ಸಿಬ್ಬಂದಿಗಳು, ಎಲ್ಲ ಗಣಪತಿಗಳ ಸೇವಾ ಸಮಿತಿಯ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರುಗಳು, ಸಂಘ ಸಂಸ್ಥೆಗಳು, ಭಕ್ತಾದಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296