nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವ ರಾಜಣ್ಣರವರಿಂದ ತಳಸಮುದಾಯಗಳಿಗೆ ಪ್ರಾತಿನಿಧ್ಯ ಸಿಕ್ಕಿದೆ: ಸ್ವಾತಂತ್ರ್ಯೋತ್ಸವದಲ್ಲಿ ಆರ್.ರಾಜೇಂದ್ರ ಹೇಳಿಕೆ
    ಮಧುಗಿರಿ August 16, 2024

    ಸಚಿವ ರಾಜಣ್ಣರವರಿಂದ ತಳಸಮುದಾಯಗಳಿಗೆ ಪ್ರಾತಿನಿಧ್ಯ ಸಿಕ್ಕಿದೆ: ಸ್ವಾತಂತ್ರ್ಯೋತ್ಸವದಲ್ಲಿ ಆರ್.ರಾಜೇಂದ್ರ ಹೇಳಿಕೆ

    By adminAugust 16, 2024No Comments2 Mins Read
    rajendra rajanna

    ಮಧುಗಿರಿ: ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ತರುವ ಮೂಲಕ ಸಣ್ಣ ಸಣ್ಣ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವಕಾಶ ಕಲ್ಪಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು.

    ಪಟ್ಟಣದ ರಾಜೀವ ಗಾಂಧಿ ಕ್ರೀಡಾಂಗಣದಲ್ಲಿ ಗುರುವಾರ ಮಧುಗಿರಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ  ವತಿಯಿಂದ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ  ಮಾತನಾಡಿದ ಅವರು. ಕೆ. ಎನ್. ರಾಜಣ್ಣನವರು  ಸಹಕಾರಿ ಕ್ಷೇತ್ರದಲ್ಲಿ ತಂದಿರುವ ಮೀಸಲಾತಿ ಇಡೀ ರಾಜ್ಯ ವ್ಯಾಪ್ತಿಗೆ ಅನ್ವಯವಾಗಲಿದ್ದು, ಸಣ್ಣ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಿಸಿದೆ ಇದರಿಂದ ಡಾ. ಬಿ. ಆರ್. ಅಂಬೇಡ್ಕರ್ ರವರ ಆಶಯ ಸಾಕಾರಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ರಾಜಣ್ಣ ರವರು ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂದು ಸಂಕಲ್ಪಿಸಿದ್ದು, ಏಕಶಿಲಾ ಬೆಟ್ಟಕ್ಕೆ ಕೇಬಲ್ ಕಾರ್ ಅಳವಡಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಅಧಿಕಾರಿಗಳು ಮುತುವರ್ಜಿ ವಹಿಸಿ 18 ಎಕರೆ ಜಾಗ ನಿಗದಿಪಡಿಸಿದ್ದಾರೆ,

    ತಾಲೂಕಿನಲ್ಲಿ 67988 ಫಲಾನುಭವಿಗಳಿಗೆ  ಗೃಹಲಕ್ಷ್ಮಿ ಯೋಜನೆ ಅಡಿ  134 ಕೋಟಿ ರೂಗಳು ಜಮೆ ಆಗಿದೆ.35600 ರೈತರ ಖಾತೆಗಳಿಗೆ ಬೆಳೆ ವಿಮೆ ಯೋಜನೆ ಅಡಿ  26 ಕೋಟಿ ರೂಗಳು ಜಮೆ ಆಗಿದೆ ಎಂದರು.

    ಲೋಕೋಪಯೋಗಿ ಇಲಾಖೆಯ 25 ಕೋಟಿ ರೂಗಳ ಅನುದಾನದಲ್ಲಿ ಮಧುಗಿರಿ ಪಟ್ಟಣವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ,  ತಾಲೂಕಿನ 42 ಕೆರೆಗಳನ್ನು ಸಣ್ಣ ನೀರಾವರಿ ಇಲಾಖೆ ವತಿಯಿಂದ ಸುಮಾರು 268 ಕೋಟಿ ರೂಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ದೊಡ್ಡೇರಿ ಹೋಬಳಿಯ  8 ಕೆರೆಗಳನ್ನು ಎತ್ತಿನಹೊಳೆ ಯೋಜನೆ ಅಡಿ ಪುನಶ್ಚೇತನ ಗೊಳಿಸಲಾಗುವುದು.

    ರಾಷ್ಟ್ರೀಯ ಹಬ್ಬಗಳ ಆಚರಣೆ ಸಂದರ್ಭದಲ್ಲಿ ನಡೆಯುವ ಪಥ ಸಂಚಲನದಲ್ಲಿ ಭಾಗವಹಿಸುವ  ವಿದ್ಯಾರ್ಥಿಗಳಲ್ಲಿ ಶಿಸ್ತು ಇರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

    ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸರಿಸುಮಾರು 200 ವರ್ಷಗಳಷ್ಟು ಕಾಲ ಭಾರತವನ್ನು ಆಳಿದ ಬ್ರಿಟಿಷರಿಂದ ಮುಕ್ತವಾದ ದಿನವೇ ಆಗಸ್ಟ್ 15. ಕೆಲವು ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಸುದೀರ್ಘ ಹೋರಾಟದ ಫಲವಾಗಿ ಆಗಸ್ಟ್ 15 ರಂದು ಭಾರತವು ಸ್ವಾತಂತ್ರ್ಯವನ್ನು ಗಳಿಸಿತು. ಈ ಸವಿನೆನಪಿಗಾಗಿ ಭಾರತದಾದಂತ್ಯ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ ಎಂದರು.

    ತಹಶೀಲ್ದಾರ್ ಸಿಗ್ಗಬತ್ ವುಲ್ಲ, ತಾ. ಪಂ.ಇಒ ಲಕ್ಷ್ಮಣ್, ಬಿ ಇ ಒ ಹನುಮಂತರಾಯಪ್ಪ,ಡಿವೈಎಸ್ಪಿ  ಎನ್. ಬಿ. ರಾಮಚಂದ್ರಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ  ನಾಗೇಶ್ ಬಾಬು, ಕ. ಸಾ. ಪ. ಅಧ್ಯಕ್ಷೆ  ಸಹನಾ ನಾಗೇಶ್,ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ,ಪುರಸಭೆ ಮಾಜಿ ಅಧ್ಯಕ್ಷರಾದ  ಎನ್. ಗಂಗಣ್ಣ,ಮೊಹಮ್ಮದ್ ಅಯ್ಯೂಬ್, ಸದಸ್ಯರಾದ ಮಂಜುನಾಥ್ಆ ಚಾರ್,ಲಾಲಾ ಪೇಟೆ ಮಂಜುನಾಥ್, ಅಲೀಮ್, ಅಲ್ಪಸಂಖ್ಯಾತರ ನಗರ ಅಧ್ಯಕ್ಷ ಸೈಯದ್ ಅಲಾವುದ್ದೀನ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.