ಬೆಂಗಳೂರು: ನಗರದ ಕೋರಮಂಗಲ ಪೊಲೀಸರು ಈಗ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ವಿಶಾಖಪಟ್ಟಣಂನಿಂದ ಗಾಂಜಾ ತಂದು ರಾಜಧಾನಿಯಲ್ಲಿ ಸಪ್ಲೈ ಮಾಡ್ತಿದ್ದ ಸಂದರ್ಭದಲ್ಲಿ ಪೋಲೀಸರ ಕೈಗೆ ಸಿಕ್ಕಿದ್ದಾರೆ ಎನ್ನಲಾಗಿದೆ. ನಗರದ ಕೋರಮಂಗಲ ವ್ಯಾಪ್ತಿಯ ಪೋಲಿಸ್ ಠಾಣೆಯಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 40 ಲಕ್ಷ ಮೌಲ್ಯದ 102 ಕೆ.ಜಿ 200 ಗ್ರಾಂ ಗಾಂಜಾ, ಬೈಕ್ ಜಪ್ತಿ ಮಾಡಲಾಗಿದೆ.
ಬಂಧಿತ ವ್ಯಕ್ತಿಗಳನ್ನು ರಮೇಶ್, ಮಂಜುನಾಥ್, ಅಭಿಲಾಶ್, ಮೂರ್ತಿ,ಶಿವರಾಜ್ ಎಂದು ತಿಳಿದುಬಂದಿದೆ.ಈಗ ಬಂಧಿತರ ವಿರುದ್ಧ ಕೋರಮಂಗಲ, ಹೆಚ್ ಎಸ್ ಆರ್ ಲೇಔಟ್, ಬೇಗೂರು, ಕೋಣನಕುಂಟೆ, ಕೆಆರ್ ಪುರಂ ಠಾಣೆಗಳಲ್ಲಿ ಗಾಂಜಾ, ಕೊಲೆ ಯತ್ನ, ಸರಗಳ್ಳತನ ಪ್ರಕರಣಗಳು ದಾಖಲಾಗಿವೆ.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5