ತುಮಕೂರು: ಜಿಲ್ಲೆಯ ಗುಬ್ಬಿ ಪಟ್ಟಣದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಎಸಿ ಹಾಗೂ ತಹಶೀಲ್ದಾರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತುಮಕೂರು ಎ.ಸಿ. ಗೌರವ್ ಕುಮಾರ್ ಶೆಟ್ಟಿ, ಗುಬ್ಬಿ ತಹಶೀಲ್ದಾರ್ ಆರತಿ.ಬಿ ದಿಢೀರ್ ಭೇಟಿ ನೀಡಿದ್ದರಿಂದ ಹಾಸ್ಟೆಲ್ ಸಿಬ್ಬಂದಿಗಳು ತಬ್ಬಿಬ್ಬಾಗಿದ್ದಾರೆ.
ಹಾಸ್ಟೆಲ್ ನ ಅಡುಗೆ ಕೊಠಡಿ, ಶೌಚಾಲಯ, ವಿದ್ಯಾರ್ಥಿಗಳ ಕೊಠಡಿಗಳನ್ನ ವೀಕ್ಷಿಸಿದ ಅಧಿಕಾರಿಗಳು ಹಾಸ್ಟೆಲ್ ನಿರ್ವಹಣೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ಸಿಬ್ಬಂದಿ ಜೊತೆಗೆ ಚರ್ಚಿಸಿದರು.
ಹಾಸ್ಟೆಲ್ ಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿದ ವೇಳೆ ವಾರ್ಡನ್ ಅವರು ಹಾಸ್ಟೆಲ್ ನಲ್ಲಿ ಇಲ್ಲದೇ ಇರುವುದನ್ನು ಕಂಡ ಉಪ ವಿಭಾಗಾಧಿಕಾರಿಗಳು, ವಾರ್ಡನ್ ವಿರುದ್ಧ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದರು.