ಗುಬ್ಬಿ: ಗುಬ್ಬಿಯ ಪದವಿಪೂರ್ವ ಕಾಲೇಜು ಅವ್ಯವಸ್ಥೆಯ ಅಗರವಾಗಿದ್ದು, ಎಲ್ಲಿ ನೋಡಿದರಲ್ಲಿ ಕಸಕಡ್ಡಿಗಳು ತುಂಬಿದೆ. ನೀರಿನ ಟ್ಯಾಂಕ್ ಬಳಿಯೇ ನಳ್ಳಿ ಇದ್ದು, ಇಲ್ಲಿಯೇ ವಿದ್ಯಾರ್ಥಿಗಳು ತಟ್ಟೆ ಕೂಡ ತೊಳೆಯುತ್ತಿದ್ದಾರೆ. ಈ ಪ್ರದೇಶ ಕೆಸರಿನಿಂದ ಕೂಡಿದ್ದು, ಕೊಳಚೆಯಾಗಿ ಮಾರ್ಪಟ್ಟಿದೆ.
ಶಾಲೆಯ ನೈರ್ಮಲ್ಯದ ಬಗ್ಗೆ ಗಮನ ಹರಿಸಬೇಕಾದ ಶಾಲೆಯ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತಿದ್ದಾರೆ. ಅಷ್ಟೇ ಏಕೆ, ಇದೇ ಪದವಿಪೂರ್ವ ಕಾಲೇಜಿಗೆ ಅಧ್ಯಕ್ಷರಾಗಿರುವ ಸ್ಥಳೀಯ ಶಾಸಕ ಎಸ್.ಆರ್.ಶ್ರೀನಿವಾಸ್ ಇದೇ ಪ್ರದೇಶದಲ್ಲಿ ಕಾರಿನಲ್ಲಿ ಓಡಾಡುತ್ತಿದ್ದರೂ, ಇದೊಂದು ಗಂಭೀರವಾದ ಸಮಸ್ಯೆ ಎನ್ನುವುದು ಅವರಿಗೆ ತಿಳಿಯದಿರುವುದು ದುರಂತವೇ ಸರಿ.
ಈ ಶಾಲೆಯು ಶಾಲಾ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 204 ರಲ್ಲಿ ರಾಜ್ಯ ನಾಯಕರುಗಳು ಈ ದಾರಿಯಲ್ಲಿ ಓಡಾಡುತ್ತಿದ್ದಾರೆ. ಆದರೆ ಬಿದ್ದು ಹೋಗಿರುವ ಶಾಲೆಯ ಕಾಂಪೌಂಡ್ ಸರಿಪಡಿಸಲು ಇಲ್ಲಿಯವರೆಗೂ ಶಾಲಾ ಆಡಳಿತ ಮಂಡಳಿ ಯಾವುದೇ ಕ್ರಮ ಕಗೊಳ್ಳದೇ ಇರುವುದು ಒಂದೆಡೆಯಾದರೆ, ರಾತ್ರಿ ವೇಳೆಯಲ್ಲಿ ಈ ಶಾಲೆ ಕುಡುಕರ ಹಾಗೂ ಅನೈತಿಕ ಚಟುವಟಿಕೆಗಳ ಅಡ್ಡೆಯಾಗಿ ಮಾರ್ಪಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB