nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ

    November 11, 2025

    ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ

    November 11, 2025
    Facebook Twitter Instagram
    ಟ್ರೆಂಡಿಂಗ್
    • ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
    • ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
    • ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ
    • ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
    • ಮನೆ–ಮನೆಗೆ ಪೊಲೀಸ್‌: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
    • ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲಿ ಪ್ರತಿಧ್ವನಿಸಿದ ಬಾಲ್ಯ ವಿವಾಹ, ಪೋಕ್ಸೋ ಕೇಸ್
    • ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
    • ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮೀಣ ವಿದ್ಯುದ್ದೀಕರಣ ಯೋಜನೆ ಅನುಷ್ಠಾನದಲ್ಲಿ ಗಂಭೀರ ಲೋಪಗಳ ಕುರಿತು ಸಿಎಜಿ ವರದಿಯಲ್ಲಿ ಉಲ್ಲೇಖ
    ರಾಜ್ಯ ಸುದ್ದಿ October 6, 2022

    ಗ್ರಾಮೀಣ ವಿದ್ಯುದ್ದೀಕರಣ ಯೋಜನೆ ಅನುಷ್ಠಾನದಲ್ಲಿ ಗಂಭೀರ ಲೋಪಗಳ ಕುರಿತು ಸಿಎಜಿ ವರದಿಯಲ್ಲಿ ಉಲ್ಲೇಖ

    By adminOctober 6, 2022No Comments2 Mins Read
    vedutha

    ಭಾರತದ ನಿಯಂತ್ರಕರು ಮತ್ತು ಮಹಾಲೇಖಪಾಲರ (ಸಿಎಜಿ) ವರದಿ, ಕೇಂದ್ರ ಸರ್ಕಾರದ ದೀನದಯಾಳ್ ಉಪಾಧ್ಯಾಯ ಗ್ರಾಮ ಜಯೋತಿ ಯೋಜನೆ (ಡಿಡಿಯುಜಿಜೆವೈ) ಹಾಗೂ ಪ್ರಧಾನ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜನೆ (ಸೌಭಾಗ್ಯ) ಯೋಜನೆಗಳಡಿ ಕರ್ನಾಟಕದಲ್ಲಿ ಐದು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ (ಎಸ್ಕಾಂಗಳು), ಗುತ್ತಿಗೆಗಳ ಮಂಜೂರಾತಿ ಹಾಗೂ ನಿಧಿ ನಿರ್ವಹಣೆಯಡಿ ಉಂಟಾಗಿರುವ ಕೊರತೆಗಳು ಮತ್ತು ಲೋಪಗಳನ್ನು ಉಲ್ಲೇಖಿಸಿದೆ.

    ರಾಜ್ಯದಲ್ಲಿ ವಿದ್ಯುತ್ ಸಂಪರ್ಕವಿಲ್ಲದ 39 ಗ್ರಾಮಗಳು, ಭಾಗಶಃ ವಿದ್ಯುತ್ ಸಂಪರ್ಕವಿರುವ ೧೩,೯೪೯ ಗ್ರಾಮಗಳು ಹಾಗೂ ೫,೭೦,೯೨೨ ಬಿಪಿಎಲ್ ಕುಟುಂಬಗಳಿಗೆ ಈ ಯೋಜನೆಗಳಡಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದರೂ ಸಹ, ಯೋಜನೆಯಡಿ ಉಂಟಾಗಿರುವ ಲೋಪಗಳು ಹಾಗೂ ಅದರಿಂದ ಆಗಿರುವ ಸಮಯ ಮತ್ತು ಹಣದ ನಷ್ಟದ ಕುರಿತು ನಿಗಾವಹಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಎಸ್ಕಾಂಗಳ ವೈಫಲ್ಯದ ಕುರಿತು ವರದಿಯಲ್ಲಿ ಉಲ್ಲೇಖಿಸಲಾಗಿದೆ.


    Provided by
    Provided by

    ಸಿಎಜಿ ಆಡಿಟ್ ಅಡಿ ಪರಿಗಣಿಸಲಾಗಿದ್ದಂತಹ ಐದು ಎಸ್ಕಾಂಗಳ ಪೈಕಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್), ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ), ಹಾಗೂ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ)ಗಳು ಸೇರಿವೆ.

    ಗುತ್ತಿಗೆ ಅನುಮೋದನೆ ಮಾಡುವಲ್ಲಿ ಉಂಟಾಗಿರುವ ಪ್ರಮುಖ ಲೋಪಗಳ ಕುರಿತು ಉಲ್ಲೇಖಿಸಿರುವ ವರದಿಯು, ಎಲ್ಲಾ ಐದು ಎಸ್ಕಾಂಗಳು, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ಕಾಯ್ದೆ (ಕೆಟಿಪಿಪಿ), ಕಲಂ ೪ಜಿ ಅಡಿ ವಿನಾಯಿತಿಯನ್ನು ಪಡೆದು, ಟೆಂಡರ್‌ ಗಳನ್ನು ಆಹ್ವಾನಿಸದೆಯೇ ಯೋಜನೆ ನಿರ್ವಹಣಾ ಏಜೆನ್ಸಿಯನ್ನು (ಪಿಎಂಎ) ನೇಮಕಾ ಮಾಡಿದೆ ಎಂದು ತಿಳಿಸಿದೆ. ಜೊತೆಗೆ, ಈ ಯೋಜನೆಯಡಿ ನೀಡಿದ್ದಂತಹ ಮಿತಿಗಿಂತಲೂ ಹೆಚ್ಚಿನ ದರದಲ್ಲಿ ಪಿಎಂಎ ನೇಮಕಾತಿಯ ಕುರಿತೂ ಉಲ್ಲೇಖಿಸಿದೆ.

    ಗುತ್ತಿಗೆ ಮಂಜೂರಾತಿಗೆ ಸಂಬಂಧಪಟ್ಟಂತೆ ಬಿಡ್ಡರ್ ಅನ್ನು ಆಯ್ಕೆ ಮಾಡುವಲ್ಲಿ ಲೋಪಗಳಾಗಿವೆ ಹಾಗೂ ಮೌಲ್ಯಮಾಪನಕ್ಕಾಗಿ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ಸಲ್ಲಿಸುವಲ್ಲಿ ವಿಫಲವಾಗಿದ್ದಂತಹ ಪ್ರತಿಕ್ರಿಯಸದ ಬಿಡ್ಡರ್‌ ಗಳನ್ನೂ ಸಹ ಪರಿಗಣಿಸಲಾಗಿರುವ ಅಂಶಗಳು ಬಹಿರಂಗಗೊಂಡಿವೆ. “ಬಿಡ್ ಷರತ್ತುಗಳ ಪ್ರಕಾರ ಅಗತ್ಯವಿದ್ದಂತಹ ಅಂಶಗಳನ್ನು ಪೂರೈಸದೇ ಇರುವಂತಹ ಬಿಡ್ಡರ್‌ ಗಳನ್ನು ಪರಿಗಣಿಸಿರುವ ಕುರಿತು ಯಾವುದೇ ಸ್ಪಷ್ಟನೆಗಳಿಲ್ಲ. ಮೇಲಾಗಿ, ಸ್ಪಂದಿಸದ ಬಿಡ್ಡರುಗಳಿಗೆ ಗುತ್ತಿಗೆ ನೀಡಿರುವುದು ಕೆಟಿಪಿಪಿ ನಿಯಮಗಳ ಉಲ್ಲಂಘನೆಯಾಗಿದೆ,” ಎಂದು ಆಡಿಟ್ ವರದಿಯಲ್ಲಿ ತಿಳಿಸಲಾಗಿದೆ.

