nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ

    October 19, 2025

    ಆರ್‌ ಎಸ್‌ ಎಸ್  ಶತಮಾನೋತ್ಸವ: ತುಮಕೂರಿನಲ್ಲಿ ಪಥ ಸಂಚಲನ

    October 19, 2025

    ಸಹಕಾರ ಕ್ಷೇತ್ರ: ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆ ಜಾರಿಗೆ ತರಲಾಗಿದೆ: ಕೆ.ಎನ್.ರಾಜಣ್ಣ

    October 19, 2025
    Facebook Twitter Instagram
    ಟ್ರೆಂಡಿಂಗ್
    • ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ
    • ಆರ್‌ ಎಸ್‌ ಎಸ್  ಶತಮಾನೋತ್ಸವ: ತುಮಕೂರಿನಲ್ಲಿ ಪಥ ಸಂಚಲನ
    • ಸಹಕಾರ ಕ್ಷೇತ್ರ: ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆ ಜಾರಿಗೆ ತರಲಾಗಿದೆ: ಕೆ.ಎನ್.ರಾಜಣ್ಣ
    • ಶ್ರೀ ಶಂಭುಲಿಂಗೇಶ್ವರ ಸ್ವಾಮಿ ದೇವಸ್ಥಾನ: ಲಿಂಗಕ್ಕೆ ಕೊಳಗ ಪ್ರತಿಷ್ಠಾಪನೆ
    • ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ: ಕತ್ತಲಿನಿಂದ ಬೆಳಕಿನ ಕಡೆಗೆ
    • ಸಿದ್ದರಾಮಯ್ಯ ಅವರು ಐದು ವರ್ಷ ಪೂರೈಸುತ್ತಾರೆ: ಶಾಸಕ ಅನಿಲ್ ಚಿಕ್ಕಮಾದು
    • ಬೆಂಗಳೂರು | ಸಂಚಾರ ಗಸ್ತು ವಾಹನಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ
    • ಮಕ್ಕಳ ಪ್ರತಿಭೆಗೆ ವೇದಿಕೆ: ತುಮಕೂರಿನಲ್ಲಿ ನ.22ರಂದು ಚಿನ್ನರ ಚಪ್ಪರ: ನೋಂದಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಂಸ್ಕೃತಿಕ ಹಾಗೂ ಚಾರಿತ್ರಿಕ ಘಟನೆಗಳ ಆಧಾರಿತ ಕಾರ್ಯಕ್ರಮಗಳಿಗೆ ಮಹತ್ವ ನೀಡಿ: ಸಚಿವ ಸಂತೋಷ ಲಾಡ್
    ರಾಜ್ಯ ಸುದ್ದಿ January 16, 2025

    ಸಾಂಸ್ಕೃತಿಕ ಹಾಗೂ ಚಾರಿತ್ರಿಕ ಘಟನೆಗಳ ಆಧಾರಿತ ಕಾರ್ಯಕ್ರಮಗಳಿಗೆ ಮಹತ್ವ ನೀಡಿ: ಸಚಿವ ಸಂತೋಷ ಲಾಡ್

    By adminJanuary 16, 2025No Comments2 Mins Read
    minister santosh lad

    ಹುಬ್ಬಳ್ಳಿ: ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಹಾಗೂ ಚಾರಿತ್ರಿಕ ಘಟನೆಗಳನ್ನು ಆಧರಿಸಿದ ಕಾರ್ಯಕ್ರಮಗಳಿಗೆ ಮಹತ್ವ ನೀಡಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.

    ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.


