nammatumakuru

    Subscribe to Updates

    Get the latest creative news from FooBar about art, design and business.

    What's Hot

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025
    Facebook Twitter Instagram
    ಟ್ರೆಂಡಿಂಗ್
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    • ಬೀದರ್ | 1. 34 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತು ನಾಶ
    • ತುಮಕೂರು | ಆಮೆ ವೇಗದಲ್ಲಿ ಸಾಗಿದ ಜಾತಿವಾರು ಸಮೀಕ್ಷೆ: ಕಾಡುತ್ತಿರುವ ಸಮಸ್ಯೆಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಸಹಿಸದೇ ಸುಖಾಸುಮ್ಮನೆ ಅಪಪ್ರಚಾರ: ಗ್ರಾ.ಪಂ. ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ
    ಕೊರಟಗೆರೆ August 13, 2025

    ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಸಹಿಸದೇ ಸುಖಾಸುಮ್ಮನೆ ಅಪಪ್ರಚಾರ: ಗ್ರಾ.ಪಂ. ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ

    By adminAugust 13, 2025No Comments2 Mins Read
    koratagere

    ಕೊರಟಗೆರೆ: ತಾಲ್ಲೂಕಿನ ಮಾವತ್ತೂರು ಗ್ರಾಮ ಪಂಚಾಯತಿ ಕೊರಟಗೆರೆ ತಾಲೂಕಿನಲ್ಲಿಯೇ ಗ್ರಾಮಗಳ ಸರ್ವಾಂಗೀಣ ಅಭಿವೃದ್ದಿ ಕಾರ್ಯಗಳಲ್ಲಿ ಉತ್ತಮ ಪಂಚಾಯಿತಿ ಎಂದು ರಾಜ್ಯ ಮಟ್ಟದ ಪ್ರಶಸ್ತಿ ಬಂದಿದ್ದು ಕೆಲವರ ಸುಳ್ಳು ಹೇಳಿಕೆಗಳು ಮನಸ್ಸಿಗೆ ನೋವುಂಟು ಮಾಡಿದೆ ಎಂದು ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ ವ್ಯಕ್ತಪಡಿಸಿದರು.

    ಮಾವತ್ತೂರು ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಪಂಚಾಯಿತಿ ಅಧ್ಯಕ್ಷೆ ಮತ್ತು ಹುರುಳುಗೆರೆ ಕ್ಷೇತ್ರದ ಸದಸ್ಯೆಯಾಗಿದ್ದು ಹುರುಳುಗೆರೆ ಗ್ರಾಮದ ಶಾಲೆಗೆ ಕಾಂಪೌಂಡ್, ಶೌಚಾಲಯ, ಸಿಸಿ ರಸ್ತೆ ಹಾಗೂ ಚರಂಡಿಗಳ ಅಭಿವೃದ್ದಿ ಕಾಮಗಾರಿಗಳನ್ನು ಮಾಡಲಾಗಿದೆ, ಆದರೆ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಹೊಲದಲ್ಲಿ ಮನೆ ಕಟ್ಟಿಕೊಂಡಿರುವ 12 ಮನೆಗಳ ಜನರು ಓಡಾಡಲು ಖಾಸಗಿ ಜಮೀನಿನಲ್ಲಿ ರಸ್ತೆ ಹಾದು ಹೋಗುವುದರಿಂದ ಹಲವಾರು ವರ್ಷಗಳಿಂದ ರಸ್ತೆ ಸಮಸ್ಯೆ ಇದೆ, ಈಗ ಆ ಸಮಸ್ಯೆಯನ್ನು ಜಮೀನು ಮಾಲೀಕರು ಮತ್ತು ಜನರು ಬಗೆಹರಿಕೊಂಡಿದ್ದು ರಸ್ತೆ ಮಾಡಿಕೊಡಲು ಪಂಚಾಯಿತಿಯು ಬದ್ದವಾಗಿದೆ, ಅದರೆ ಕೆಲವರು ವಿನಾಕಾರಣ ಯಾವ ಅಭಿವೃದ್ದಿಯೂ ಆಗಿಲ್ಲ ಎನ್ನುವ ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವುದು ಸತ್ಯಕ್ಕೆ ದೂರವಾದ ಸಂಗತಿ ಎಂದರು.


    Provided by
    Provided by
    Provided by

    ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಟಿ. ಮಂಜುನಾಥ್ ಮಾತನಾಡಿ, ಮಾವತ್ತೂರು ಗ್ರಾಮ ಪಂಚಾಯಿತಿಗೆ ಕ್ಷೇತ್ರದ ಶಾಸಕರು ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಹಲವಾರು ಅನುದಾನಗಳನ್ನು ನೀಡಿದ್ದಾರೆ, ಪಂಚಾಯಿತಿ ವ್ಯಾಪ್ತಿಯ ಸಿಂಗಲೀಪುರದಿಂದ ಹುರುಳುಗೆರೆ ಹೋಗುವ ರಸ್ತೆಗೆ ಶಾಸಕರು 1.10 ಕೋಟಿ ರೂಗಳ ವಿಶೇಷ ಅನುದಾನವನ್ನು ನೀಡಿದ್ದಾರೆ, ಹುರುಳುಗೆರೆಯ ಜಮೀನಿಲ್ಲಿ ಕಟ್ಟಿಕೊಂಡಿರುವ 12 ಮನೆಗಳ ರಸ್ತೆ ಸಮಸ್ಯೆಯನ್ನು ಅವರೆ ಬಗೆ ಹರಿಸಿಕೊಂಡಿದ್ದು ಆ ಜಾಗವನ್ನು ರಸ್ತೆ ಮಾಡಿಕೊಡುವ ಕೆಲಸವನ್ನು ಪಂಚಾಯಿತಿ ಮಾಡುತ್ತದೆ, ಪ್ರತಿ ವರ್ಷದ ಆಕ್ಷನ್‌ ಪ್ಲಾನ್ ನಲ್ಲಿ ಹುರುಳುಗೆರೆ ಗ್ರಾಮದ ಅಭಿವೃದ್ದಿಗೆ ಮಾನ್ಯತೆ ಅನುದಾನ ಪಂಚಾಯಿತಿ ನೀಡುತ್ತಿದ್ದೆ ಅದರೆ ಅಧ್ಯಕ್ಷರ ಕ್ಷೇತ್ರವಾದ ಆ ಗ್ರಾಮದಲ್ಲಿ ವಯಕ್ತಿಕ ಕಾರಣಗಳನ್ನು ಇಟ್ಟುಕೊಂಡು ಗ್ರಾಮಕ್ಕೆ ಯಾವುದೇ ಅನುದಾನ ನೀಡಿಲ್ಲ ಎನ್ನು ಸುಳ್ಳು ಹೇಳಿಕೆ ಸಮಂಜಸವಲ್ಲ ಎಂದರು.

    ಉಪಾಧ್ಯಕ್ಷ ನವೀನ್‌ ಕುಮಾರ್ ಮಾತನಾಡಿ, ನಮ್ಮ ಪಂಚಾಯಿತಿಯಲ್ಲಿ ಸಮಾರು 3500 ಮೀಟರ್‌ ಗಳಷ್ಟು ಹೊಸದಾಗಿ ಚರಂಡಿ ಕಾಮಗಾರಿಗಳನ್ನು ಮಾಡಲಾಗಿದೆ, 500 ಮೀಟರ್ ಗಳಷ್ಟು ಸಿ ಸಿ ರಸ್ತೆ ಮಾಡಲಾಗಿದೆ, ಇದರೊಂದಿಗೆ ಶಾಲಾ ಕಾಲೇಜುಗಳ ಕಾಮಗಾರಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸದಕ್ಕಾಗಿ ನಮಗೆ ಸರ್ಕಾರದಿಂದ ಎನ್.ಆರ್.ಯಿ.ಜಿ ಅಡಿಯಲ್ಲಿ 2025—26  ಸಾಲಿನ ಉತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ ಲಭಿಸಿದೆ, ಪಂಚಾಯಿತಿಯಲ್ಲಿ ಕೆಲಸವೇ ಆಗಿಲ್ಲ ಶಾಸಕರು ಅನುದಾನ ನೀಡಿಲ್ಲ ಎಂಬುವ ಸುಳ್ಳು ಹೇಳಿಕೆಗಳು ಒಳ್ಳೆಯ ಬೆಳವಣಿಗೆಗಳು ಅಲ್ಲ ಎಂದರು.  ಪತ್ರಿಕಾಗೋಷ್ಠಿಯಲ್ಲಿ ಕುಮಾರ್, ಮಹಾಲಿಂಗಯ್ಯ ಸೇರಿದಂತೆ ಕೆಲ ಸದಸ್ಯರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಾವತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ರದ್ದು

    September 23, 2025

    ಕಸಬಾ ವಿ.ಎಸ್.ಎಸ್.ಎನ್.ನ ವಾರ್ಷಿಕ ಮಹಾಸಭೆ ಯಶಸ್ವಿ

    September 23, 2025

    ನೂತನ ಬಂಜಾರ ಸಮುದಾಯದ ಕಚೇರಿ ಉದ್ಘಾಟನೆ ಸಮಾರಂಭ

    September 21, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ನಾನು ಈ ಲೇಖನವನ್ನು ಬರೆಯುತ್ತಿರುವ ಸಂದರ್ಭದಲ್ಲಿ ಈ ಹಿಂದೆ ಆತ್ಮಗಳಿಗೆ ಸಂಬಂಧಿಸಿದಂತೆ ಯಾವ ಲೇಖನವನ್ನೂ ಓದಿರುವುದಿಲ್ಲ ಎಂದು ಸ್ಪಷ್ಟೀಕರಣ ಮಾಡುತ್ತಾ…

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025

    ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.