    ವರದಿಯ ಪ್ರಕಾರ, ಎಸ್ಕಾಂಗಳು ನಿಗಧಿತ ಅವಧಿಗಿಂತಲೂ ೧೨ ರಿಂದ ೩೭ ತಿಂಗಳು ಹೆಚ್ಚು ಸಮಯ ತೆಗೆದುಕೊಂಡಿದ್ದು, ಈ ಯೋಜನೆಯ ಫಲಾನುಭವಿಗಳನ್ನು ಮುಂದೂಡಿರುವುದು ಕಂಡು ಬಂದಿದೆ. ಇದಕ್ಕೆ ನೀಡಿರುವ ಪ್ರಮುಖ ಕಾರಣವೇನೆಂದರೆ ಗುತ್ತಿಗೆ ಮಂಜೂರಾತಿಯಲ್ಲಿ ವಿಳಂಬ ಹಾಗೂ ಕಾಮಗಾರಿ ಆರಂಭಿಸುವಲ್ಲಿ ಆಗಿರುವ ವಿಳಂಬ ಎಂದು ನೀಡಲಾಗಿದೆ. ಕೆಲವು ಪ್ರಕರಣಗಳಲ್ಲಿ, ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅರಣ್ಯ ಮತ್ತು ರೈಲ್ವೆ ಪ್ರಾಧಿಕಾರಗಳಿಂದ ಶಾಸನಬದ್ಧ ತೀರುವಳಿಗಳನ್ನು ಪಡೆಯುವಲ್ಲಿ ವಿಳಂಬವಾಗಿರುವುದನ್ನೂ ಕಾರಣಗಳೆಂದು ನೀಡಲಾಗಿದೆ.

    ಜೊತೆಗೆ, ಎಸ್ಕಾಂಗಳು ವಿವರವಾದ ಯೋಜನಾ ವರದಿಗಳನ್ನು (ಡಿಪಿಆರ್) ತಯಾರಿಸುವಾಗ ಕ್ಷೇತ್ರ ಸಮೀಕ್ಷೆಗಳನ್ನು ನಡೆಸಿಲ್ಲ. ಇದರಿಂದಾಗಿ ಅಗತ್ಯವಿರುವ ಸಾಮಗ್ರಿಗಳ ಪ್ರಮಾಣದಲ್ಲಿ ವ್ಯತ್ಯಾಸವಾಗಿದ್ದು, ವೆಚ್ಚಗಳು ಅನೇಕ ಬಾರಿ ಮರುಹಂಚಿಕೆಯಾಗಿರುವುದು ಬಹಿರಂಗಗೊಂಡಿದೆ.

    ಮಂಜೂರಾಗಿರುವಂತಹ ಒಟ್ಟು ವೆಚ್ಚಕ್ಕಿಂತ ರೂ.೨೨೫.೪೯ ಕೋಟಿ ಹೆಚ್ಚುವರಿ ಹಣಕಾಸಿನ ಹೊರೆ ಉಂಟಾಗಿದ್ದು, ಡಿಡಿಯುಜಿಜೆವೈ ಅಡಿ ಯಾವುದೇ ಅರ್ಹ ಅನುದಾನ ಇಲ್ಲದಿರುವ ಅಂಶವನ್ನೂ ದಾಖಲಿಸಲಾಗಿದೆ. ರಾಜ್ಯ ಸರ್ಕಾರ ಹಾಗೂ ಎಸ್ಕಾಂಗಳು ಯೋಜನೆಯ ಪ್ರಗತಿಯನ್ನು ಕಾಲಕಾಲಕ್ಕೆ ನಿಗಾವಣೆ ಮಾಡುವಲ್ಲಿ ವಿಫಲವಾಗಿರುವ ವಿಷಯವನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಡಿಡಿಯುಜಿಜೆವೈ ಹಾಗೂ ಸೌಭಾಗ್ಯ ಎರಡೂ ಯೋಜನೆಗಳು ಕೇಂದ್ರ ಸರ್ಕಾರದ ಉಪಕ್ರಮಗಳಾಗಿದ್ದು, ದೇಶದ ಪ್ರತಿಯೊಂದು ಗ್ರಾಮದ, ವಿದ್ಯುತ್ ಸಂಪರ್ಕ ಇಲ್ಲದಿರುವಂತಹ ಪ್ರತಿಯೊಂದು ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಉದ್ದೇಶವನ್ನು ಹೊಂದಿದೆ.

    ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    November 8, 2025

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    ತುಮಕೂರು: ಕಾಮಗಾರಿ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಕೇಳಿದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್‌ ತಿಪಟೂರು ವಿಭಾಗದ…

    ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ

    November 11, 2025

    ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ

    November 11, 2025

    ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!

    November 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.