ಬೆಂಗಳೂರು: ಗೋಹಿಂಸೆ ಹಾಗೂ ಗೋಹತ್ಯೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ.
ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ ವರದಿಯಾಗಿದ್ದು, ಮೂಕ ಪ್ರಾಣಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜ್ಯದಲ್ಲಿ ನಡೆಯುತ್ತಿರುವ ಗೋಹತ್ಯೆ ಹಾಗೂ ಗೋಹಿಂಸೆ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಈ ಘಟನೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಪೊಲೀಸರಿಗೆ ಮತ್ತೊಮೆ ಸೂಚನೆ ನೀಡಿದ್ದೇನೆಂದು ಹೇಳಿದರು.
ಈ ರೀತಿಯ ಮನಸ್ಥಿತಿ ಇರುವವರನ್ನು ಮೊದಲು ಗುರುತಿಸಬೇಕು. ಕೃತ್ಯದ ಹಿಂದೆ ಬೇರೆ ಯಾರಾದ್ದಾದರೂ ಪ್ರಚೋದನೆ ಇದೆಯೇ? ಅಥವಾ ವೈಯಕ್ತಿಕವಾಗಿ ಕೃತ್ಯ ಎಸಗುತ್ತಿದ್ದಾರೆಯೇ ಅಥವಾ ಸಂಘಟನೆಗಳಿವೆಯೇ ಎಂಬೆಲ್ಲಾ ವಿಚಾರಗಳನ್ನು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx