nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025
    Facebook Twitter Instagram
    ಟ್ರೆಂಡಿಂಗ್
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    • ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹಕಾರಿ ಸಂಘದ ತತ್ವಗಳಿಗೆ ವಿರುದ್ಧವಾಗಿ ಗ್ರಾಮಸಭೆ:  ಹೈಕೋರ್ಟ್, ಲೋಕಾಯುಕ್ತ ಅಂಗಳದಲ್ಲಿ ಪ್ರಕರಣ
    ಕೊರಟಗೆರೆ February 17, 2024

    ಸಹಕಾರಿ ಸಂಘದ ತತ್ವಗಳಿಗೆ ವಿರುದ್ಧವಾಗಿ ಗ್ರಾಮಸಭೆ:  ಹೈಕೋರ್ಟ್, ಲೋಕಾಯುಕ್ತ ಅಂಗಳದಲ್ಲಿ ಪ್ರಕರಣ

    By adminFebruary 17, 2024No Comments3 Mins Read
    malgonahalli

    ತುಮಕೂರು: ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಮಲಗೋನಹಳ್ಳಿ  ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೋಂದಣಿ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಸಹಕಾರಿ ತತ್ವಗಳಿಗೆ ವಿರುದ್ಧವಾಗಿ ಗ್ರಾಮ ಸಭೆ ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದ್ದು, ಅಧಿಕಾರಿಗಳ ಏಕಪಕ್ಷೀಯ ನಿರ್ಧಾರದಿಂದಾಗಿ ಎರಡು ಮೂರು ತಂಡಗಳಾಗಿ ವಿಂಗಡನೆಯಾಗಿರುವ ಸದಸ್ಯರ ನಡುವೆ ಜಟಾಪಟಿ ನಡೆದ ಘಟನೆ ನಡೆದಿದೆ.

    ನರಸಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಉಪ ಕೇಂದ್ರ ಮಲಗೋನಹಳ್ಳಿ ಗ್ರಾಮದಲ್ಲಿ ಕಾನೂನು ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ ಇಲ್ಲಿ ಒಂದು ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ನೋಂದಣಿ ಮಾಡಿಸಲು ಒಂದು ತಂಡ ಪ್ರಯತ್ನಿಸುತ್ತಿದ್ದು,  ರಾಜಕೀಯ ಕಾರಣಗಳಿಂದ ಈಗಾಗಲೇ  ಎರಡು ಮೂರು ತಂಡಗಳಾಗಿ ವಿಂಗಡನೆಯಾಗಿರುವ ಗ್ರಾಮಸ್ಥರ ನಡುವೆ ಇದು ಅಶಾಂತಿ ಸೃಷ್ಟಿಗೆ ಕಾರಣವಾಗಿದೆ.


    Provided by
    Provided by

    ಕಾನೂನು ಬಾಹಿರವಾಗಿ ಹಾಲು ಉತ್ಪಾದಕರ ಸಹಕಾರಿ ಸಂಘದ ನೋಂದಣಿ  ಮಾಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ವಿಚಾರ ತಿಳಿದು ಗ್ರಾಮಸ್ಥರು ಸಂಬಂಧಪಟ್ಟ ಕೆಎಂಎಫ್ ತುಮುಲ್ ಅಧಿಕಾರಿಗಳಿಗೆ ಹಾಗೂ ಸಹಕಾರಿ ಸಂಘಗಳ ನೋಂದಣಿ ಅಧಿಕಾರಿಗಳಿಗೆ  ಈ ವಿಚಾರವಾಗಿ ಹಲವು ಬಾರಿ,  ದೂರು, ಕಾನೂನು ತಿಳಿವಳಿಕೆ ನೋಟಿಸ್ ನೀಡುವ ಮೂಲಕ ದೂರು ಸಲ್ಲಿಸಿರುತ್ತಾರೆ. ಈ ಗ್ರಾಮದಲ್ಲಿ ಈಗ  ಎರಡು ಮೂರು ಪಂಗಡಗಳ ನಡುವೆ ಭೀನ್ನಾಭಿಪ್ರಾಯಗಳು  ವೈಯಕ್ತಿಕ ದ್ವೇಷಗಳು ಇರುವ ಕಾರಣ ಸದ್ಯದ ಪರಿಸ್ಥಿತಿಯಲ್ಲಿ ಡೈರಿ ನೋಂದಣಿಗೆ ಅವಕಾಶ ಕೊಡಬಾರದು. ಗ್ರಾಮದಲ್ಲಿ  ಶಾಂತಿ ಮತ್ತು ಸೌಹಾರ್ದ ಸ್ಥಿತಿ ಉಂಟಾದ ನಂತರ ತಿಳಿಯಾದ ನಂತರ, ಸಂಘ ಸ್ಥಾಫನೆಗೆ ಮಾಡುವಂತೆ ಕೋರಿ ಕೊಂಡಿರುತ್ತಾರೆ ಹಾಗೂ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಹಾಲಿನ ಉಪ ಕೇಂದ್ರವನ್ನು ನಡೆಸಿಕೊಂಡು ಹೋಗುವಂತೆ ಕೋರಿದ್ದಾರೆ.

    ನರಸಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಉಪ ಕೇಂದ್ರ ಇರುವ ಕಾರಣ ರೈತರಿಗೆ ಯಾವುದೇ ಸಮಸ್ಯೆ ಇಲ್ಲ, ಒಕ್ಕೂಟದಿಂದ ದೊರೆಯಬಹುದಾದ ಸೌಲಭ್ಯಗಳಾದ ಪ್ರೋತ್ಸಾಹ ಧನ, ಬೋನಸ್, ರೈತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಹಾಸ್ಟೇಲ್ ಸೌಲಭ್ಯ, ರಾಸುಗಳಿಗೆ ಚಿಕಿತ್ಸೆ, ವಿಮಾ ಸೌಲಭ್ಯ ಎಲ್ಲವೂ ಸಮರ್ಪಕವಾಗಿ ದೊರೆಯುತ್ತಿದೆ. ಹೀಗಿದ್ದರೂ ಕೂಡ ಕೂಡ ಗ್ರಾಮದ ಕೆಲವೇ ಕೆಲವು ವ್ಯಕ್ತಿಗಳು ತಮ್ಮ ತಮ್ಮ ನಡುವಿನ ರಾಜಕೀಯ ವೈಷಮ್ಯಕ್ಕಾಗಿ, ವೈಯಕ್ತಿಕ ಪ್ರತಿಷ್ಠೆಗಳಿಗಾಗಿ ಗ್ರಾಮದಲ್ಲಿ ಡೈರಿ ಸ್ಥಾಪನೆಯ ವಿಚಾರ ಮುಂದಿಟ್ಟುಕೊಂಡು ರಾಜಕೀಯವಾಗಿ ಇತ್ಯಾದಿಯಾಗಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟು ಮಾಡಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ. ಅಲ್ಲದೇ  ಈ ಡೈರಿ ಸ್ಥಾಪನೆಯ ವಿಚಾರದಲ್ಲಿ ಅಧಿಕಾರಿಗಳ ಹೆಸರಿನಲ್ಲಿ ಅಮಾಯಕರಿಂದ ಹಣವನ್ನೂ ವಸೂಲಿ ಮಾಡುತ್ತಿರುವ ಗಾಳಿ ಸುದ್ದಿ ಹರಿದಾಡುತ್ತಿದೆ.

    ಈ ಎಲ್ಲ ವಿಚಾರವನ್ನು ಕೂಡ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸುಮಾರು ಬಾರಿ ಲಿಖಿತವಾಗಿ ಮತ್ತು ಮೌಖಿಕವಾಗಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಸಹ ಅಧಿಕಾರಿಗಳು ನಿಯಮ ಬಾಹಿರವಾಗಿ ಅಥವಾ ಯಾವುದೋ ಒತ್ತಡ ಹಾಗೂ ಆಮಿಷಗಳಿಂದಾಗಿ ಸಹಕಾರಿ ತತ್ವವನ್ನು ಗಾಳಿಗೆ ತೂರಿ, ಸಹಕಾರಿ ಅಧಿನಿಯಮ ನಿಬಂಧನೆಗಳಿಗೆ ವಿರುದ್ಧವಾಗಿ  ಯಾವುದೇ ವ್ಯಾಪಕ ಪ್ರಚಾರವಿಲ್ಲದೇ, ಏಕ ಪಕ್ಷೀಯವಾಗಿ ಗ್ರಾಮ ಸಭೆ ನಡೆಸಲು ಗ್ರಾಮಕ್ಕೆ ಬಂದು ಪೊಲೀಸರ ರಕ್ಷಣೆಯೊಂದಿಗೆ  ದಿನಾಂಕ 22—11—2023ರಂದು ಒಂದು  ಬಾರಿ ಅಪೂರ್ಣ ಗ್ರಾಮ ಸಭೆ ನಡೆಸಲು ವಿಫಲ ಯತ್ನ ನಡೆಸಿದ್ದಾರೆ. ಈ ಬಗ್ಗೆ ಮತ್ತೆ ಗ್ರಾಮಸ್ಥರು  ಅಧಿಕಾರಿಗಳ ಗಮನಕ್ಕೆ ತಂದು ಲೀಗಲ್ ನೋಟಿಸ್ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲಾಗಿದೆ.  ಆದರೆ ಪತ್ರಗಳಿಗಾಗಲಿ, ಲೀಗಲ್ ನೋಟಿಸ್ ಗಾಗಲಿ ಅಧಿಕಾರಿಗಳು ಪ್ರತಿಕ್ರಿಯೆ ನೀಡಿಲ್ಲ.

    ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರಿಗೆ ಈಗಿರುವ ಉಪ ಕೇಂದ್ರದ ವಿಚಾರವನ್ನು ಮರೆಮಾಚಿ, ನಮ್ಮ ಗ್ರಾಮದಲ್ಲಿ ಡೈರಿ ಇಲ್ಲ ಮಾಡಿಸಿಕೊಡಿ ಎಂದು ಸುಳ್ಳು ಹೇಳಿ, ತುಮುಲ್ ನ ಮೇಲಾಧಿಕಾರಿಗಳಿಗೆ ಕರೆ ಮಾಡಿಸಿದ್ದು,  ಸಚಿವರು ಡೈರಿ ಸ್ಥಾಪನೆ ಮಾಡುವಂತೆ ತುಮುಲ್ ನ ಮೇಲಾಧಿಕಾರಿಗಳಿಗೆ ಕರೆ ಮಾಡಿಸಿ ಮಾಡಿಕೊಡುವಂತೆ ಹೇಳಿದ್ದರು. ಹಾಲಿನ ಡೈರಿ ನೋಂದಣಿ ಮಾಡಿಸಬೇಕು ಎಂದು ವಾದಿಸುತ್ತಿರುವ ತಂಡ, ಸಚಿವರ ಮಾತುಗಳ  ಈ ವಿಡಿಯೋ ತುಣುಕನ್ನು ಇಟ್ಟುಕೊಂಡು, ಒಕ್ಕೂಟದ ಅಧಿಕಾರಿಗಳನ್ನು ಬೆದರಿಸಿ ಮತ್ತೊಮ್ಮೆ ಗ್ರಾಮಸಭೆ ನಡೆಸಿ ನೋಂದಣಿ ಮಾಡಿಸಿ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಈ ಎಲ್ಲದರ ನಡುವೆ ಗ್ರಾಮಸ್ಥರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಒಕ್ಕೂಟದ ಹಾಗೂ ಸಹಕಾರಿ ಸಂಘಗಳ ನೋಂದಣಿ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದು, ಈ ವಿಚಾರವನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ, ಹೈಕೋರ್ಟ್ ನ ದಾವೆಯನ್ನೂ ಲೆಕ್ಕಿಸದೇ, ರಾಜಕಾರಣಿಗಳ ಒತ್ತಡ ಇದೆ ಎಂದು ಹೇಳಿಕೊಂಡು, ದಿನಾಂಕ 14-02-24ರಂದು ತರಾತುರಿಯಲ್ಲಿ ಗ್ರಾಮಕ್ಕೆ ಬಂದು ಕಾನೂನು ಬಾಹಿರವಾಗಿ ಗ್ರಾಮಸಭೆ ನಡೆಸಲು ಮುಂದಾಗಿದ್ದು, ಈ ವಿಚಾರ ತಿಳಿದ ಇನ್ನುಳಿದ ಗ್ರಾಮಸ್ಥರು ಅಲ್ಲಿಗೆ ಹೋಗಿ ಅಧಿಕಾರಿಗಳೊಂದಿಗೆ ಮಾತನಾಡಲು ಪ್ರಯತ್ನಿಸಿದಾಗ, ಗ್ರಾಮದಲ್ಲಿ ಗಂಭೀರ ಸ್ವರೂಪದ ಶಾಂತಿ ಸುವ್ಯವಸ್ಥೆ ಹಾಳಾಗಿದೆ.

    ಗ್ರಾಮದಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ಇತ್ತು. ಎರಡು ಬಣಗಳ ನಡುವೆ ತೀವ್ರ ಸ್ವರೂಪದ ಗಲಾಟೆ ನಿಯಂತ್ರಿಸಲಾಗದೇ, ಕೈಮೀರುವ ಪರಿಸ್ಥಿತಿಯಲ್ಲಿ ಸ್ಥಳಕ್ಕೆ ಬಂದ ಕೋಲಾಲ ಪೊಲೀಸರು ಗಲಾಟೆ ನಿಯಂತ್ರಿಸಲು ಹರಸಾಹಸ ಪಡುವಂತಾಯಿತು. ಕೊನೆ ಸಭೆ ರದ್ದಾಗಿದೆ ಎಂದು ಹೇಳಿದ ಅಧಿಕಾರಿಗಳು ಗ್ರಾಮದ  ಒಂದು ಗುಂಪು ಎಲ್ಲರೂ ಅಲ್ಲಿಂದ ಹೋದ ನಂತರ ಏಕ ಪಕ್ಷೀಯವಾಗಿ ಮತ್ತೆ ನೆಪ ಮಾತ್ರಕ್ಕೆ ಸಭೆ ನಡೆಸುವ ನಾಟಕವಾಡಿ, ದಾಖಲೆಗಾಗಿ ಫೋಟೋಗಳನ್ನು ತೆಗೆದುಕೊಂಡು, ನಿಯಮ ಬಾಹಿರವಾಗಿ ಗ್ರಾಮಸಭೆ ಮಾಡಿಕೊಂಡು ಹೋಗಿದ್ದಾರೆ. ಅಧಿಕಾರಿಗಳ ಈ ನಡೆ ಹತ್ತು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದರಿಂದ ಗ್ರಾಮದಲ್ಲಿನ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿ, ಶಾಂತಿ ಸುವ್ಯವಸ್ಥೆ ಹಾಳಾಗಿದೆ ಎಂದು  ಗ್ರಾಮಸ್ಥರು ಆರೋಪಿಸಿದ್ದಾರೆ.

    malgonahalli

    ಸದ್ಯ ಈ ವಿಚಾರವಾಗಿ ಕರ್ತವ್ಯ ಲೋಪ, ಅಧಿಕಾರ ದುರುಪಯೋಗದ ವಿರುದ್ಧ ಹಾಗೂ ನಿಯಮ ಬಾಹಿರ ನಡೆಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಆದರೂ, ಗೃಹ ಸಚಿವರ ಹೆಸರನ್ನು ದುರುಪಯೋಗ ಪಡಿಸಿಕೊಂಡು, ಅವರ ಹೆಸರಿಗೆ ಕಳಂಕ ತರುವ ಹುನ್ನಾರದಿಂದ ನೋಂದಣಿ ಪ್ರಕ್ರಿಯೆಯನ್ನು ನಿಯಮ ಬಾಹಿರವಾಗಿ ನಡೆಸಲು ಮುಂದಾಗಿರೋದು ದೌರ್ಭಾಗ್ಯವೇ ಸರಿ. ಇದೀಗ ರಾಜಕೀಯ ಒತ್ತಡ, ಮೇಲಾಧಿಕಾರಿಗಳ ಒತ್ತಡದಿಂದಾಗಿ ಕಾನೂನು ಬಾಹಿರವಾಗಿ ನಡೆದುಕೊಂಡ ತಾಲೂಕು ಕೆಎಂಎಫ್ ಅಧಿಕಾರಿಗಳ ತಲೆದಂಡ ಆಗುವ ಲಕ್ಷಣ ಕಾಣುತ್ತಿದೆ.

    ಗ್ರಾಮದ ಸಂಪೂರ್ಣ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮದಲ್ಲಿನ ಉದ್ವಿಗ್ನ ಪರಿಸ್ಥಿತಿ ತಿಳಿಯಾದ ನಂತರ ಗ್ರಾಮಸ್ಥರೆಲ್ಲರೂ ಅಧಿಕಾರಿಗಳಿಗೆ  ಸಹಕಾರಿ ಸಂಘದ ನೋಂದಣಿಗೆ  ಮನವಿ ಕೊಡುವವರೆಗೂ ಸದ್ಯ  ಯಥಾ ಸ್ಥಿತಿ ಕಾಪಾಡಿಕೊಳ್ಳಬೇಕು,  ಗ್ರಾಮದಲ್ಲಿ ಶಾಂತಿ ಮೂಡಿ ನಂತರ ಬೇರೆ ಪ್ರಕ್ರಿಯೆ ನಡೆಸಲಿ, ಕೆಲವೇ ವ್ಯಕ್ತಿಗಳ ಸ್ವಪ್ರತಿಷ್ಠೆಗಾಗಿ ಗ್ರಾಮದ ಶ್ರೇಯೋಭಿವೃದ್ಧಿ ಹಾಳು ಮಾಡುವುದು ಬೇಡ  ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ.

    admin
    • Website

    Related Posts

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊರಟಗೆರೆ: ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ  ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಬ್ರಹ್ಮ ರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಲಕ್ಷದೀಪೋತ್ಸವ…

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.