nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026
    Facebook Twitter Instagram
    ಟ್ರೆಂಡಿಂಗ್
    • ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?
    • ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    • ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ
    ತುಮಕೂರು June 8, 2026

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    By adminJune 8, 2026No Comments2 Mins Read
    g parameshwar

    ತುಮಕೂರು: ಸಮಾಜದ ಎಲ್ಲ ವರ್ಗಗಳೂ ಸಮಾನವಾಗಿ ಬದುಕಬೇಕು, ಉತ್ತಮ ಜೀವನ ರೂಪಿಸಿಕೊಳ್ಳಲೆಂಬ ಉದ್ದೇಶದಿಂದ ಬಡತನ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಬಡವರ ಪರವಾಗಿ ಕೆಲಸ ಮಾಡಿಕೊಡುವುದು ನಮ್ಮ ಕರ್ತವ್ಯ ಕೂಡ ಎಂದು ಎಂದು ಉಪ ಮುಖ್ಯಮಂತ್ರಿ, ಡಾ.ಜಿ.ಪರಮೇಶ್ವರ ತಿಳಿಸಿದರು.

    ಜಿಲ್ಲಾಡಳಿತ, ತುಮಕೂರು ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಾಭಿವೃದ್ಧಿ ಕೋಶದ ವತಿಯಿಂದ ಭಾನುವಾರ ಟೌನ್‌ಹಾಲ್ ವೃತ್ತದ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗ ತುಮಕೂರು ಜಿಲ್ಲೆ ವಿವಿಧೆಡೆ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ವಸತಿರಹಿತ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು.

    ಪ್ರಸ್ತುತ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೇತೃತ್ವದ ಸರ್ಕಾರ ಬಂದಿದೆ. ಈ ಸರ್ಕಾರದ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿ, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವುದಾಗಿದೆ ಎಂದರು.

    ಕರ್ನಾಟಕ ಇಡೀ ದೇಶದಲ್ಲೇ 25 ವರ್ಷಗಳಿಗೂ ಮುಂದಿರುವುದನ್ನು ತಾವು ಕಾಣಬಹುದು. ಬೇರೆ ರಾಜ್ಯಗಳನ್ನು ಗಮನಿಸಿದಾಗ ನಮ್ಮದು ಶ್ರೇಯಸ್ಕರ ಸ್ಥಿತಿಯಲ್ಲಿರುವುದನ್ನು ಗಮನಿಸಬಹುದು. ರಾಜ್ಯದಲ್ಲಿ ಶಾಂತಿ, ಅಭಿವೃದ್ಧಿ ಹಾಗೂ ಯುವಕರಿಗೆ ಉದ್ಯೋಗಾವಕಾಶ ಇದು ಉಳಿದ ಎರಡು ವರ್ಷಗಳಲ್ಲಿ ನಮ್ಮ ಆದ್ಯತೆ ಎಂದರು.

    209 ಹಕ್ಕುಪತ್ರ: ಸಮಾಜದ ಎಲ್ಲ ಜನರ ರೀತಿ ಅಲೆಮಾರಿ ಸಮುದಾಯದ ಕುಟುಂಬವೂ ಮುಖ್ಯವಾಹಿನಿಗೆ ಬರಬೇಕೆಂಬ ಉದ್ದೇಶದಿಂದ ಅಲೆಮಾರಿ ಸಮುದಾಯದ ಕುಟುಂಬಗಳಿಗೆ 209 ಹಕ್ಕುಪತ್ರಗಳನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅವರಿಗೆ ರಾಜೀವ್‌ ಗಾಂಧಿ ವಸತಿ ಯೋಜನೆ ಮೂಲಕ ಮನೆಗಳನ್ನು ಕಟ್ಟಿಸಿಕೊಡಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

    ಅಲೆಮಾರಿ ಸಮುದಾಯ ತಮ್ಮ ಮಕ್ಕಳನ್ನು ಉತ್ತಮ ವಿದ್ಯಾವಂತರನ್ನಾಗಿ ಮಾಡುವ ಮೂಲಕ ಮುಖ್ಯವಾಹಿನಿಗೆ ತರಬೇಕು ಎಂದ ಅವರು, ಇಂತಹ ಕೆಲಸಗಳಿಗೆ ಸರ್ಕಾರ ಹೊಸ ರೂಪ ಕೊಟ್ಟಿದೆ ಎಂದರು.

    ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ನಿಕೇತ್ ರಾಜ್ ಎಂ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಆಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತ ಶುಭ, ಜಿ.ಪಂ.ಉಪ ಕಾರ್ಯದರ್ಶಿ ಸಂಜೀವಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಸೋನಿಯಾ ವರ್ಣೇಕರ್, ಉಪಸ್ಥಿತರಿದ್ದರು.

    ಶಾಸಕ ಸುರೇಶ್‌ಗೌಡ ಅವರು ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಉತ್ತಮ ಜನಪರ ಕಾರ್ಯಗಳನ್ನು ಮಾಡಿದೆ. ತುಮಕೂರು ಜಿಲ್ಲೆಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಪ್ರಶಂಸನೀಯ. ಅಂತೆಯೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಹೆಜ್ಜೆ ಗುರುತುಗಳು ಇರುವಂತೆ ಕೆಲಸಗಳು ಅವರಿಂದ ಆಗಬೇಕು ಎಂದು ಆಶಿಸಿದರು. ಶಾಸಕ ಜ್ಯೋತಿಗಣೇಶ್ ಅವರು, ತುಮಕೂರು ನಗರ ಭಾಗದ ಕೊಳಗೇರಿ ಪ್ರದೇಶದ ಜನರಿಗೂ ಹಕ್ಕುಪತ್ರಗಳನ್ನು ನೀಡುವಂತಾಗಬೇಕು ಎಂದು ಆಶಿಸಿದರು.

    ತುಮಕೂರು ಮಹಾನಗರ ಪಾಲಿಕೆಯ ಈ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ತಮ್ಮ ಸ್ವಂತ ಖರ್ಚಿನಿಂದ ನಿರ್ಮಿಸಲಾಗಿದೆ. ಅಂತೆಯೇ ಇಂದು ಕಾಂಪೌಂಡ್ ಗೋಡೆಗೆ ಶಿಲಾನ್ಯಾಸ ಮಾಡಲಾದ ಡಾ.ಬಾಬು ಜಗಜೀವನರಾಮ್ ಭವನದ ಮುಂಭಾಗ ತಮ್ಮ ಸ್ವಂತ ಖರ್ಚಿನಿಂದ ಜಗಜೀವನರಾಮ್ ಪ್ರತಿಮೆ ನಿರ್ಮಿಸಲಾಗುವುದು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ

    July 24, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಶುಂಠಿ ಬೇಗ ಹಾಳಾಗದಂತೆ ಇಡುವುದು ಹೇಗೆ?

    July 25, 2026

    ಶುಂಠಿಯು ಪ್ರತಿಯೊಬ್ಬರ ಅಡುಗೆಮನೆಯಲ್ಲಿಯೂ ಅತ್ಯಗತ್ಯವಾಗಿ ಬಳಸುವ ಒಂದು ಪ್ರಮುಖ ಪದಾರ್ಥ. ಚಹಾ, ಸಾರು, ಕರ್ರಿ ಅಥವಾ ವಿವಿಧ ಖಾದ್ಯಗಳಿಗೆ ಶುಂಠಿ…

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.