nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃತಕ ಬುದ್ಧಿಮತ್ತೆ ಬುದ್ಧಿವಂತಿಕೆಯಿಂದ ಬಳಸಬೇಕಿದೆ: ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ

    October 29, 2025

    ಕಾಡು ಪ್ರಾಣಿಗಳಿಂದ ಬೆಳೆ ಮತ್ತು ಪ್ರಾಣ ಹಾನಿ: ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

    October 29, 2025

    ಬೀದರ್ ಜಿಲ್ಲೆಯ ವಿವಿಧೆಡೆ ಸುರಿದ ಮಳೆ

    October 29, 2025
    Facebook Twitter Instagram
    ಟ್ರೆಂಡಿಂಗ್
    • ಕೃತಕ ಬುದ್ಧಿಮತ್ತೆ ಬುದ್ಧಿವಂತಿಕೆಯಿಂದ ಬಳಸಬೇಕಿದೆ: ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ
    • ಕಾಡು ಪ್ರಾಣಿಗಳಿಂದ ಬೆಳೆ ಮತ್ತು ಪ್ರಾಣ ಹಾನಿ: ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
    • ಬೀದರ್ ಜಿಲ್ಲೆಯ ವಿವಿಧೆಡೆ ಸುರಿದ ಮಳೆ
    • “ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು”: ಪೋಷಕತ್ವ ಯೋಜನೆ ಮಾಹಿತಿ ಕಾರ್ಯಕ್ರಮ
    • ಅಚ್ಚರಿ ಎನ್ನುವಂತೆ ಮುಖ್ಯಮಂತ್ರಿ ಆಯ್ಕೆಯಾಗಬಹುದು: ಕೆ.ಎನ್.ರಾಜಣ್ಣ
    • ಹುಲಿ ಕಾರ್ಯಾಚರಣೆ: ಮುಳ್ಳೂರು ಸಮೀಪದ ಹೀರೇಗೌಡನಹುಂಡಿಯಲ್ಲಿ ಹುಲಿ ಸೆರೆ
    • ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಡಾ.ಕೆ.ನಾಗಣ್ಣ
    • ಕನ್ನಡ ನಾಮಫಲಕ ಕಡ್ಡಾಯ: ಅಂಗಡಿ ಮಾಲಿಕರಿಗೆ ತಹಶೀಲ್ದಾರ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಡಿಸಲುಗಳನ್ನು ತೆರವುಗೊಳಿಸಲು ಯತ್ನ: ಅರಣ್ಯಾಧಿಕಾರಿಗಳಿಗೆ ಶಾಸಕ ಡಿ.ಸಿ.ಗೌರಿಶಂಕರ್ ಖಡಕ್ ವಾರ್ನಿಂಗ್
    ತುಮಕೂರು March 23, 2022

    ಗುಡಿಸಲುಗಳನ್ನು ತೆರವುಗೊಳಿಸಲು ಯತ್ನ: ಅರಣ್ಯಾಧಿಕಾರಿಗಳಿಗೆ ಶಾಸಕ ಡಿ.ಸಿ.ಗೌರಿಶಂಕರ್ ಖಡಕ್ ವಾರ್ನಿಂಗ್

    By adminMarch 23, 2022No Comments2 Mins Read
    dc gowrishankar

    ತುಮಕೂರು ಗ್ರಾಮಾಂತರ : ಅರಣ್ಯ ಇಲಾಖೆ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಕುಂದೂರಿನಲ್ಲಿ  ಗುಡಿಸಲುಗಳನ್ನು ತೆರವುಗೊಳಿಸಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿಗೆ ಖಡಕ್ ಸೂಚನೆ ನೀಡಿರುವ ಶಾಸಕ ಡಿ.ಸಿ.ಗೌರಿಶಂಕರ್ ಜಂಟಿ ಸರ್ವೇ ಆಗುವವರೆಗೂ ಸ್ಥಳ ಕಾಲಿಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

    ತುಮಕೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಊರ್ಡಿಗೆರೆ ಹೋಬಳಿಯ ಬೆಳಗುಂಬ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಂದೂರು ಗ್ರಾಮದಲ್ಲಿ ವಸತಿ ರಹಿತರು ಗುಡಿಸಲು ಹಾಕಿಕೊಂಡು ವಾಸವಿದ್ದರು. ಅದನ್ನು ಅರಣ್ಯ ಇಲಾಖೆ ಸಿಬ್ಬಂದಿ  ಈ ಸ್ಥಳಕ್ಕೆ ಅರಣ್ಯ ಇಲಾಖೆಗೆ ಸೇರಿದ್ದು, ಕೂಡಲೇ ಗುಡಿಸಲನ್ನು ತೆರವುಗೊಳಿಸಬೇಕೆಂದು ತಿಳಿಸಿ ಅವರ ಗುಡಿಸಲುಗಳನ್ನು ತೆರವುಗೊಳಿಸಲು ಮುಂದಾಗಿದ್ದರು. ಈ ವಿಚಾರವಾಗಿ ಗುಡಿಸಲು ನಿವಾಸಿಗಳು ಅರಣ್ಯ ಇಲಾಖೆಯ ಸಿಬ್ಬಂದಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.


    Provided by
    Provided by
    Provided by

    ಈ ವಿಷಯ ವ್ಯಾಪಕವಾಗಿ ಹರಡುತ್ತಿದ್ದಂತೆ ಸುದ್ದಿ ತಿಳಿದು ಖುದ್ದು ಸ್ಥಳಕ್ಕೆ ಬುಧವಾರ ಬೆಳಗಿನ ಜಾವ ಭೇಟಿ ನೀಡಿದ ಶಾಸಕ ಡಿ.ಸಿ.ಗೌರಿಶಂಕರ್ ಅಲ್ಲಿಯ ಸ್ಥಳ ಪರಿಶೀಲನೆ ನಡೆಸಿ,  ಸ್ಥಳದ ದಾಖಲೆ ಪರಿಶೀಲನೆ ಮಾಡಿದರು. ನಂತರ ಅರಣ್ಯ ಇಲಾಖೆ ಸಿಬ್ಬಂದಿಗೆ ದೂರವಾಣಿ ಕೆರೆ ಮಾಡಿ ಮಾತನಾಡಿ, ನಿಮ್ಮ ಅರಣ್ಯ ಇಲಾಖೆಯ ಜಾಗ ನಮಗೆ ಬೇಡ. ಸರ್ವೇ ಆಗಲಿ. ಎಲ್ಲಿ ಸರ್ವೇ ನಂಬರ್ ಜಾಗ ಬರುತ್ತದೆಯೋ ಅಲ್ಲಿಯೇ ನನ್ನ ಜನಕ್ಕೆ ಮನೆ ಕಟ್ಟಿಕೊಡುತ್ತೇನೆ. ಅಲ್ಲಿಯವರೆಗೂ ನೀವು ಜಾಗಕ್ಕೆ ಕಾಲಿಡಬೇಡಿ. ಈ ಬಗ್ಗೆ ತಹಶೀಲ್ದಾರ್ ಅವರಿಗೂ ಮಾತನಾಡುತ್ತೇನೆ, ಜಂಟಿ ಸರ್ವೆ ನಡೆಯುವವರೆಗೂ ಯಾವುದೇ ಕಾರಣಕ್ಕೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಕಾಲಿಡಬಾರದೆಂದು ಖಡಕ್ ಸೂಚನೆ ನೀಡಿದರು. ಇನ್ನು ಇದೇ ವೇಳೆ ಗುಡಿಸಲು ನಿವಾಸಿಗಳೊಂದಿಗೆ ಮಾತನಾಡಿದ ಶಾಸಕರು ನಾನೇ ನಿಂತು ಈ ಜಾಗವನ್ನು ಮಟ್ಟ ಮಾಡಿಸಿ ಮನೆಕಟ್ಟಿಕೊಡುವವರೆಗೂ  ನಿಮ್ಮ ಜೊತೆಗಿರುತ್ತೇನೆ, ಯಾವುದೇ ಕಾರಣಕ್ಕೂ ಹೆದರುವುದು ಬೇಡ, ಸರ್ವೆ ನಡೆಸಿ ಮುಂದಿನ ಕ್ರಮ ತೆಗೆದುಕೊಂಡು ಬಡವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತೇನೆ ಎಂದು  ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಹಾಲನೂರು ಅನಂತ್, ಬೆಳಗುಂಬ ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯರಾದ ಚೌಡಪ್ಪ, ಪಾಪಯ್ಯ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೃತಕ ಬುದ್ಧಿಮತ್ತೆ ಬುದ್ಧಿವಂತಿಕೆಯಿಂದ ಬಳಸಬೇಕಿದೆ: ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ

    October 29, 2025

    ಅಚ್ಚರಿ ಎನ್ನುವಂತೆ ಮುಖ್ಯಮಂತ್ರಿ ಆಯ್ಕೆಯಾಗಬಹುದು: ಕೆ.ಎನ್.ರಾಜಣ್ಣ

    October 29, 2025

    ಒನಕೆ ಓಬವ್ವ ಜಯಂತಿ: ಸಾಧಕರ ಸನ್ಮಾನಕ್ಕಾಗಿ ಅರ್ಜಿ ಆಹ್ವಾನ

    October 28, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೃತಕ ಬುದ್ಧಿಮತ್ತೆ ಬುದ್ಧಿವಂತಿಕೆಯಿಂದ ಬಳಸಬೇಕಿದೆ: ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ

    October 29, 2025

    ತುಮಕೂರು: ಕೃತಕ ಬುದ್ಧಿಮತ್ತೆಯನ್ನು (ಎ.ಐ.) ಸಾಕಷ್ಟು ಎಚ್ಚರಿಕೆ, ಬುದ್ಧಿವಂತಿಕೆಯಿಂದ ಬಳಸಬೇಕಿದೆ ಎಂದು ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ ಮಾಡಿದರು. ತುಮಕೂರು…

    ಕಾಡು ಪ್ರಾಣಿಗಳಿಂದ ಬೆಳೆ ಮತ್ತು ಪ್ರಾಣ ಹಾನಿ: ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

    October 29, 2025

    ಬೀದರ್ ಜಿಲ್ಲೆಯ ವಿವಿಧೆಡೆ ಸುರಿದ ಮಳೆ

    October 29, 2025

    “ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು”: ಪೋಷಕತ್ವ ಯೋಜನೆ ಮಾಹಿತಿ ಕಾರ್ಯಕ್ರಮ

    October 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.