nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025
    Facebook Twitter Instagram
    ಟ್ರೆಂಡಿಂಗ್
    • ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ
    • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
    • ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು
    • ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್
    • ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ
    • ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರರು ಬಿಡುಗಡೆ: ಹೂವಿನ ಹಾರ ಹಾಕಿ ಸ್ವಾಗತ
    • ತುಮಕೂರು ಜಿಲ್ಲೆಯ ಹತ್ತು ತಾಲ್ಲೂಕು ಕಛೇರಿಗೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರಿಂದ ದಾಳಿ!
    • ತೋಟಗಾರಿಕೆ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಿ: ಡಾ.ಚಂದ್ರಶೇಖರ್ ಬಿ.ಎಂ.
    ತುಮಕೂರು January 22, 2025

    ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಿ: ಡಾ.ಚಂದ್ರಶೇಖರ್ ಬಿ.ಎಂ.

    By adminJanuary 22, 2025No Comments2 Mins Read
    chandra shekhar

    ತುಮಕೂರು: ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ, ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ. ಚಂದ್ರಶೇಖರ್ ತಿಳಿಸಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಬೆಳ್ಳಾವಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾವಿ ಗ್ರಾಮ ಪಂಚಾಯತಿ ಹಾಗೂ ಶ್ರೀದೇವಿ ಮೆಡಿಕಲ್ ಕಾಲೇಜು ಆಸ್ಪತ್ರೆ ಗ್ರಾಮೀಣ ತರಬೇತಿ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಸಿಂಗೀಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ “ಉಚಿತ ಆರೋಗ್ಯ ತಪಾಸಣೆ ಮತ್ತು ಕ್ಷಯರೋಗ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆರೋಗ್ಯಕ್ಕಾಗಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.


    Provided by

    ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮೋಹನ್ ದಾಸ್ ಮಾತನಾಡಿ, ಕ್ಷಯರೋಗ ಸಂಪೂರ್ಣವಾಗಿ ಗುಣಪಡಿಸಬಹುದಾದ ಒಂದು ರೋಗವಾಗಿದೆ. ಭಾರತವನ್ನು ಕ್ಷಯ ಮುಕ್ತವನ್ನಾಗಿಸಲು ಕರ್ನಾಟಕ ಸರ್ಕಾರ ನೂರು ದಿನಗಳ ಕ್ಷಯ ಮುಕ್ತ ಅಭಿಯಾನವನ್ನು ಹಮ್ಮಿಕೊಂಡಿದ್ದು, 2 ವಾರಕ್ಕಿಂತ ಹೆಚ್ಚು ಕೆಮ್ಮು ಅಥವಾ ಜ್ವರ, ತೂಕದಲ್ಲಿ ಇಳಿಕೆ, ಕಫದಲ್ಲಿ ರಕ್ತ ಬೀಳುವುದು, ಹಸಿವು ಆಗದೇ ಇರುವುದು, ರಾತ್ರಿ ವೇಳೆ ಬೆವರುವುದು, ದೇಹದಲ್ಲಿ ಗಂಟುಗಳು ಕಂಡು ಬಂದಲ್ಲಿ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಸಬೇಕು. ಪ್ರತಿಯೊಬ್ಬರಿಗೂ ಕ್ಷಯ ರೋಗದ ಕುರಿತು ಜಾಗೃತಿಯನ್ನು ಮೂಡಿಸುವ ಮುಖಾಂತರ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಕ್ಷಯ ಮುಕ್ತ ಗ್ರಾಮವನ್ನಾಗಿಸಲು ಸಹಕರಿಸಬೇಕು ಎಂದು ತಿಳಿಸಿದರು.

    ಶ್ರೀದೇವಿ ಮೆಡಿಕಲ್ ಕಾಲೇಜು ಆಸ್ಪತ್ರೆ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ರಂಗಸ್ವಾಮಿ ಮಾತನಾಡಿ, ಕುಷ್ಟ ರೋಗ ಹಾಗೂ ಅಸಾಂಕ್ರಾಮಿಕ ರೋಗಗಳ ಕುರಿತು ಮಾಹಿತಿ ನೀಡಿದರು.

    ಬೆಳ್ಳಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಧಾಕೃಷ್ಣ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿರುವ ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
    ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ಉಪನ್ಯಾಸಕ ಡಾ.ಮಂಜುನಾಥ್ ಟಿ.ಎ. ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ಈ ಕಾರ್ಯಕ್ರಮದಲ್ಲಿ ಬೆಳ್ಳಾವಿಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕಮ್ಮ ದೊಡ್ಡಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ವಸಂತ ಹಾಗೂ ರಮೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಓಬಳಯ್ಯ, ಬೆಂಗಳೂರಿನ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಪಿಜಿಡಿಎಚ್ಪಿ ಕೋರ್ಸಿನ ಉಪನ್ಯಾಸಕರುಗಳಾದ ಡಾ.ಎಂ. ಬೃಂದಾಲಕ್ಷಿö್ಮ, ತನ್ವೀರ್ ಅಹ್ಮದ್ ಖಾನ್, ಶ್ರೀದೇವಿ ಮೆಡಿಕಲ್ ಕಾಲೇಜಿನ ವೈದ್ಯರು ಮತ್ತು ಸಿಬ್ಬಂದಿ, ಗ್ರಾಮ ಪಂಚಾಯಿತಿಯ ಹಾಲಿ ಸದಸ್ಯರು ಮತ್ತು ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    ಕಾರ್ಯಕ್ರಮದ ನಿರೂಪಣೆ ಪಿಜಿಡಿಎಚ್ಪಿ ಪ್ರಶಿಕ್ಷಣಾರ್ಥಿ ಗುರುರಾಜ್ ಎಚ್.ಎಮ್. ನೆರವೇರಿಸಿದರು. ಪಿಜಿಡಿಎಚ್ಪಿ ಪ್ರಶಿಕ್ಷಣಾರ್ಥಿಗಳಾದ ಜಯಶೀಲ ಹಿರೇಮಠ್, ಅಸ್ಲಾಂ ಅಬಾಲೆ, ರೇಖಾ ಡಿ.ಎನ್., ಸಹ ಪ್ರಶಿಕ್ಷಣಾರ್ಥಿಗಳು, ಆರೋಗ್ಯ ನಿರೀಕ್ಷಣಾಧಿಕಾರಿ ಜಗದೀಶ್ ಮತ್ತು ಲಕ್ಷ್ಮೀ ಸಮುದಾಯ ಆರೋಗ್ಯ ಅಧಿಕಾರಿಗಳು, ಶೋಭಾ ಆಶಾ ಕಾರ್ಯಕರ್ತೆ ಮತ್ತು ಇತರೆ ಆಶಾ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ

    June 12, 2025

    ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರರು ಬಿಡುಗಡೆ: ಹೂವಿನ ಹಾರ ಹಾಕಿ ಸ್ವಾಗತ

    June 12, 2025
    Our Picks

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಸಿಕ್ಕಿಂ ಭೂಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಐದು ಸೇನಾ ಸಿಬ್ಬಂದಿಯ ಪೈಕಿ ಒಬ್ಬರ ಮೃತದೇಹ ಪತ್ತೆ

    June 9, 2025

    ಚುನಾವಣಾ ಆಯೋಗಕ್ಕೆ ಪ್ರಶ್ನೆ ಕೇಳಿದ್ರೆ ಬಿಜೆಪಿ ಪ್ರತಿಕ್ರಿಯಿಸುತ್ತಿದೆ: ಸಂಜಯ್ ರಾವತ್ ಕಿಡಿ

    June 9, 2025

    ರೈಲಿನಿಂದ ಹಳಿಯ ಮೇಲೆ ಬಿದ್ದು ಐವರು ಪ್ರಯಾಣಿಕರು ಸಾವು!

    June 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ.…

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025

    ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್

    June 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.