nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ನೌಕರರು ಕೆಲಸದ ಒತ್ತಡದಲ್ಲಿ ಆರೋಗ್ಯವನ್ನು ಕಡೆಗಣಿಸಬಾರದು: ಟಿ.ಬಿ.ಜಯಚಂದ್ರ
    ತುಮಕೂರು April 9, 2025

    ಸರ್ಕಾರಿ ನೌಕರರು ಕೆಲಸದ ಒತ್ತಡದಲ್ಲಿ ಆರೋಗ್ಯವನ್ನು ಕಡೆಗಣಿಸಬಾರದು: ಟಿ.ಬಿ.ಜಯಚಂದ್ರ

    By adminApril 9, 2025No Comments2 Mins Read
    t b jayachandra

    Provided by
    Provided by

    ತುಮಕೂರು:  ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ ಎಂದು ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರು ಅಭಿಪ್ರಾಯಪಟ್ಟರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2024–25ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೈಹಿಕ ಮತ್ತು ಮಾನಸಿಕ ಆರೋಗ್ಯಗಳೆರಡೂ ಪರಸ್ಪರ ಒಂದಕ್ಕೊಂದು ಸಂಬಂಧ ಹೊಂದಿರುವುದರಿಂದ ಇವೆರಡರ ಸಮತೋಲನವನ್ನು ಕಾಪಾಡಿಕೊಳ್ಳುವುದು ಅನಿವಾರ್ಯ ಎಂದು ತಿಳಿಸಿದರು.

    ಸರ್ಕಾರಿ ನೌಕರರು ಕಚೇರಿ ಕೆಲಸದ ಒತ್ತಡದಲ್ಲಿ ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಡೆಗಣಿಸಬಾರದು. ಕರ್ತವ್ಯದೊಂದಿಗೆ ನಿಯಮಿತ ಧ್ಯಾನ, ವ್ಯಾಯಾಮ ಮತ್ತು ಉತ್ತಮ ಪೌಷ್ಟಿಕ ಆಹಾರ ಸೇವನೆಯನ್ನು ರೂಢಿಸಿಕೊಳ್ಳುವುದರಿಂದ ಮನಸ್ಸು ಮತ್ತು ದೇಹದ ಆರೋಗ್ಯವನ್ನು ಸಮತೋಲನದಲ್ಲಿಟ್ಟುಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು.

    ಸರ್ಕಾರಿ ನೌಕರರು ಪ್ರಾಮಾಣಿಕ ಸೇವೆ ಸಲ್ಲಿಸಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು. ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ಕರೆ ನೀಡಿದರು.


    Provided by
    Provided by

    ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಮಾತನಾಡಿ, ಸರ್ಕಾರಿ ನೌಕರರು ಅನಾವಶ್ಯಕವಾಗಿ ಸಾಮಾಜಿಕ ಜಾಲತಾಣಗಳನ್ನು ವೀಕ್ಷಿಸಿ ಸಮಯ ವ್ಯರ್ಥ ಮಾಡದೆ, ಶಾರೀರಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ರಾಜ್ಯದಲ್ಲಿ ಸುಮಾರು 2.50 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಐದಾರು ಮಂದಿ ಮಾಡುವ ಕೆಲಸ ಒಬ್ಬರೇ ಮಾಡುವ ಒತ್ತಡದ ಪರಿಸ್ಥಿತಿಯಿದೆ. ಒತ್ತಡದಿಂದ ಹೊರಬರಲು ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ನಿಯಮಿತವಾಗಿ ನಡಿಗೆ ಅಭ್ಯಾಸ ಮಾಡುವ ದೃಢ ಸಂಕಲ್ಪ ಮಾಡಬೇಕು. ಪ್ರೋಟೀನ್ ಹಾಗೂ ಪೌಷ್ಟಿಕಾಂಶವುಳ್ಳ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಇದರಿಂದ ಕೆಲಸ ಮಾಡಲು ನವ ಚೈತನ್ಯ ದೊರೆಯುತ್ತದೆ ಎಂದು ಸಲಹೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ನೌಕರರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ಉತ್ತಮ ಸೇವೆ ಸಲ್ಲಿಸಲು ಸಾಧ್ಯ. ಕ್ರೀಡೆಯಿಂದ ಕೂಡಿದ ಜೀವನ ಆರೋಗ್ಯಯುತವಾಗಿರುತ್ತದೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಾಳಜಿ ಹೊಂದಿರಬೇಕೆಂದು ತಿಳಿಸಿದರು.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಮಹಿಳಾ ನೌಕರರು ಮನೆ ಹಾಗೂ ಕಚೇರಿ ಕೆಲಸಗಳೆರಡನ್ನೂ ನಿಭಾಯಿಸಬೇಕು. ಮನೆ ಹಾಗೂ ಕಚೇರಿ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಲು ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹುಮುಖ್ಯ. ಪ್ರತಿಯೊಬ್ಬರಿಗೂ ತಾವು ಸೇವಿಸುವ ಆಹಾರದ ಬಗ್ಗೆ ಅರಿವು ಇರಬೇಕು ಎಂದರಲ್ಲದೆ, ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ತಮ್ಮ ಗುರಿಯನ್ನು ಮುಟ್ಟುವ ಮನೋಭಾವ ಹೊಂದಿರಬೇಕು ಎಂದು ಹೇಳಿದರು.

