nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣರಾಜ್ಯೋತ್ಸವ: ತುಮಕೂರು ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ ಸಮೂಹ ಚಿತ್ರಕಲಾ ಪ್ರದರ್ಶನ
    ತುಮಕೂರು January 27, 2024

    ಗಣರಾಜ್ಯೋತ್ಸವ: ತುಮಕೂರು ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ ಸಮೂಹ ಚಿತ್ರಕಲಾ ಪ್ರದರ್ಶನ

    By adminJanuary 27, 2024No Comments2 Mins Read
    chithrakala

    ತುಮಕೂರು: ಕಲೆ ಯಾರೊಬ್ಬರ ಸೊತ್ತಲ್ಲ ಹಾಗೆಯೇ ಕಲೆಯು ಸುಖಾಸುಮ್ಮನೆ ಒಲಿಯುವಂತದ್ದಲ್ಲ ಅದು ಶ್ರಮದಿಂದ ಮೈಮನಸ್ಸಿನಲ್ಲಿ ಪಡೆದುಕೊಳ್ಳುವಂತಹದ್ದು ಎಂದು ನಾಡಿನ ಹಿರಿಯ ಚಿತ್ರಕಲಾವಿದರು ಹಾಗೂ ನಿವೃತ್ತ ಶಿಕ್ಷಕರಾದ ಪಿ.ಎಸ್.ಗ್ರಾಮ್ ಪುರೋಹಿತ್ ಅಭಿಪ್ರಾಯ ವ್ಯಕ್ತಪಡಿಸಿದರು.

    ನಗರದ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವಿದ್ಯಾರ್ಥಿಗಳ ಸಮೂಹ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ವಿದ್ಯಾರ್ಥಿಗಳು ಮೊದಲು ನಾಡು, ನುಡಿ, ಭಾಷೆ, ಸಂಸ್ಕೃತಿಯ ಬಗ್ಗೆ ತಿಳಿದುಕೊಳ್ಳಬೇಕು ಹಾಗೂ ವಿನಯ, ತಾಳ್ಮೆ ಮೈಗೂಡಿಸಿಕೊಂಡು ನಡೆಯುವ ದಾರಿಯಲ್ಲಿ ಸಾಗಿದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ. ದೇಶದಲ್ಲಿ ಹೋರಾಟದ ಕಿಚ್ಚಿನಿಂದ ಹಲವು ಸಾವು-ನೋವುಗಳ ಸಂದರ್ಭಗಳು ಬಂದು ಹೋಗಿವೆ. ಇದರ ಮಧ್ಯೆಯೂ ಬಡತನದಿಂದ ಬಂದ ಹಲವರು ಇಂದು ಜ್ಞಾನಿಗಳಾಗಿ ನಮ್ಮ ಮುಂದೆ ಬಂದು ನಿಂತಿದ್ದಾರೆ. ಅಂತಹ ಮಹಾನ್ ನಾಯಕರ ಇತಿಹಾಸವನ್ನು ಅರಿತು ನಡೆದರೆ ಬದುಕಿಗೊಂದು ಅರ್ಥ ಬರುತ್ತದೆ ಎಂದು ಹೇಳಿದರು.

    ಕಲೆ ಎಲ್ಲಾರಿಗೂ ಒಲಿಯುವುದಿಲ್ಲ. ಅದು ಒಮ್ಮೆ ಒಲಿದರೆ ಅಷ್ಟು ಸುಲಭವಾಗಿ ಬಿಟ್ಟು ಹೋಗುವುದಿಲ್ಲ ಕಲೆ, ಸಂಸ್ಕೃತಿ ಉಳಿಸುವ ಕೆಲಸ ಸಧ್ಯ ಆಳುವ ಸರ್ಕಾರಗಳಿಂದ ಆಗಬೇಕಿದೆ. ವಿದ್ಯಾರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಡೆ ಗಮನಕೊಡಬೇಕು. ಹಿರಿಯರ ಹಾಗೂ ಉಪನ್ಯಾಸಕರ ಮಾರ್ಗದರ್ಶನ ಪಡೆದು ತಮ್ಮ ವಿಷಯಗಳಲ್ಲಿ ಪರಿಣಿತಿ ಹೊಂದಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಚಿತ್ರಕಲಾವಿದ ಜಿ.ಎಲ್.ನಟರಾಜ ಅವರು ಮಾತನಾಡಿ, ರಾಜ್ಯದಲ್ಲಿ 2 ಸರ್ಕಾರಿ ಚಿತ್ರಕಲಾ ಪದವಿ ಕಾಲೇಜುಗಳಿದ್ದು, ಮೂಲಭೂತ ಸೌಲಭ್ಯ ಕೊರತೆಯಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸರ್ಕಾರವು ಕೂಡಲೇ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು ಎಂದು ಒತ್ತಾಯಿಸಿದರು.

    ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಅಗತ್ಯ ಸೌಲಭ್ಯ ಕೊರತೆ ನೀಗಿಸುವ ಪ್ರಯತ್ನವನ್ನು ಮಾಡುತ್ತಾ ಬಂದಿದೆ. ಆದಷ್ಟು ವಿದ್ಯಾರ್ಥಿಗಳು ಕಾಲೇಜಿಗೆ ಹಾಜಾರಾಗಿ ತಮ್ಮ ಪ್ರತಿಭೆ ಅನಾವರಣಗೊಳಿಸುವ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.

    ಹಿರಿಯ ಚಿತ್ರಕಲಾವಿದ ಎಂ.ಎನ್.ಸುಬ್ರಮಣ್ಯ ಮಾತನಾಡಿ, ವಿದ್ಯಾರ್ಥಿಗಳು ಮೊದಲು ಕಾಲೇಜಿಗೆ ಗೈರಾಗದೆ ಸಮಯಪೂರ್ತಿ ಅಭ್ಯಾಸದ ಕಡೆ ಗಮನಹರಿಸಬೇಕು. ವರ್ತನೆಯಲ್ಲಿ ಮತ್ತೊಬ್ಬರು ನಿಮ್ಮನ್ನು ನೋಡಿ ಕಲಿಯುವಂತಿರಬೇಕು. ಚಿತ್ರಕಲೆಯಲ್ಲಿ ಚಿತ್ರ ಅಭ್ಯಾಸ ಬಹಳ ಮುಖ್ಯ ಆದಷ್ಟು ಉಪನ್ಯಾಸಕರ ಮಾರ್ಗದರ್ಶನ ಪಡೆದು ಉತ್ತಮ ಶಿಕ್ಷಕರಾಗುವ ಕಡೆ ಹೆಜ್ಜೆ ಹಾಕಬೇಕು. ವಿದ್ಯಾರ್ಥಿಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಯಶಸ್ಸನ್ನು ನಿರೀಕ್ಷಿಸಬೇಕು ಎಂದು ಸಲಹೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಸಿ.ಸಿ.ಬಾರಕೇರ ಅವರು, ಸರ್ಕಾರಿ ಶಾಲೆಗಳಲ್ಲಿ ಓದುವುದೆ ಒಂದು ಧನ್ಯಭಾವ, ಸರ್ಕಾರ ನೀಡುವ ಸವಲತ್ತುಗಳನ್ನು ಪಡೆದುಕೊಂಡು ಉತ್ತಮ ವಿದ್ಯಾಭ್ಯಾಸವನ್ನು ಮಾಡುವತ್ತ ವಿದ್ಯಾರ್ಥಿಗಳು ಗಮನಹರಿಸಬೇಕು. ಮಾನವನಾಗಿ ಹುಟ್ಟಿದ ಮೇಲೆ ಜೀವನದಲ್ಲಿ ಕಲೆಯ ಪ್ರತಿಭೆಯನ್ನು ಸಮಾಜಕ್ಕೆ ಅನಾವರಣಗೊಳಿಸುವ ಮೂಲಕ ಬದುಕನ್ನು ಯಶಸ್ಸುಗೊಳಿಸಬೇಕಿದೆ. ಕಲಾವಿದರು ಜಗತ್ತನ್ನು ಸುತ್ತುವುದನ್ನು ಕಲಿಯಬೇಕು. ಹಾಸ್ಯ ಮನೋಭಾವವನ್ನು ಮೂಡಿಸಿಕೊಂಡು ಕಲೆಯ ಅಭಿವೃದ್ಧಿಯಲ್ಲಿ ಸಾಗಬೇಕು. ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಮಾದರಿಯಾಗುವಂತೆ ನಡೆದುಕೊಳ್ಳಬೇಕು. ಕಲೆ ಕಲಿಯುವುದೇ ಕಲಾ ವಿದ್ಯಾರ್ಥಿಗಳ ಹಠವಾಗಿರಬೇಕು. ಚಿತ್ರಕಲೆಯನ್ನು ಸರಿಯಾದ ಮಾರ್ಗದಲ್ಲಿ ಕಲಿತರೆ ಬದುಕು ಕಟ್ಟಿಕೊಳ್ಳಲು ಸುಲಭವಾಗುತ್ತದೆ ಆ ದೃಷ್ಟಿಯಲ್ಲಿ ಶ್ರದ್ದೆಯಿಂದ ಕಲಿಯುವಂತಹ ಜಾಣ್ಮೆ ನಿಮ್ಮಲ್ಲಿರಬೇಕು ಎಂದು ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ಉಪನ್ಯಾಸಕರಾದ ಡಾ.ಸುರೇಂದ್ರನಾಥ್ ಡಿ.ಆರ್, ಡಾ.ಸಂತೋಷಕುಮಾರ್ ನಾಗರಾಳ, ಡಾ.ಶ್ವೇತ ಡಿ.ಎಸ್, ರಂಗಸ್ವಾಮಿ ಆರ್, ಸತ್ಯನಾರಾಯಣ ಹಾಗೂ ವಿದ್ಯಾರ್ಥಿಗಳು ಇದ್ದರು.

    75ನೇ ಗಣರಾಜ್ಯೋತ್ಸವದ ಪ್ರಯುಕ್ತ ಚಿತ್ರಕಲಾಕೃತಿಗಳ ಪ್ರದರ್ಶನದಲ್ಲಿ ವಿದ್ಯಾರ್ಥಿಗಳಾದ ಧನುಷ್ ಎಸ್, ವಿದ್ಯಾಬಾಯಿ ಬಿ.ಎಚ್, ಪಲ್ಲವಿ ಎಂ, ಅಕ್ಷತಾ ನಾಯ್ಕರ್, ಅರುಣಕುಮಾರ, ಶಿರಿಶ.ಎಲ್, ಕಲ್ಯಾಣಿ ಎಂ, ಕುಶಾಲ್.ಆರ್, ಮುಧು ಬಿ.ಜಿ, ಲಕ್ಷ್ಮೀ ಎನ್. ಕೆ,ಕಮಲಾ, ಅಮೃತಮ್ಮ.ಡಿ, ತೇಜಸ್ವಿನಿ ಡಿ.ಸಿ, ದೀಪು ಎಂ.ಡಿ, ಕಿರಣ್ ಎಸ್, ಭರತ್, ಹರಿಣಿ.ಬಿ, ಸುಕ್ತ ವಿ.ಟಿ, ಶ್ರೀವಿದ್ಯಾ. ಟಿ.ಎಸ್ ಭಾಗವಹಿಸಿದ್ದರು.

    admin
    • Website

    Related Posts

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಮೈಸೂರು: ಇಲ್ಲಿನ ಸಿದ್ಧಾರ್ಥನಗರದಲ್ಲಿ ನಡೆದ ರೋಚಕ ಘಟನೆಯೊಂದರಲ್ಲಿ, ಮನೆಯೊಳಗೆ ನುಗ್ಗಿದ್ದ ಚಿರತೆಯಿಂದ ತನ್ನ ಅತ್ತೆಯನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ…

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.