nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026
    Facebook Twitter Instagram
    ಟ್ರೆಂಡಿಂಗ್
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    • ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ
    • SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ
    • ಕುರ್ಚಿ ಕಿತ್ತಾಟದ ನಡುವೆಯೇ ಒಂದೇ ಕಾರಿನಲ್ಲಿ ಸಿಎಂ–ಡಿಸಿಎಂ ಪ್ರಯಾಣ
    • ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ
    • ಶಾಸಕ ಪ್ರಭು ಚವ್ಹಾಣ್ ದಲಿತರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಕ್ತಾರ ಸುಧಾಕರ್ ಕೊಳ್ಳುರ್ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಭರವಸೆ: ಹೆಚ್.ಎಂ.ರೇವಣ್ಣ
    Uncategorized November 25, 2024

    ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಭರವಸೆ: ಹೆಚ್.ಎಂ.ರೇವಣ್ಣ

    By adminNovember 25, 2024No Comments3 Mins Read
    chikkamagaluru

    ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಭರವಸೆ ತಂದಿದೆ. ಈ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲುವಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನಗಳಿಸಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದರು.

    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ರಾಜ್ಯ ಸರ್ಕಾರವು ಸಮಾಜದ ಹಿಂದುಳಿದ ವರ್ಗದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಅವರ ಜೀವನ ಮಟ್ಟ ಸುಧಾರಿಸಲು ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿವೆ. ಈ ಕಾರ್ಯಕ್ಕೆ ಬೆಂಬಲವಾಗಿ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಹಾಗೂ ಶಕ್ತಿ ಯೋಜನೆಗಳು ಸಹಕರಿಸುತ್ತಿವೆ ಎಂದರು.

    ಸರ್ಕಾರದವರು ಅಭಿವೃದ್ಧಿ ಕಾರ್ಯಗಳೊಂದಿಗೆ ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು ರೂ.52 ಸಾವಿರ ಕೋಟಿಗಳಷ್ಟು ಹಣ ಹಂಚಿಕೆ ಮಾಡಿದೆ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಸುಮಾರು 1.22 ಕೋಟಿ ಫಲಾನುಭವಿಗಳು ಯೋಜನೆಯ ಫಲವನ್ನು ಪಡೆದಿದ್ದಾರೆ ಹಾಗೂ ರೂ.32,665 ಗಳಷ್ಟು ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗಳ ಖಾತೆಗೆ  ಜಮೆ ಮಾಡಲಾಗಿದೆ. ಜಿಲ್ಲೆಯಲ್ಲಿ 2.62 ಲಕ್ಷ ಮಹಿಳೆಯರು ನೋಂದಣಿಯಾಗಿದ್ದು, ಒಟ್ಟು ರೂ.6,57,02,10,000  ಹಣ ಯೋಜನೆಗೆ ಬಳಕೆಯಾಗಿದೆ. ಹಾಗೂ ಗೃಹಜ್ಯೋತಿ ಯೋಜನೆಯಲ್ಲಿ ರಾಜ್ಯದಲ್ಲಿ  ೧.೬೧ ಕೋಟಿ ಫಲಾನುಭವಿಗಳಿಗೆ ಯೋಜನೆ ಲಭ್ಯವಾಗಿದ್ದು, ಇದಕ್ಕೆ ೧೧ ಸಾವಿರದ ೩೧ ಕೋಟಿಗಳಷ್ಟು ಹಣ ವ್ಯಯವಾಗಿದೆ. ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಲ್ಲಿ ೩ ಲಕ್ಷ  ಫಲಾನುಭವಿಗಳಿದ್ದು, ಒಟ್ಟು ರೂ. ೧೫೮ ಕೋಟಿಗಳಷ್ಟು ಹಣ ಯೋಜನೆಗೆ ಬಳಕೆಯಾಗಿದೆ ಎಂದರು.

    ರಾಜ್ಯದಲ್ಲಿ ೫೫.೪೭ ಕೋಟಿ  ಅನ್ನಭಾಗ್ಯ ಯೋಜನೆ ಫಲಾನುಭವಿಗಳಿದ್ದು ಒಟ್ಟು ೯ ಸಾವಿರದ ೧೦೪ ಕೋಟಿ ವೆಚ್ಚವಾಗಿದೆ. ಜಿಲ್ಲೆಯಲ್ಲಿ ೧.೦೯ ಕೋಟಿ ಫಲಾನುಭವಿಗಳಿಗೆ ಯೋಜನೆ ಲಭ್ಯವಾಗಿದ್ದು, ಒಟ್ಟು ೧೭೯ ಕೋಟಿ ಯೋಜನೆಗೆ ವೆಚ್ಚವಾಗಿದೆ.  ಶಕ್ತಿ ಯೋಜನೆಯಲ್ಲಿ ರಾಜ್ಯದಲ್ಲಿ ಒಟ್ಟು ೩೩೬ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ ಹಾಗೂ ಜಿಲ್ಲೆಯಲ್ಲಿ ಒಟ್ಟು ೨,೯೦,೭೦,೦೬೪ ಮಹಿಳೆಯರು ಪ್ರಯಾಣಿಸಿದ್ದು, ಒಟ್ಟು  ರೂ. ೧೧೦೫೫೩೯೨೪೨ ರಷ್ಟು ಹಣ ಯೋಜನೆಗೆ ಬಳಕೆಯಾಗಿದೆ. ಯುವನಿಧಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ೧.೮೧ ಕೋಟಿ ಯುವ ಫಲಾನುಭವಿಗಳಿದ್ದಾರೆ. ಒಟ್ಟು ರೂ. ೧೪೯ ಗಳಷ್ಟು ಹಣ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಹಾಗೂ ಜಿಲ್ಲೆಯಲ್ಲಿ ಒಟ್ಟು ೩೨೫೭ ಯುವ ಫಲಾನುಭವಿಗಳಿದ್ದು, ಒಟ್ಟು ರೂ ೨,೫೪,೫೮,೦೦೦ ಗಳಷ್ಟು ಹಣ ಈ ಯೋಜನೆಗೆ ಬಳಕೆಯಾಗಿದೆ ಎಂದು ತಿಳಿಸಿದ ಅವರು ಯೋಜನೆಯಿಂದ ವಂಚಿತರಾಗಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಿ ಯೋಜನೆಯ ಫಲ ಪಡೆದುಕೊಳ್ಳಿ ಎಂದು ತಿಳಿಸಿದರು.

    ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ ಗ್ಯಾರಂಟಿ ಯೋಜನೆಗಳಿಂದ ಜನರು ಸ್ವಾವಲಂಭಿ ಹಾಗೂ ಸಂತೋಷದ ಜೀವನವನ್ನು ನಿರ್ವಹಿಸುತ್ತಿದ್ದಾರೆ. ಜನರ ಕೈಗೆ ಹಣ ನೀಡುವುದರಿಂದ ಅವರು ತಮ್ಮ ಅಗತ್ಯತೆಗಳಿಗೆ ವ್ಯಯ ಮಾಡುತ್ತಾರೆ. ಇದರಿಂದ ವ್ಯಾಪಾರ ವಹಿವಾಟುಗಳು ಹೆಚ್ಚುತ್ತವೆ. ಉತ್ಪಾದನೆ ಹೆಚ್ಚುತ್ತದೆ. ಉತ್ಪಾದನೆಗೆ ಮಾನವ ಸಂಪನ್ಮೂಲದ ಅವಶ್ಯಕತೆ ಇರುವುದರಿಂದ  ಹೆಚ್ಚಿನ ಉದ್ಯೋಗ ಸೃಷ್ಟಿಯಾಗುತ್ತವೆ ಹಾಗೂ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಉಪಯುಕ್ತವಾಗಿದೆ. ಆರ್ಥಿಕ ವ್ಯವಹಾರಗಳು ಹೆಚ್ಚುವುದರಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯವು ಹೆಚ್ಚಿ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರಿಯಾಗುತ್ತವೆ. ಸಮಾಜದ  ಕಟ್ಟ ಕಡೆಯ ವ್ಯಕ್ತಿಯ ಉತ್ತಮ ಬದುಕನ್ನು ಗುರಿಯಾಗಿರಿಸಿಕೊಂಡು ಈ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಜೊತೆಗೆ ಮಹಿಳೆಯರು ಸ್ವಾವಲಂಬಿಗಳಾಗಿ ಜೀವಿಸಲು ಯೋಜನೆಗಳು ಸಹಕಾರಿಯಾಗಿವೆ ಎಂದ ಅವರು ಯೋಜನೆಗಳಿಂದ ವಂಚಿತರಾಗಿರುವವರನ್ನು ಗುರುತಿಸಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದಲ್ಲದೆ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಗತ್ಯ  ಕ್ರಮವಹಿಸಬೇಕು ಎಂದು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮ್ಟೆ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಬೆಂಗಳೂರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ (ಮೈಸೂರು ವಿಭಾಗ)ದ ಉಪ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷರಾದ ಡಾ. ಅಂಶುಮಂತ್, ಕ.ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್. ಹರೀಶ್, ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಎಂ.ಸಿ. ಶಿವನಂದ ಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    April 9, 2026

    ಮಧುಗಿರಿಯಲ್ಲಿ ನಾಗಾರ್ಜುನ ಸಾಗರ್ ರೇಸರ್ ಹಾವು ಪತ್ತೆ

    April 4, 2026

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಹುಬ್ಬಳ್ಳಿ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇದಕ್ಕೆ…

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.