ಪಾವಗಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜಾರಿಯಾಗಿ ಇದುವರೆಗೂ ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಯಡಿ 323 ಕೋಟಿ ಹಣ ತಾಲೂಕಿಗೆ ಬಿಡುಗಡೆಯಾಗಿದೆ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷರು, ಜಿ.ಪಂ ಮಾಜಿ ಸದಸ್ಯರಾದ ಪಾಪಣ್ಣ ತಿಳಿಸಿದರು.
ಅವರು ತಾಪಂ ಆವರಣದಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೃಹಲಕ್ಷ್ಮಿ ಯೋಜನೆ ದೇಶದಲ್ಲೇ ಮಾದರಿ ಯೋಜನೆಯಾಗಿದೆ. ಕರ್ನಾಟಕದಲ್ಲಿ ಈ ಯೋಜನೆ ಘೋಷಣೆಯಾದ ಬಳಿಕ ಹಲವಾರು ರಾಜ್ಯಗಳಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಬೇರೆ ಬೇರೆ ಹೆಸರಿನಲ್ಲಿ ಹಲವಾರು ರಾಜ್ಯಗಳಲ್ಲಿ ಘೋಷಣೆ ಮಾಡಲಾಗಿದೆ. ಬಡ ಮಧ್ಯಮ ವರ್ಗದ ಪಾಲಿಗೆ ಯೋಜನೆ ಶಕ್ತಿದಾಯಕವಾಗಿದೆ. ಇದರಿಂದ ಲಕ್ಷಾಂತರ ಕುಟುಂಬಗಳು ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿದೆ. ಕುಟುಂಬ ನಿರ್ವಹಣೆ, ಶಿಕ್ಷಣ, ವೃದ್ಧರ ಆರೋಗ್ಯ ಸೇರಿದಂತೆ ಹಲವಾರು ರೀತಿಯಲ್ಲಿ ಗೃಹಲಕ್ಷ್ಮಿ ಮನೆಗಳಲ್ಲಿ ಬೆಳಕು ನೀಡುವ ಯೋಜನೆಯಾಗಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯಡಿ ತಾಲೂಕಿನಲ್ಲಿ 56,405 ಫಲಾನುಭವಿಗಳಿಗೆ 320.41 ಕೋಟಿ ರೂ. ಬಿಡುಗಡೆಯಾಗಿದೆ. ಯುವ ನಿಧಿಯಡಿ ಪದವಿ ಮುಗಿಸಿದ 11,238 ವಿದ್ಯಾರ್ಥಿಗಳಿಗೆ ಇದುವರೆಗೂ 3,33,63,000 ಕೋಟಿ ರೂ. ಬಿಡುಗಡೆಯಾಗಿದೆ. ಗೃಹಜ್ಯೋತಿ ಯೋಜನೆಯಡಿ 49,558 ಫಲಾನುಭವಿಗಳು ಉಚಿತ ವಿದ್ಯುತ್ ಪಡೆಯುತ್ತಿದ್ದು, ಶಕ್ತಿ ಯೋಜನೆಯಲ್ಲಿ ಇದುವರೆಗೂ 32,59,59,744 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಇದರಿಂದ 33,13,55,703 ಆದಾಯ ಬಂದಿದೆ. ಯಾರೇ ಆಗಲಿ ಯಾವುದೇ ಪಕ್ಷವಾಗಲಿ ಅರ್ಹರಿಗೆ ಕಡ್ಡಾಯವಾಗಿ ರಾಜ್ಯ ಸರ್ಕಾರದ ಸೌಲಭ್ಯ ಕಲ್ಪಿಸಬೇಕೆಂದರು.
ಅರ್ಹರು ಸೌಲಭ್ಯ ವಂಚಿತರಾಗಿದ್ದಲ್ಲಿ ಅದರ ಹೊಣೆಗಾರಿಕೆ ನಿಮ್ಮದೇ ತಾಲೂಕು ಪಂಚಾಯಿತಿ ಇಒ ಮಧುಸೂದನ್ ಮಾತನಾಡಿ, ಗೃಹಲಕ್ಷ್ಮಿ, ಯುವನಿಧಿ, ಶಕ್ತಿ ಯೋಜನೆ ಹಾಗೂ ಗೃಹಜ್ಯೋತಿ ಯೋಜನೆಗಳಿಗೆ ಅರ್ಹರನ್ನು ಕಡ್ಡಾಯವಾಗಿ ನೋಂದಾಯಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಬಡ ಮಧ್ಯಮ ವರ್ಗದ ಏಳಿಗೆಗಾಗಿ ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗಳಿಂದ ಅರ್ಹರು ಯಾರೂ ಕೂಡ ವಂಚಿತರಾಗಬಾರದೆಂಬ ದೃಷ್ಟಿಯಿಂದ ಸಭೆ ನಡೆಸುತ್ತಿದ್ದು, ಅರ್ಹರು ಸೌಲಭ್ಯ ವಂಚಿತರಾಗಿದ್ದಲ್ಲಿ ಅದರ ಹೊಣೆಗಾರಿಕೆ ನಿಮ್ಮದೇ ಎಂದರು.
ಸಭೆಯಲ್ಲಿ ಗ್ಯಾರಂಟಿ ಸಮಿತಿ ಸದಸ್ಯರುಗಳಾದ ದಿವಾಕರಪ್ಪ, ಫಕ್ರುದ್ದೀನ್, ಉಮೇಶ್, ವೀರಾಂಜನೇಯ, ಸುಮಾ ಅನಿಲ್, ಸಿಡಿಪಿಒ ಸುಜಾತ, ಬೆಸ್ಕಾಂ ಎಇಇ ಕೃಷ್ಣಮೂರ್ತಿ, ಕೆಎಸ್ ಆರ್ ಟಿಸಿ ಶರಣ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