    ಮನುಷ್ಯನು ಗರ್ಭಧರಿಸುವ ಶಿಶುವಿನಿಂದ ಹಿಡಿದು ಮರಣದವರೆಗೂ ಒಂದಲ್ಲಾ ಒಂದು ರೀತಿಯಲ್ಲಿ ಸರ್ಕಾರಿ ಸೇವೆಗೊಳಪಡುತ್ತಾನೆ. ಗರ್ಭಾವಸ್ಥೆಯಲ್ಲಿ ಆಶಾ ಕಾರ್ಯಕರ್ತೆಯರ ಸೇವೆ, ಬಾಲ್ಯಾವಸ್ಥೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ, ಶಿಕ್ಷಕರಿಂದ ಉತ್ತಮ ಶಿಕ್ಷಣ, ಆರೋಗ್ಯ ಇಲಾಖೆಯ ಮೂಲಕ ಆರೋಗ್ಯಪೂರ್ಣ ಜೀವನ, ಗ್ರಾಮ ಹಾಗೂ ನಗರ ಆಡಳಿತದಿಂದ ಮೂಲ ಸೌಕರ್ಯಗಳನ್ನು ಜನರಿಗೆ ಒದಗಿಸುವಲ್ಲಿ ಪ್ರತಿಯೊಬ್ಬ ಸರ್ಕಾರಿ ನೌಕರನು ನಿರ್ಧಾರಕ ಪಾತ್ರವಹಿಸುತ್ತಾನೆ. ಜನಸಾಮಾನ್ಯರಿಗೆ ಹಂತ–ಹಂತವಾಗಿ ಸರ್ಕಾರದ ಹಲವಾರು ಸೇವೆಗಳನ್ನು ತಲುಪಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಸರ್ಕಾರಿ ನೌಕರರಿಗೆ ಅಭಿನಂದನೆ ತಿಳಿಸುತ್ತಾ ಮೆಚ್ಚುಗೆ ಮಾತುಗಳನ್ನಾಡಿದರು.

    ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಮಾತನಾಡಿ, ದೇಹ ಮತ್ತು ಮನಸ್ಸು ಚಟುವಟಿಕೆಯಿಂದಿರಲು ವೃತ್ತಿಯೊಂದಿಗೆ ಕ್ರೀಡಾ ಪ್ರವೃತ್ತಿಯನ್ನೂ ಬೆಳೆಸಿಕೊಳ್ಳಬೇಕು. ಮನಸ್ಸಿನ ಮಾತು ದೇಹ ಕೇಳುವಂತಿರಬೇಕು. ಇಲ್ಲದಿದ್ದರೆ ದೇಹ ಜಡತ್ವ ಹೊಂದುತ್ತದೆ. ಈ ನಿಟ್ಟಿನಲ್ಲಿ ಮನಸ್ಸು ಮತ್ತು ದೇಹದ ಉತ್ಸಾಹಕ್ಕಾಗಿ ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರಾಜೇಶ್ವರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎನ್. ನರಸಿಂಹರಾಜು, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಂಗಪ್ಪ, ಡಯಟ್ ಪ್ರಾಂಶುಪಾಲ ಕೆ. ಮಂಜುನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಟಿ.ಆರ್. ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.