nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ
    • ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
    • ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು
    • ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ
    • ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಪ್ರೌಢಶಾಲೆ ಅರಸೀಕೆರೆ: 38ನೇ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
    ಪಾವಗಡ February 23, 2025

    ಸರ್ಕಾರಿ ಪ್ರೌಢಶಾಲೆ ಅರಸೀಕೆರೆ: 38ನೇ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

    By adminFebruary 23, 2025No Comments2 Mins Read
    arasikere

    ಅರಸೀಕೆರೆ: ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯಲ್ಲಿ ಮಿನಿ ವಿಜ್ಞಾನ ಸಂಪನ್ಮೂಲ ಕೇಂದ್ರ ಅರಸೀಕೆರೆ ಮತ್ತು ಮಧುಗಿರಿ ವಿಜ್ಞಾನ ಕೇಂದ್ರ ರವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನದ ಅಡಿಯಲ್ಲಿ ಶಾಲಾ ಆವರಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ಅದ್ದೂರಿ ಯಾಗಿ 38 ನೇ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು.

    ಕಾರ್ಯಕ್ರಮದಲ್ಲಿ ಶಿರಾ ತಾಲೂಕಿನ ಸರ್ಕಾರಿ ಪ್ರೌಢಶಾಲೆ ದೊಡ್ಡಬಾಣಗೆರೆಯ ಸುಮಾರು 50 ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಎಸ್.ಆರ್.ಪಾಳ್ಯ  ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಗೂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ವಸ್ತು ಪ್ರದರ್ಶನವನ್ನು ವೀಕ್ಷಿಸಿದ್ದು ವಿಶೇಷವಾಗಿತ್ತು.


    Provided by
    Provided by

    ಮೊದಲಿಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಕಾರ್ಯಕ್ರಮವನ್ನು ವಿಜ್ಞಾನ ನೃತ್ಯದ ಮೂಲಕ ಪ್ರಾರಂಭಿಸಲಾಯಿತು.  ನಂತರ ರಾಸಾಯನಿಕ ಊಸರವಳ್ಳಿ  ಎಂಬ ಪ್ರಯೋಗದ ಮೂಲಕ ಹಾಗೂ ವಿದ್ಯಾರ್ಥಿಗಳಿಂದ ವೈಜ್ಞಾನಿಕವಾಗಿ ತೇಲುತ್ತಿರುವ ಬೆಂಕಿಯನ್ನು ತೋರಿಸುವ ಪ್ರಯೋಗವನ್ನು ವಿದ್ಯಾರ್ಥಿ ಗಳು ನಡೆಸಿ ಕೊಡುವ ಮೂಲಕ ಉದ್ಘಾಟಿಸಲಾಯಿತು.

    ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕರಾದ  ರಾಮಚಂದ್ರಪ್ಪ,  ಕೆ.ಎಸ್.ಡಿ.ಎಂ.ಸಿ. ಅದ್ಯಕ್ಷರಾದ ಗುರುರಾಜ್,  ಅಂತ್ಯೋದಯ ಸಂಸ್ಥೆಯ ಸಂಸ್ಥಾಪಕರಾದ ಬಿ.ಕೆ.ಮುನಿ ಸ್ವಾಮಿ , ಊರಿನ ವಿಜ್ಞಾನಾಸಕ್ತರಾದ ಪಿ.ದೊಡ್ಡಣ್ಣ ಮತ್ತು  ತೀರ್ಪುಗಾರರಾಗಿ ಆಗಮಿಸಿದ  ನಿವೃತ್ತ ಮುಖ್ಯೋಪಾದ್ಯಾಯರಾದ ಗಂಗಾಧರಪ್ಪಎಂ., ಆದರ್ಶ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿಯಾದ ರೂಪಕುಮಾರಿ ಮತ್ತು ಗುಜ್ಜನಡು ಪ್ರೌಢಶಾಲೆಯ ಮುಖ್ಯಶಿಕ್ಷಕರು ಮತ್ತು ವಿಜ್ಞಾನ ಶಿಕ್ಷಕರಾದ ಮಹೇಶ್ವರಪ್ಪ, ಸರ್ಕಾರಿ ಪ್ರೌಢಶಾಲೆ, ದೊಡ್ಡ ಬಾಣಗೆರೆಯ ವಿಜ್ಞಾನ ಶಿಕ್ಷಕರಾದ ಚನ್ನಬಸವರಾಜು, ವಿಶೇಷ ಶಿಕ್ಷಕರಾದ ರಾಮಣ್ಣ ಮತ್ತು ಸಿಬ್ಬಂದಿ ವರ್ಗದವರು , ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ರೇಣುಕರಾಜ್  G.H.,  ವಿಜ್ಞಾನ ದಿನಾಚರಣೆಯ ಮೂಲ ಉದ್ದೇಶ, ಗುರಿ ಮತ್ತು ಮಹತ್ವದ ಕುರಿತು ಸವಿಸ್ತಾರವಾಗಿ ಸರ್. ಸಿ.ವಿ. ರಾಮನ್ ರವರ ಸಾಧನೆಗಳ ಬಗ್ಗೆ ತಿಳಿಸಿದರು.

    ಗಂಗಾಧರಪ್ಪ ಎಂ. ಮಾತನಾಡಿ, ವಿದ್ಯಾರ್ಥಿಗಳು ಆಸಕ್ತಿ, ಕುತೂಹಲದಿಂದ ವಿಜ್ಞಾನವನ್ನು ಓದಿ ಹೆಚ್ಚಿನ ಅಂಕಗಳಿಸಬೇಕೆಂದು ಕಿವಿ ಮಾತು ಹೇಳಿದರು. ವೈಜ್ಞಾನಿಕ ಮನೋಭಾವ ಬೆಳೆಸಿ ಕೊಳ್ಳುವಲ್ಲಿ ವಿದ್ಯಾರ್ಥಿ ಗಳು ಕಾರ್ಯೋನ್ಮುಖರಾಗಬೇಕೆಂದು ತಿಳಿಸಿದರು.

    ಬಿ.ಕೆ.ಮುನಿಸ್ವಾಮಿ ಅವರು ಪರೀಕ್ಷಾ ಫಲಿತಾಂಶ ಸುಧಾರಣ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

    ಇದೇ ಸಂದರ್ಭದಲ್ಲಿ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಾಯಿತು.  ಶಾಲೆಯ ಸುಮಾರು 101 ವಿದ್ಯಾರ್ಥಿಗಳು ,ಎಸ್.ಆರ್.ಪಾಳ್ಯ ಶಾಲೆಯ ಸುಮಾರು 5 ವಿದ್ಯಾರ್ಥಿಗಳು ತಾವೇ ತಯಾರಿಸಿದ ವಿಜ್ಞಾನದ ಮಾದರಿಗಳನ್ನು ಪ್ರದರ್ಶನ ಮಾಡಿದರು.

    8,9 ಮತ್ತು 10 ನೇ ತರಗತಿಯ  ಸುಮಾರು 101 ವಿದ್ಯಾರ್ಥಿಗಳು ವಿಜ್ಞಾನದ ಮಾದರಿಗಳಾದ ರಾಕೆಟ್‌ ನ ಮಾದರಿ,ಡಿ.ಸಿ. ಮೋಟಾರು, ಏ.ಸಿ. ಮೋಟಾರ್, ಡೈನಮೋ, ಡ್ರಿಲ್ಲಿಂಗ್ ಮೆಷಿನ್, ಉಪಗ್ರಹ ಉಡಾವಣಾ ವಾಹನ ,ಸೌರವ್ಯೂಹದ ಮಾದರಿ, ನೀರು ಮತ್ತು ಗಾಳಿಯ ರಾಕೆಟ್, ಪರಿಸರ ಮಾಲಿನ್ಯದ ಮಾದರಿ, ಬೋಯಿಂಗ್ ಬೋಟ್, ಟ್ರಕ್ ಮಾದರಿ ,ವ್ಯಾಕ್ಯೂಮ್ ಕ್ಲೀನರ್ ನ ಮಾದರಿ ಹೀಗೆ ಅನೇಕ ಮಾದರಿಗಳನ್ನು ಪ್ರದರ್ಶಿಸಲಾಯಿತು.

    ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮತ್ತು ಭಾಷಣ ಸ್ಪರ್ಧೆ ಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಮೊಮೆಂಟೋ ಗಳನ್ನು ವಿತರಿಸಲಾಯಿತು.

    ಹನುಮೇಶ್ ಸ್ವಾಗತಿಸಿದರು, ಮೋಹನ್ ಕುಮಾರ್  ನಿರೂಪಣೆ ಮಾಡಿದರು. ರಶ್ಮಿ.ಸಿ.ಎಸ್ ರವರು ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಕುಮಾರ್, ವಿಮಲಾ.ಆರ್, ಮಾನಸ ಎನ್., ಮತ್ತು ಅಭಿಷೇಕ್ ಎಂ.ರವರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    April 7, 2026

    ಪಾವಗಡ: ಬೀದಿ ನಾಯಿಗಳ ದಾಳಿಗೆ 20 ಕುರಿಗಳು ಬಲಿ — ಸಂಕಷ್ಟದಲ್ಲಿ ಕುರಿಗಾಹಿ ಕುಟುಂಬ

    March 30, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಕೊರಟಗೆರೆ: ಮನೆಯ ಮುಂದಿನ ಕಾಂಪೌಂಡ್ ನಲ್ಲಿ ನಿಲ್ಲಿಸಿದ್ದ ಒಂದು ಕಾರು ಮತ್ತು ಎರಡು ಬೈಕ್‌ಗಳಿಗೆ ಕಿಡಿಗೇಡಿಯೋರ್ವ ಬೆಂಕಿ ಹಚ್ಚಿ ಪರಾರಿಯಾಗಿರುವ…

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.