ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆಯ ಖಾಸಗಿ ಅಂಗಡಿಯೊಂದರಲ್ಲಿ ಸರ್ಕಾರದ ಕ್ಷೀರಭಾಗ್ಯ ಯೋಜನೆಯ ಹಾಲು ಪಾಕೆಟ್ ಪತ್ತೆಯಾಗಿದೆ.
ವೈ.ಎನ್.ಹೊಸಕೋಟೆ ಗ್ರಾಮದ ಎಸ್.ಕೆ.ಪಿ.ಟಿ. ರಸ್ತೆಯ ಅಂಗಡಿಯೊಂದರಲ್ಲಿ ಹಲವಾರು ದಿನಗಳಿಂದ ಈ ಹಾಲು ಪಾಕೆಟ್ ಮಾರಾಟವಾಗುತ್ತಿದೆ. ಖಚಿತ ಮಾಹಿತಿ ಮೇರೆಗೆ ತಾಲ್ಲೂಕು ಸಿಡಿಪಿಓ ಸುನಿತಾ ಈ ಬಗ್ಗೆ ತಪಾಸಣೆ ಮಾಡಿದಾಗ ಅಂಗಡಿಯಲ್ಲಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಅಂಗಡಿ ಮಾಲೀಕರನ್ನು ವಿಚಾರಿಸಿದಾಗ ಯಾರೋ ಗುರುತು ತಿಳಿಯದ ವ್ಯಕ್ತಿಗಳು ನಮಗೆ ಕೊಟ್ಟು ಹೋಗಿದ್ದಾರೆ ಎಂದು ಹಾರಿಕೆಯ ಉತ್ತರವನ್ನು ನೀಡಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲಾಗುತ್ತಿದೆ. ಎಲ್ಲಾ ಅಂಗನವಾಡಿಗಳಲ್ಲಿ ಸ್ಟಾಕ್ ಚೆಕ್ ಮಾಡಲಾಗುವುದು. ಅಕ್ರಮ ಕಂಡುಬಂದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಡಿಪಿಓ ತಿಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA