ಗುಬ್ಬಿ: ತಾಲೂಕು ಅಭಿವೃದ್ಧಿ ಮಾಡುವಲ್ಲಿ ಗುಬ್ಬಿ ಶಾಸಕ ಎಸ್.ಆರ್.ಶ್ರೀ ನಿವಾಸ್ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗುಬ್ಬಿ ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜ್ ಅವರು ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಆರೋಪಿಸಿದ್ದಾರೆ.
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಕೋಣೆಮಾದೇನಹಳ್ಳಿ ಗ್ರಾಮದಲ್ಲಿ ಜೆ ಡಿಎಸ್ ಪಕ್ಷ ಸೇರ್ಪಡೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಈ ತಾಲ್ಲೂಕಿನ ಶಾಸಕರಿಗೆ ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲವಾಗಿದೆ. ಇನ್ನೂ ಸಹ ಗಡಿ ಭಾಗದ ಪ್ರದೇಶದಲ್ಲಿ ಮೂಲ ಭೂತ ಸೌಲಭ್ಯ ಗಳ ಕೊರತೆ ಕಾಣಬಹುದಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಭಿವೃದ್ಧಿ ಕಾಣದ ಗ್ರಾಮಗಳಲ್ಲಿ ಜನತೆ ಹಿಡಿಶಾಪ ಹಾಕುವಂತಾಗಿದೆ. ಮತಕೇಳಲು ಬರುವ ಜನಪ್ರತಿನಿಧಿಗಳು ಗ್ರಾಮಗಳ ಅಭಿವೃದ್ಧಿ ಬಗ್ಗೆ ಗಮನಹರಿಸುತ್ತಿಲ್ಲ ಎಂಬ ಆರೋಪಗಳನ್ನು ವ್ಯಕ್ತಪಡಿಸುತ್ತಾರೆ ಎಂದರು.
ನನ್ನ ಶ್ರೀ ಮತಿಯವರು ಸಿ.ಎಸ್. ಪುರ ಜಿಲ್ಲಾ ಪಂಚಾಯತ್ ಸದಸ್ಯರಾದ ಅವಧಿಯಲ್ಲಿ ಹೋಬಳಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲ ಭೂತ ಸೌಲಭ್ಯಗಳನ್ನು ನೀಡುವ ಮೂಲಕ ಕಾಂಕ್ರೀಟ್ ರಸ್ತೆಗಳನ್ನು ಮಾಡುವ ಮೂಲಕ ಮಾದರಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ವಾಗಿ ಮಾಡಲಾಗಿದೆ. ನಮ್ಮ ಅಭಿವೃದ್ಧಿ ಕಾರ್ಯ ಗಳನ್ನು ಗಮನಿಸಿ ಸಾಕಷ್ಟು ಯುವ ನಾಯಕರು ಜೆಡಿಎಸ್ ಪಕ್ಷ ಕ್ಕೆ ಸೇರ್ಪಡೆಯಾಗುತ್ತಿರುವುದಾಗಿ ಹೇಳುತ್ತಿರುವುದು ನಿಜಕ್ಕೂ ಸಂತಸ ದ ಸಂಗತಿ ಯಾಗಿದೆ. ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೇ, ಗ್ರಾಮೀಣ ಭಾಗದ ಅಭಿವೃದ್ಧಿ ಗೆ ಜೆಡಿಎಸ್ ಪಕ್ಷ ದ ವತಿಯಿಂದ ನಾನು ತಮ್ಮ ಸೇವೆಗೆ ಸಿದ್ದನಿದ್ದು ನಿಮ್ಮ ಸಹಕಾರ ಅಗತ್ಯವಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಎ ಪಿ ಎಂ ಸಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಶಿವಲಿಂಗಯ್ಯ, ಕಡಬ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಸಿದ್ದಗಂಗಮ್ಮ, ಫಿರೋದಸ್ ಹಾಗೂ ಇನ್ನಿತರರು ಹಾಜರಿದ್ದರು.
ವರದಿ: ಡಿ.ಮಂಜುನಾಥ್, ಗುಬ್ಬಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB