ತುಮಕೂರು: ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ಹೊಂದಾಣಿಕೆ ಆಗಿದೆ. ಅಲ್ಲದೆ ಎರಡು ಪಕ್ಷಗಳಿಗೂ ಇದು ಅನುಕೂಲವಾಗಿದೆ ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಇದು ಸಾಬೀತಾಗಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ವಿರೋಧಿ ಹೋರಾಟ ಕುರಿತು ಬಗೆಹರಿಸುವ ದೃಷ್ಟಿಯಿಂದ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರು ಆಗಿರುವ ಅವರು ರೈತರೊಂದಿಗೆ ಕುಳಿತು ಚರ್ಚಿಸುವ ಬಗೆಹರಿಸುವ ಕುರಿತು ಚಿಂತನೆ ನಡೆಸಿಲ್ಲ. ನೀರಿನ ವಿಚಾರದಲ್ಲಿ ಸರ್ಕಾರ ರಾಜಕಾರಣ ಮಾಡಬಾರದು ಎಂದು ಹೇಳಿದರು.
“ಜನರೊಂದಿಗೆ ಜನತಾದಳ” ಮೊದಲನೇ ದಿನದ ಪ್ರವಾಸಕ್ಕೂ ಮೊದಲು ಪರಮಪೂಜ್ಯ ಡಾ.ಶಿವಕುಮಾರ ಶ್ರೀಗಳ ತಪೋಭೂಮಿ ಶ್ರೀಕ್ಷೇತ್ರ ಸಿದ್ದಗಂಗಾ ಮಠಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಪಕ್ಷದ ಸದಸ್ಯತಾ ಅಭಿಯಾನದ ನಿರೀಕ್ಷಿತ ಗುರಿ ಸಾಧಿಸಲು ಲಿಂಗೈಕ್ಯ ಶ್ರೀಗಳ ಸನ್ನಿಧಾನದ ದರುಶನ ದಿವ್ಯ ಪ್ರೇರಣೆ ನೀಡಿತು.
ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು ಅವರು, ಬಿಜೆಪಿ ಶಾಸಕರುಗಳಾದ ಬಿ.ಸುರೇಶ್ ಗೌಡ ಅವರು, ಜ್ಯೋತಿ ಗಣೇಶ್ ಅವರು,ಮಾಜಿ ಶಾಸಕರಾದ ಹೆಚ್. ನಿಂಗಪ್ಪ ಅವರು, ಕೆ.ಟಿ ಶಾಂತಕುಮಾರ್ ಅವರು, ತುಮಕೂರು ಜಿಲ್ಲಾಧ್ಯಕ್ಷರಾದ ಅಂಜಿನಪ್ಪ ಅವರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜತೆಯಲ್ಲಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW