ಗುಬ್ಬಿ: ತಾಲ್ಲೂಕಿನ ಗೊಲ್ಲಹಳ್ಳಿ ಮಠದಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
ಮುಂಜಾನೆಯೇ ಹೋಮ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಶ್ರೀ ಸಿದ್ದಲಿಂಗಶ್ವರ ಸ್ವಾಮಿ ಅವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು . ಮಧ್ಯಾಹ್ನ 1 ಗಂಟೆಗೆ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಅವರ ತೆರನ್ನು ಸಾವಿರಾರು ಭಕ್ತರ ಸಮ್ಮುಖದಲ್ಲಿ ಎಳೆಯಲಾಯಿತು.
ಜಾತ್ರಾ ಮಹೋತ್ಸವದಲ್ಲಿ ಗೋಡೆಕೆರೆ ಶ್ರೀ ಮೃತಂಜಯ ಸ್ವಾಮೀಜಿ ಗೊಲ್ಲಹಳ್ಳಿಯ ವಿಭವ ವಿದ್ಯಾಶಂಕರ ಸ್ವಾಮೀಜಿ ತೆವಡೆ ಹಳ್ಳಿ ಮಠದ ಗೊಸಲ ಚನ್ನಬಸವಶ್ವರ ಸ್ವಾಮೀಜಿ, ಮುಖಂಡರಾದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎನ್.ಸಿ.ಪ್ರಕಾಶ್, ಎಸ್.ಡಿ.ದಿಲೀಪ್ ಕುಮಾರ್, ಪತ್ರೆ ದಿನೇಶ್, ಕಿಡಿಗಣ್ಣಪ್ಪ, ಯತೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy