ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಘಟಕದ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಮೊದಲನೇ ವರ್ಷದ ಗಣೇಶೋತ್ಸವವನ್ನು ಆಚರಣೆ ಮಾಡಲಾಯಿತು.
ಗಣೇಶೋತ್ಸವ ಮೆರವಣಿಗೆಯಲ್ಲಿ ಲೌಡ್ ಸ್ಪೀಕರ್ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಮೆರವಣಿಯನ್ನು ಪೊಲೀಸರು ತಡೆದು ನಿಲ್ಲಿಸಿದ್ದು, ಭಾರತದ ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ರಾಜ್ಯ ಸರಕಾರದ ಆದೇಶದಂತೆ ಲಘು ಶಬ್ದ ಬಳಕೆ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ವೇಳೆ ಕಾಂಗ್ರೆಸ್ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಡಿಗೆ ವೇಳೆ ಲೌಡ್ ಸ್ಪೀಕರ್ ಗೆ ಅನುಮತಿ ನೀಡಿದ್ದೀರಿ ಆದರೆ ನಮ್ಮನ್ನೇಕೆ ತಡೆಯುತ್ತಿದ್ದೀರಿ ಎಂದು ಮುಖಂಡರು, ಕಾರ್ಯಕರ್ತರ ಪ್ರಶ್ನಿಸಿದ್ದು, ಇದರಿಂದಾಗಿ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು.
ಘಟನೆಯನ್ನು ಖಂಡಿಸಿ ಸ್ಥಳದಲ್ಲೇ ಪ್ರತಿಭಟನೆಗೆ ಮುಂದಾದಾಗ ಸಂಘಟಕರ ಜೊತೆ ಮಾತನಾಡಿದ ಪೊಲೀಸರು ಲೌಡ್ ಸ್ಪೀಕರ್ ನಿಯಮಗಳ ಬಗ್ಗೆ ಮನವರಿಕೆ ಮಾಡಿಸಿದ್ದು, ಬಳಿಕ ಡೋಲು, ನೃತ್ಯಗಳ ಮೂಲಕ ಮೆರವಣಿಗೆ ಮುಂದುವರೆಸಲಾಯಿತು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz