ಕೊರಟಗೆರೆ: ತುಮಕೂರು ಜಿಲ್ಲೆಯ ಭೀಮ್ ಆರ್ಮಿ ಸಂಘಟನೆಯ ನೂತನ ಜಿಲ್ಲಾಧ್ಯಕ್ಷರಾಗಿ ಕೊರಟಗೆರೆ ಗೋಪಾಲಕೃಷ್ಣ ಅವರು ಅಧಿಕೃತವಾಗಿ ನೇಮಕಗೊಂಡಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಲಾಯಿತು. ಇದೇ ವೇಳೆ ಸಂಘಟನೆಯ ಭವಿಷ್ಯದ ಗುರಿ ಮತ್ತು ಉದ್ದೇಶಗಳ ಕುರಿತು ಅವರು ಸವಿಸ್ತಾರವಾಗಿ ಮಾತನಾಡಿದರು.
ದಲಿತರ ಪರ ಹೋರಾಟ ನಡೆಸಿ ಅವರಿಗೆ ನ್ಯಾಯ ಕೊಡಿಸುವುದೇ ಭೀಮ್ ಆರ್ಮಿ ಸಂಘಟನೆಯ ಮೂಲ ಉದ್ದೇಶವಾಗಿದೆ ಎಂದು ಗೋಪಾಲಕೃಷ್ಣ ತಿಳಿಸಿದರು ಅಲ್ಲದೇ, ಭೀಮ್ ಆರ್ಮಿ ಸಂಘಟನೆಯ ಹೆಸರನ್ನು ಯಾರಾದರೂ ದುರುಪಯೋಗಪಡಿಸಿಕೊಂಡರೆ ಅವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತಾ ಅವರು ಎಚ್ಚರಿಕೆ ನೀಡಿದರು.
ಯಾವುದೇ ಕಾರ್ಖಾನೆ ಅಥವಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಗೆ ಭೀಮ್ ಆರ್ಮಿ ಹೆಸರಿನಲ್ಲಿ ಯಾರಾದರೂ ಬೆದರಿಕೆ ಹಾಕುತ್ತಿದ್ದರೆ, ತಕ್ಷಣವೇ ಪೊಲೀಸರಿಗೆ ದೂರು ನೀಡುವಂತೆ ಅವರು ಮನವಿ ಮಾಡಿದರು. ಅಂತಹವರ ವಿರುದ್ಧ ಸಂಘಟನೆಯೇ ಖುದ್ದಾಗಿ ದೂರು ದಾಖಲಿಸಲಿದೆ ಎಂದು ಅವರು ತಿಳಿಸಿದತು.
ಇನ್ನೂ ತುಮಕೂರು ಜಿಲ್ಲೆಯ ಹತ್ತು ತಾಲೂಕುಗಳಲ್ಲಿ ಸಂಘಟನೆಯನ್ನು ಬಲಪಡಿಸಲು ಪ್ರಮುಖ ಆದ್ಯತೆ ನೀಡಲಾಗುವುದು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಜಿಲ್ಲೆಯಲ್ಲಿ ಸಂಘಟನೆಯು ನ್ಯಾಯಯುತವಾಗಿ ಕೆಲಸ ಮಾಡಲಿದೆ. ಕರ್ನಾಟಕದ ಯಾವುದೇ ಮೂಲೆಯಲ್ಲಿ ದಲಿತರಿಗೆ ಅನ್ಯಾಯವಾದರೂ ಸಂಘಟನೆ ಧ್ವನಿಯಾಗಲಿದೆ ಎಂದು ಭರವಸೆ ನೀಡಿದ್ರು.
“ದಲಿತ ಪರ ಸಂಘಟನೆ ಮತ್ತು ಕನ್ನಡಪರ ಹೋರಾಟಗಳಲ್ಲಿ ನಾನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರ ಫಲವಾಗಿ ಇಂದು ನನಗೆ ಜಿಲ್ಲಾಧ್ಯಕ್ಷ ಸ್ಥಾನ ಲಭಿಸಿದೆ,” ಎಂದು ನೂತನ ಅಧ್ಯಕ್ಷ ಗೋಪಾಲಕೃಷ್ಣ ತಮ್ಮ ಅನಿಸಿಕೆ ಹಂಚಿಕೊಂಡರು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


