ಮಧುಗಿರಿ: ತಾಲೂಕು ದಂಡಾಧಿಕಾರಿಗಳ ಕಚೇರಿಯ ಸುತ್ತಮುತ್ತ ಬೆಳೆದಿದ್ದ ಗಿಡಗಂಟಿಗಳನ್ನು ತಹಶೀಲ್ದಾರ್ ಸುರೇಶ್ ಆಚಾರ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
ಈ ಸ್ವಚ್ಛತಾ ಕಾರ್ಯದಲ್ಲಿ ಕಚೇರಿ ಸಿಬ್ಬಂದಿ ಹಾಗೂ ಪುರಸಭೆಯ ಪೌರ ಕಾರ್ಮಿಕರು ಭಾಗಿಯಾಗುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಐ.ಡಿಹಳ್ಳಿ ಆರ್.ಐ ನಾರಾಯಣಪ್ಪ, ಕಸಬಾ ವಿ.ಎ ಪರಮೇಶ್, ಸಿಬ್ಬಂದಿಗಳಾದ ಸುನಿಲ್, ರವಿ, ಶಿವಶಂಕರ್ ನಾಯಕ್, ಮತ್ತು ಪುರಸಭಾ ಹೆಲ್ತ್ ಇನ್ಸ್ಪೆಕ್ಟರ್ ಬಾಲಾಜಿ ಮತ್ತು ಗ್ರಾಮ ಸಹಾಯಕರು ಹಾಗೂ ಪುರಸಭೆ ಪೌರ ಕಾರ್ಮಿಕರು ಈ ಸಂದರ್ಭ ಇದ್ದರು.
ವರದಿ: ಅಬಿದ್, ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy