nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹಕಾರಿ ಸಂಘದ ತತ್ವಗಳಿಗೆ ವಿರುದ್ಧವಾಗಿ ಗ್ರಾಮಸಭೆ:  ಹೈಕೋರ್ಟ್, ಲೋಕಾಯುಕ್ತ ಅಂಗಳದಲ್ಲಿ ಪ್ರಕರಣ
    ಕೊರಟಗೆರೆ February 17, 2024

    ಸಹಕಾರಿ ಸಂಘದ ತತ್ವಗಳಿಗೆ ವಿರುದ್ಧವಾಗಿ ಗ್ರಾಮಸಭೆ:  ಹೈಕೋರ್ಟ್, ಲೋಕಾಯುಕ್ತ ಅಂಗಳದಲ್ಲಿ ಪ್ರಕರಣ

    By adminFebruary 17, 2024No Comments3 Mins Read
    malgonahalli

    ತುಮಕೂರು: ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಮಲಗೋನಹಳ್ಳಿ  ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೋಂದಣಿ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಸಹಕಾರಿ ತತ್ವಗಳಿಗೆ ವಿರುದ್ಧವಾಗಿ ಗ್ರಾಮ ಸಭೆ ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದ್ದು, ಅಧಿಕಾರಿಗಳ ಏಕಪಕ್ಷೀಯ ನಿರ್ಧಾರದಿಂದಾಗಿ ಎರಡು ಮೂರು ತಂಡಗಳಾಗಿ ವಿಂಗಡನೆಯಾಗಿರುವ ಸದಸ್ಯರ ನಡುವೆ ಜಟಾಪಟಿ ನಡೆದ ಘಟನೆ ನಡೆದಿದೆ.

    ನರಸಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಉಪ ಕೇಂದ್ರ ಮಲಗೋನಹಳ್ಳಿ ಗ್ರಾಮದಲ್ಲಿ ಕಾನೂನು ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ ಇಲ್ಲಿ ಒಂದು ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ನೋಂದಣಿ ಮಾಡಿಸಲು ಒಂದು ತಂಡ ಪ್ರಯತ್ನಿಸುತ್ತಿದ್ದು,  ರಾಜಕೀಯ ಕಾರಣಗಳಿಂದ ಈಗಾಗಲೇ  ಎರಡು ಮೂರು ತಂಡಗಳಾಗಿ ವಿಂಗಡನೆಯಾಗಿರುವ ಗ್ರಾಮಸ್ಥರ ನಡುವೆ ಇದು ಅಶಾಂತಿ ಸೃಷ್ಟಿಗೆ ಕಾರಣವಾಗಿದೆ.

    ಕಾನೂನು ಬಾಹಿರವಾಗಿ ಹಾಲು ಉತ್ಪಾದಕರ ಸಹಕಾರಿ ಸಂಘದ ನೋಂದಣಿ  ಮಾಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ವಿಚಾರ ತಿಳಿದು ಗ್ರಾಮಸ್ಥರು ಸಂಬಂಧಪಟ್ಟ ಕೆಎಂಎಫ್ ತುಮುಲ್ ಅಧಿಕಾರಿಗಳಿಗೆ ಹಾಗೂ ಸಹಕಾರಿ ಸಂಘಗಳ ನೋಂದಣಿ ಅಧಿಕಾರಿಗಳಿಗೆ  ಈ ವಿಚಾರವಾಗಿ ಹಲವು ಬಾರಿ,  ದೂರು, ಕಾನೂನು ತಿಳಿವಳಿಕೆ ನೋಟಿಸ್ ನೀಡುವ ಮೂಲಕ ದೂರು ಸಲ್ಲಿಸಿರುತ್ತಾರೆ. ಈ ಗ್ರಾಮದಲ್ಲಿ ಈಗ  ಎರಡು ಮೂರು ಪಂಗಡಗಳ ನಡುವೆ ಭೀನ್ನಾಭಿಪ್ರಾಯಗಳು  ವೈಯಕ್ತಿಕ ದ್ವೇಷಗಳು ಇರುವ ಕಾರಣ ಸದ್ಯದ ಪರಿಸ್ಥಿತಿಯಲ್ಲಿ ಡೈರಿ ನೋಂದಣಿಗೆ ಅವಕಾಶ ಕೊಡಬಾರದು. ಗ್ರಾಮದಲ್ಲಿ  ಶಾಂತಿ ಮತ್ತು ಸೌಹಾರ್ದ ಸ್ಥಿತಿ ಉಂಟಾದ ನಂತರ ತಿಳಿಯಾದ ನಂತರ, ಸಂಘ ಸ್ಥಾಫನೆಗೆ ಮಾಡುವಂತೆ ಕೋರಿ ಕೊಂಡಿರುತ್ತಾರೆ ಹಾಗೂ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಹಾಲಿನ ಉಪ ಕೇಂದ್ರವನ್ನು ನಡೆಸಿಕೊಂಡು ಹೋಗುವಂತೆ ಕೋರಿದ್ದಾರೆ.

    ನರಸಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಉಪ ಕೇಂದ್ರ ಇರುವ ಕಾರಣ ರೈತರಿಗೆ ಯಾವುದೇ ಸಮಸ್ಯೆ ಇಲ್ಲ, ಒಕ್ಕೂಟದಿಂದ ದೊರೆಯಬಹುದಾದ ಸೌಲಭ್ಯಗಳಾದ ಪ್ರೋತ್ಸಾಹ ಧನ, ಬೋನಸ್, ರೈತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಹಾಸ್ಟೇಲ್ ಸೌಲಭ್ಯ, ರಾಸುಗಳಿಗೆ ಚಿಕಿತ್ಸೆ, ವಿಮಾ ಸೌಲಭ್ಯ ಎಲ್ಲವೂ ಸಮರ್ಪಕವಾಗಿ ದೊರೆಯುತ್ತಿದೆ. ಹೀಗಿದ್ದರೂ ಕೂಡ ಕೂಡ ಗ್ರಾಮದ ಕೆಲವೇ ಕೆಲವು ವ್ಯಕ್ತಿಗಳು ತಮ್ಮ ತಮ್ಮ ನಡುವಿನ ರಾಜಕೀಯ ವೈಷಮ್ಯಕ್ಕಾಗಿ, ವೈಯಕ್ತಿಕ ಪ್ರತಿಷ್ಠೆಗಳಿಗಾಗಿ ಗ್ರಾಮದಲ್ಲಿ ಡೈರಿ ಸ್ಥಾಪನೆಯ ವಿಚಾರ ಮುಂದಿಟ್ಟುಕೊಂಡು ರಾಜಕೀಯವಾಗಿ ಇತ್ಯಾದಿಯಾಗಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟು ಮಾಡಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ. ಅಲ್ಲದೇ  ಈ ಡೈರಿ ಸ್ಥಾಪನೆಯ ವಿಚಾರದಲ್ಲಿ ಅಧಿಕಾರಿಗಳ ಹೆಸರಿನಲ್ಲಿ ಅಮಾಯಕರಿಂದ ಹಣವನ್ನೂ ವಸೂಲಿ ಮಾಡುತ್ತಿರುವ ಗಾಳಿ ಸುದ್ದಿ ಹರಿದಾಡುತ್ತಿದೆ.

    ಈ ಎಲ್ಲ ವಿಚಾರವನ್ನು ಕೂಡ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸುಮಾರು ಬಾರಿ ಲಿಖಿತವಾಗಿ ಮತ್ತು ಮೌಖಿಕವಾಗಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಸಹ ಅಧಿಕಾರಿಗಳು ನಿಯಮ ಬಾಹಿರವಾಗಿ ಅಥವಾ ಯಾವುದೋ ಒತ್ತಡ ಹಾಗೂ ಆಮಿಷಗಳಿಂದಾಗಿ ಸಹಕಾರಿ ತತ್ವವನ್ನು ಗಾಳಿಗೆ ತೂರಿ, ಸಹಕಾರಿ ಅಧಿನಿಯಮ ನಿಬಂಧನೆಗಳಿಗೆ ವಿರುದ್ಧವಾಗಿ  ಯಾವುದೇ ವ್ಯಾಪಕ ಪ್ರಚಾರವಿಲ್ಲದೇ, ಏಕ ಪಕ್ಷೀಯವಾಗಿ ಗ್ರಾಮ ಸಭೆ ನಡೆಸಲು ಗ್ರಾಮಕ್ಕೆ ಬಂದು ಪೊಲೀಸರ ರಕ್ಷಣೆಯೊಂದಿಗೆ  ದಿನಾಂಕ 22—11—2023ರಂದು ಒಂದು  ಬಾರಿ ಅಪೂರ್ಣ ಗ್ರಾಮ ಸಭೆ ನಡೆಸಲು ವಿಫಲ ಯತ್ನ ನಡೆಸಿದ್ದಾರೆ. ಈ ಬಗ್ಗೆ ಮತ್ತೆ ಗ್ರಾಮಸ್ಥರು  ಅಧಿಕಾರಿಗಳ ಗಮನಕ್ಕೆ ತಂದು ಲೀಗಲ್ ನೋಟಿಸ್ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲಾಗಿದೆ.  ಆದರೆ ಪತ್ರಗಳಿಗಾಗಲಿ, ಲೀಗಲ್ ನೋಟಿಸ್ ಗಾಗಲಿ ಅಧಿಕಾರಿಗಳು ಪ್ರತಿಕ್ರಿಯೆ ನೀಡಿಲ್ಲ.

    ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರಿಗೆ ಈಗಿರುವ ಉಪ ಕೇಂದ್ರದ ವಿಚಾರವನ್ನು ಮರೆಮಾಚಿ, ನಮ್ಮ ಗ್ರಾಮದಲ್ಲಿ ಡೈರಿ ಇಲ್ಲ ಮಾಡಿಸಿಕೊಡಿ ಎಂದು ಸುಳ್ಳು ಹೇಳಿ, ತುಮುಲ್ ನ ಮೇಲಾಧಿಕಾರಿಗಳಿಗೆ ಕರೆ ಮಾಡಿಸಿದ್ದು,  ಸಚಿವರು ಡೈರಿ ಸ್ಥಾಪನೆ ಮಾಡುವಂತೆ ತುಮುಲ್ ನ ಮೇಲಾಧಿಕಾರಿಗಳಿಗೆ ಕರೆ ಮಾಡಿಸಿ ಮಾಡಿಕೊಡುವಂತೆ ಹೇಳಿದ್ದರು. ಹಾಲಿನ ಡೈರಿ ನೋಂದಣಿ ಮಾಡಿಸಬೇಕು ಎಂದು ವಾದಿಸುತ್ತಿರುವ ತಂಡ, ಸಚಿವರ ಮಾತುಗಳ  ಈ ವಿಡಿಯೋ ತುಣುಕನ್ನು ಇಟ್ಟುಕೊಂಡು, ಒಕ್ಕೂಟದ ಅಧಿಕಾರಿಗಳನ್ನು ಬೆದರಿಸಿ ಮತ್ತೊಮ್ಮೆ ಗ್ರಾಮಸಭೆ ನಡೆಸಿ ನೋಂದಣಿ ಮಾಡಿಸಿ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಈ ಎಲ್ಲದರ ನಡುವೆ ಗ್ರಾಮಸ್ಥರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಒಕ್ಕೂಟದ ಹಾಗೂ ಸಹಕಾರಿ ಸಂಘಗಳ ನೋಂದಣಿ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದು, ಈ ವಿಚಾರವನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ, ಹೈಕೋರ್ಟ್ ನ ದಾವೆಯನ್ನೂ ಲೆಕ್ಕಿಸದೇ, ರಾಜಕಾರಣಿಗಳ ಒತ್ತಡ ಇದೆ ಎಂದು ಹೇಳಿಕೊಂಡು, ದಿನಾಂಕ 14-02-24ರಂದು ತರಾತುರಿಯಲ್ಲಿ ಗ್ರಾಮಕ್ಕೆ ಬಂದು ಕಾನೂನು ಬಾಹಿರವಾಗಿ ಗ್ರಾಮಸಭೆ ನಡೆಸಲು ಮುಂದಾಗಿದ್ದು, ಈ ವಿಚಾರ ತಿಳಿದ ಇನ್ನುಳಿದ ಗ್ರಾಮಸ್ಥರು ಅಲ್ಲಿಗೆ ಹೋಗಿ ಅಧಿಕಾರಿಗಳೊಂದಿಗೆ ಮಾತನಾಡಲು ಪ್ರಯತ್ನಿಸಿದಾಗ, ಗ್ರಾಮದಲ್ಲಿ ಗಂಭೀರ ಸ್ವರೂಪದ ಶಾಂತಿ ಸುವ್ಯವಸ್ಥೆ ಹಾಳಾಗಿದೆ.

    ಗ್ರಾಮದಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ಇತ್ತು. ಎರಡು ಬಣಗಳ ನಡುವೆ ತೀವ್ರ ಸ್ವರೂಪದ ಗಲಾಟೆ ನಿಯಂತ್ರಿಸಲಾಗದೇ, ಕೈಮೀರುವ ಪರಿಸ್ಥಿತಿಯಲ್ಲಿ ಸ್ಥಳಕ್ಕೆ ಬಂದ ಕೋಲಾಲ ಪೊಲೀಸರು ಗಲಾಟೆ ನಿಯಂತ್ರಿಸಲು ಹರಸಾಹಸ ಪಡುವಂತಾಯಿತು. ಕೊನೆ ಸಭೆ ರದ್ದಾಗಿದೆ ಎಂದು ಹೇಳಿದ ಅಧಿಕಾರಿಗಳು ಗ್ರಾಮದ  ಒಂದು ಗುಂಪು ಎಲ್ಲರೂ ಅಲ್ಲಿಂದ ಹೋದ ನಂತರ ಏಕ ಪಕ್ಷೀಯವಾಗಿ ಮತ್ತೆ ನೆಪ ಮಾತ್ರಕ್ಕೆ ಸಭೆ ನಡೆಸುವ ನಾಟಕವಾಡಿ, ದಾಖಲೆಗಾಗಿ ಫೋಟೋಗಳನ್ನು ತೆಗೆದುಕೊಂಡು, ನಿಯಮ ಬಾಹಿರವಾಗಿ ಗ್ರಾಮಸಭೆ ಮಾಡಿಕೊಂಡು ಹೋಗಿದ್ದಾರೆ. ಅಧಿಕಾರಿಗಳ ಈ ನಡೆ ಹತ್ತು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದರಿಂದ ಗ್ರಾಮದಲ್ಲಿನ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿ, ಶಾಂತಿ ಸುವ್ಯವಸ್ಥೆ ಹಾಳಾಗಿದೆ ಎಂದು  ಗ್ರಾಮಸ್ಥರು ಆರೋಪಿಸಿದ್ದಾರೆ.

    malgonahalli

    ಸದ್ಯ ಈ ವಿಚಾರವಾಗಿ ಕರ್ತವ್ಯ ಲೋಪ, ಅಧಿಕಾರ ದುರುಪಯೋಗದ ವಿರುದ್ಧ ಹಾಗೂ ನಿಯಮ ಬಾಹಿರ ನಡೆಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಆದರೂ, ಗೃಹ ಸಚಿವರ ಹೆಸರನ್ನು ದುರುಪಯೋಗ ಪಡಿಸಿಕೊಂಡು, ಅವರ ಹೆಸರಿಗೆ ಕಳಂಕ ತರುವ ಹುನ್ನಾರದಿಂದ ನೋಂದಣಿ ಪ್ರಕ್ರಿಯೆಯನ್ನು ನಿಯಮ ಬಾಹಿರವಾಗಿ ನಡೆಸಲು ಮುಂದಾಗಿರೋದು ದೌರ್ಭಾಗ್ಯವೇ ಸರಿ. ಇದೀಗ ರಾಜಕೀಯ ಒತ್ತಡ, ಮೇಲಾಧಿಕಾರಿಗಳ ಒತ್ತಡದಿಂದಾಗಿ ಕಾನೂನು ಬಾಹಿರವಾಗಿ ನಡೆದುಕೊಂಡ ತಾಲೂಕು ಕೆಎಂಎಫ್ ಅಧಿಕಾರಿಗಳ ತಲೆದಂಡ ಆಗುವ ಲಕ್ಷಣ ಕಾಣುತ್ತಿದೆ.

    ಗ್ರಾಮದ ಸಂಪೂರ್ಣ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮದಲ್ಲಿನ ಉದ್ವಿಗ್ನ ಪರಿಸ್ಥಿತಿ ತಿಳಿಯಾದ ನಂತರ ಗ್ರಾಮಸ್ಥರೆಲ್ಲರೂ ಅಧಿಕಾರಿಗಳಿಗೆ  ಸಹಕಾರಿ ಸಂಘದ ನೋಂದಣಿಗೆ  ಮನವಿ ಕೊಡುವವರೆಗೂ ಸದ್ಯ  ಯಥಾ ಸ್ಥಿತಿ ಕಾಪಾಡಿಕೊಳ್ಳಬೇಕು,  ಗ್ರಾಮದಲ್ಲಿ ಶಾಂತಿ ಮೂಡಿ ನಂತರ ಬೇರೆ ಪ್ರಕ್ರಿಯೆ ನಡೆಸಲಿ, ಕೆಲವೇ ವ್ಯಕ್ತಿಗಳ ಸ್ವಪ್ರತಿಷ್ಠೆಗಾಗಿ ಗ್ರಾಮದ ಶ್ರೇಯೋಭಿವೃದ್ಧಿ ಹಾಳು ಮಾಡುವುದು ಬೇಡ  ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ.

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು…

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.