nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    August 8, 2026

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ
    • ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
    • ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿ ಉದ್ಘಾಟನೆ
    ಜಿಲ್ಲಾ ಸುದ್ದಿ December 26, 2024

    ಗಂಗಾಧರ್ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿ ಉದ್ಘಾಟನೆ

    By adminDecember 26, 2024No Comments3 Mins Read
    gangadhar rao deshpande

    ಬೆಳಗಾವಿ:  “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗುರುವಾರ (ಡಿ.26) ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ‌ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

    ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗೆಯಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ,  ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ ಉದ್ಯಾನವನ ನಿರ್ಮಿಸಲಾಗಿದೆ.

    ಈ ಸಂದರ್ಭದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಎಚ್.ಕೆ ಪಾಟೀಲ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು ವೀರಪ್ಪ ಮೊಯ್ಲಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್(ರಾಜು)ಸೇಠ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣಿ ದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ , ಮಹಾನಗರ ಪಾಲಿಕೆ ಆಯುಕ್ತರಾದ ಶುಭಾ. ಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಜಂಟಿ ನಿರ್ದೇಶಕ ಕೆ. ಎಚ್ ಚನ್ನೂರು, ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹಾಜರಿದ್ದರು.

    ಸ್ವಾತಂತ್ರ್ಯ ಹೋರಾಟದಲ್ಲಿ ಗಂಗಾಧರ್ ರಾವ್ ದೇಶಪಾಂಡೆ ಪಾತ್ರ:

    ಕರ್ನಾಟಕ ಸಿಂಹ ಎಂದೇ ಖ್ಯಾತಿ ಪಡೆದಿದ್ದ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದ ಹೆಮ್ಮೆಯ ಸುಪುತ್ರ, ಕೆಚ್ಚೆದೆಯ ಹೋರಾಟಗಾರ ಗಂಗಾಧರರಾವ್ ದೇಶಪಾಂಡೆ ಅವರೇ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಯಲು ಮತ್ತು ಗಾಂಧೀಜಿ ಅಧ್ಯಕ್ಷತೆ ವಹಿಸಲು ಕಾರಣೀಕರ್ತರು.

    ಗಂಗಾಧರರಾವ್ ಅವರ ಮುತ್ಸದ್ದೀತನ, ಸಮರ್ಥ ನಾಯಕತ್ವದ ಫಲವಾಗಿ ಬೆಳಗಾವಿ ಇತಿಹಾಸದಲ್ಲಿ ದಾಖಲಾಯಿತು. ಅಂದು ಕಾಂಗ್ರೆಸ್ ಪಕ್ಷದಲ್ಲಿ ಜವಾಹರಲಾಲ್ ನೆಹರು ಅವರಿಗೆ ಸರಿಸಮಾನವಾದ ಅಧಿಕಾರ ಹೊಂದಿದ್ದರು. ಗಂಗಾಧರರಾವ್ ಅವರು ಮನಸ್ಸು ಮಾಡಿದ್ದರೆ ಸ್ವಾತಂತ್ರ್ಯಾ ನಂತರ ಭಾರತ ಸರ್ಕಾರದಲ್ಲಿ ಪ್ರಮುಖ ಸ್ಥಾನ ಪಡೆಯುತ್ತಿದ್ದರು. ಆದರೆ, ನನ್ನ ಹೋರಾಟ ಮತ್ತು ಸೇವೆ ದೇಶದ ಸ್ವಾತಂತ್ರ್ಯಕ್ಕೆ ಮಾತ್ರ ಸಿಮೀತ ಎಂದು ಹೇಳಿ ಆಧ್ಯಾತ್ಮಿಕತೆ ಕಡೆಗೆ ಸಾಗಿದ ನಿಸ್ವಾರ್ಥಿ.

    ವೈಯಕ್ತಿಕ ವಿವರ:

    ಬೆಳಗಾವಿ ತಾಲ್ಲೂಕಿನ ಹುದಲಿ ಗ್ರಾಮದ ಶ್ರೀಮಂತ ಮನೆತನದ ಬಾಲಕೃಷ್ಣ ಮತ್ತು ರಾಧಾಬಾಯಿ ದಂಪತಿಗಳ‌ ಉದರದಲ್ಲಿ 1871ರ ಮಾರ್ಚ 31ರಂದು ಜನಿಸಿದ ಗಂಗಾಧರರಾವ್ ದೇಶಪಾಂಡೆ ಅವರು, ಮಾಧ್ಯಮಿಕ ಶಿಕ್ಷಣವನ್ನು ಬೆಳಗಾವಿ ಸರ್ದಾರ್ಸ್ ಹೈಸ್ಕೂಲ್ ನಲ್ಲಿ ಪಡೆದಿದ್ದಾರೆ. ಪುಣೆ ಡೆಕ್ಕನ್ ಕಾಲೇಜಿನಲ್ಲಿ ಪದವಿ ಮತ್ತು ಬಿಎ ಎಎಲ್ ಬಿ ಪೂರ್ಣಗೊಳಿಸಿದ್ದಾರೆ. ಪತ್ನಿ ಲಕ್ಷ್ಮೀಬಾಯಿ, ಪುತ್ರ ಬಾಲಕೃಷ್ಣ. 1960ರ ಜುಲೈ‌ 30ರಂದು ಗಂಗಾಧರಾವ್ ಅವರು ನಿಧನರಾದರು.

    1922ರಲ್ಲಿ ಚರಕ ಸಂಘ, 1937ರಲ್ಲಿ ಹುದಲಿಯಲ್ಲಿ ಗಾಂಧಿಸೇವಾ ಸಂಘ ಸ್ಥಾಪಿಸಿದ್ದರು. ಈಗಲೂ‌ ಖಾದಿ ಗ್ರಾಮೋದ್ಯೋಗ ನೂರಾರು ಜನರಿಗೆ ಉದ್ಯೋಗ ಕೊಟ್ಟಿದೆ. 1920ರಲ್ಲಿ ಬೆಳಗಾವಿಯಲ್ಲಿ ಮುನ್ಸಿಪಲ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆರಂಭದಲ್ಲಿ ಗಂಗಾಧರಾವ್ ಅವರು, ಗೋಪಾಲಕೃಷ್ಣ ಗೋಕಲೆ, ಬಾಲಗಂಗಾಧರ ಟಿಳಕರ ಅನುಯಾಯಿಯಾಗಿದ್ದರು. ಅವರು ಕಾಲವಾದ ಬಳಿಕ‌ ಮಹಾತ್ಮಾ ಗಾಂಧೀಜಿ ಸಂಪರ್ಕಕ್ಕೆ ಬರುತ್ತಾರೆ. ಗಾಂಧೀಜಿ ಐವರು ಅತ್ಯಾಪ್ತರಲ್ಲಿ ಇವರು ಒಬ್ಬರಾಗುತ್ತಾರೆ. ಅಪ್ಪಟ ಗಾಂಧಿವಾದಿಯಾಗಿದ್ದ ಗಂಗಾಧರರಾವ್ ಖಾದಿ ಬಟ್ಟೆಯನ್ನೇ ಧರಿಸುತ್ತಿದ್ದರು. ಶ್ರೀಮಂತಿಕೆ‌ ಇದ್ದರೂ ಸರಳ ಜೀವನ ನಡೆಸಿದ ಹೆಗ್ಗಳಿಕೆ ಇವರದ್ದು.

    ಗಾಂಧೀಜಿ ಮನವೊಲಿಸಿದ ದೇಶಪಾಂಡೆ:

    ಮಹಾತ್ಮ ಗಾಂಧೀಜಿ ಹಿಂದಿನ ಅಧಿವೇಶನದಲ್ಲಿ ಭಾಗಿಯಾಗಿರಲಿಲ್ಲ. ಅಲ್ಲದೇ ಅಧ್ಯಕ್ಷತೆ ವಹಿಸಲು ನಿರಾಕರಿಸಿದ್ದರು.‌ ನಾನು ಅಧ್ಯಕ್ಷ ಇರಲಿ, ಬಿಡಲಿ. ಜನ ನನ್ನ‌ ಚಳುವಳಿಯಲ್ಲಿ ಪಾಲ್ಗೊಳ್ಳುತ್ತಾರೆ ಎನ್ನುತ್ತಾರೆ. ಆದರೆ, ಗಂಗಾಧರರಾವ್ ಅವರು‌ ಮಾತ್ರ ಬಿಡಲಿಲ್ಲ‌. ಗಾಂಧೀಜಿ ಮನವೊಲಿಸಿ ಅಧ್ಯಕ್ಷರಾಗುವಂತೆ ಮಾಡಿದ್ದು ಇತಿಹಾಸ. ಬೆಳಗಾವಿ ಅಧಿವೇಶನದಲ್ಲೂ ಜವಾಹರಲಾಲ್ ನೆಹರು ಮತ್ತು ಗಂಗಾಧರಾವ್ ದೇಶಪಾಂಡೆ ಪ್ರಧಾನ ಕಾರ್ಯದರ್ಶಿಯಾಗಿದ್ದರು.

    ಹುಟ್ಟೂರಿಗೂ ಗಾಂಧೀಜಿ ಕರೆಸಿದ್ದರು:

    ತಮ್ಮ ಹುಟ್ಟೂರು ಹುದಲಿಗೂ ಗಾಂಧೀಜಿ‌ ಅವರನ್ನು ಗಂಗಾಧರಾವ್ ಕರೆಸಿದ್ದರು. ಏಳು‌ ದಿನ ಅಲ್ಲಿಯೇ ಬಾಪು ವಾಸ್ತವ್ಯ ಹೂಡಿದ್ದರು. ಗಾಂಧಿ ಸೇವಾ ಸಂಘದ ಸಮ್ಮೇಳನ ಏರ್ಪಡಿಸಲಾಗಿತ್ತು. ಗಾಂಧೀಜಿ‌ ಅವರ ಜೊತೆಗೆ ಡಾ.ಬಾಬು ರಾಜೇಂದ್ರಪ್ರಸಾದ, ಅಬ್ದುಲ್ ಗಫಾರ್‌ಖಾನ್ ಗಾಂಧಿ, ಸರ್ದಾರ್ ವಲ್ಲಭಬಾಯಿ ಪಟೇಲ್, ಶೌಕತ್ ಅಲಿ, ಸರೋಜಿನಿ ನಾಯ್ಡು, ಹಿರಿಯ ಸಾಹಿತಿಗಳಾದ ಬೆಟಗೇರಿ ಕೃಷ್ಣಶರ್ಮ, ಜಿ. ನಾರಾಯಣ ಸೇರಿ ಅನೇಕ‌ ನಾಯಕರ ದಂಡೇ ಹುದಲಿಗೆ ಬಂದಿತ್ತು.

    ಇನ್ನು ಭಾಷಾವಾರು ಪ್ರಾಂತ ರಚನೆ ವೇಳೆ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಅಂತಾ ಗಂಗಾಧರರಾವ್ ದೇಶಪಾಂಡೆ ಧ್ವನಿ ಎತ್ತಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    August 8, 2026

    ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಎಂ.ಪಿ.ಪಿ ತೆಕ್ನಾಲಜಿ ಹಾಗೂ ಹೋಮ್ ಅಸೋಸಿಯೇಟ್ಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಖಾಲಿ ಇರುವ ವಿವಿಧ…

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.