    Provided by
    Provided by
    Provided by

    ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಶಾಲೆಗಳಲ್ಲಿ ಬಸವಣ್ಣನವರು, ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಸೇರಿದಂತೆ ರಾಷ್ಟ್ರದ ಮಹಾನ ನಾಯಕರ ಕುರಿತಾಗಿ ಭಾಷಣ ಸ್ಪರ್ಧೆಯನ್ನು ನಡೆಸಬೇಕು. ಅತ್ಯುತ್ತಮವಾಗಿ ಭಾಷಣ ಮಾಡುವ ಆರು ಜನ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ವೇದಿಕೆಯಲ್ಲಿ ಸನ್ಮಾನಿಸಲಾಗುವುದು. ಅಲ್ಲದೇ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದ ವಿದ್ಯಾರ್ಥಿಗಳ ತಂಡದಿಂದ ಕಾರ್ಯಕ್ರಮ ಆಯೋಜನೆ ಮಾಡಬೇಕಾಗುತ್ತದೆ. ಅವರಿಗೂ ಸಹ ಉತ್ತಮ ವೇದಿಕೆಯನ್ನು ಕಲ್ಪಿಸಿದಂತಾಗುವುದು. ಮೂರು ಕಡೆಗಳಲ್ಲಿ ವೇದಿಕೆ ನಿರ್ಮಾಣ ಮಾಡಿ, ವಿವಿಧ ಕಾರ್ಯಕ್ರಮಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಇತಿಹಾಸದ ಘಟನೆಗಳನ್ನು ಮೆಲುಕು ಹಾಕುವಂತಹ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಜಾನಪದ ಶೈಲಿಯ ಕಾರ್ಯಕ್ರಮಗಳಿಗೂ ಅವಕಾಶ ಒದಗಿಸಬೇಕಾಗುತ್ತದೆ. ವಿಭಿನ್ನ ಹಾಗೂ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಒತ್ತು ನೀಡಬೇಕು. ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಗಣರಾಜ್ಯೋತ್ಸವಕ್ಕೆ ಮೆರುಗು ತರಬೇಕಾಗುತ್ತದೆ. ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಮಾತನಾಡಿ, ಗಣರಾಜ್ಯೋತ್ಸವವನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಬೇಕಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಸಂದೇಶ ರವಾನಿಸಬೇಕಾಗುತ್ತದೆ ಎಂದು ತಿಳಿಸಿದರು.

    ಸಭೆಯಲ್ಲಿ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಡಿಸಿಪಿ ಮಹಾನಿಂಗ ನಂದಗಾವಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

    ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಸ್ವಾಗತಿಸಿದರು. ಹುಬ್ಬಳ್ಳಿ ಶಹರ ತಹಶೀಲ್ದಾರ ಕಲಗೌಡ ಪಾಟೀಲ ವಂದಿಸಿದರು.  ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧುಕಾರಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೆಂಗಳೂರು | ಸಂಚಾರ ಗಸ್ತು ವಾಹನಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ

    October 19, 2025

    ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 16, 2025

    ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

    October 16, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ

    October 19, 2025

    ತುಮಕೂರು: ಈದ್ಗಾ ಮೈದಾನ, ರಸ್ತೆಯಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ? ಇದನ್ನು ತಡೆಯಲು ಸಾಧ್ಯವಿದೆಯೇ? ಎಂದು ಶಾಸಕ ಕೆ.ಎನ್.ರಾಜಣ್ಣ…

    ಆರ್‌ ಎಸ್‌ ಎಸ್  ಶತಮಾನೋತ್ಸವ: ತುಮಕೂರಿನಲ್ಲಿ ಪಥ ಸಂಚಲನ

    October 19, 2025

    ಸಹಕಾರ ಕ್ಷೇತ್ರ: ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆ ಜಾರಿಗೆ ತರಲಾಗಿದೆ: ಕೆ.ಎನ್.ರಾಜಣ್ಣ

    October 19, 2025

    ಶ್ರೀ ಶಂಭುಲಿಂಗೇಶ್ವರ ಸ್ವಾಮಿ ದೇವಸ್ಥಾನ: ಲಿಂಗಕ್ಕೆ ಕೊಳಗ ಪ್ರತಿಷ್ಠಾಪನೆ

    October 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.