ಕರಾವಳಿ ಭಾಗದಲ್ಲಿ ಪ್ರಮುಖವಾಗಿ ಪಂಜುರ್ಲಿ ಮತ್ತು ಗುಳಿಗ ದೈವಗಳಿವೆ. ಅದ್ರಲ್ಲೂ ಗುಳಿಗ ದೈವದ ಶಕ್ತಿ ಅಪಾರವಾದ್ದು ಅಂತ ಹೇಳಲಾಗುತ್ತೆ. ತನ್ನನ್ನ ನಿರ್ಲಕ್ಷ್ಯ ಮಾಡಿ ನಿರ್ಮಾಣಕ್ಕೆ ಮುಂದಾದ ಸ್ಮಾರ್ಟ್ ಸಿಟಿ ಕಾಮಗಾರಿ ವಿರುದ್ಧ ದೈವ ಮುನಿಸಿಕೊಂಡಿದೆ. ದೈವ ಮುನಿಸಿಕೊಂಡ ಪರಿಣಾಮ ಅಲ್ಲಿ ಒಂದಲ್ಲ ಒಂದು ಅವಾಂತರಗಳು ಸಂಭವಿಸುತ್ತಿದೆ.
ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡಿಯುತ್ತಿವೆ. ಆದ್ರೆ, ಮಂಗಳೂರಿನ ಹಂಪನಕಟ್ಟೆಯಹಳೆ ಬಸ್ ನಿಲ್ದಾಣ ಇದ್ದ ಸ್ಥಳದಲ್ಲಿ ಕಳೆದ ಮೂರು ವರ್ಷದಿಂದ ಕಾಮಗಾರಿಯೊಂದು ನೆನೆಗುದಿಗೆ ಬಿದ್ದಿದೆ. ಇದಕ್ಕೆ ಕಾರಣ ಗುಳಿಗೆ ದೈವದ ಮುನಿಸಂತೆ.
ಮಂಗಳೂರಿನ ಈ ಸ್ಥಳದಲ್ಲಿ ಕಾಮಗಾರಿ ನಿಲ್ಲೋದಿರಲಿ, ಆ ಕಾಂಟ್ರ್ಯಾಕ್ಟರ್ ಈಗ ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾನೆ. ದೈವಗಳ ನೆಲೆಬೀಡು ಕರಾವಳಿ ಒಂದಲ್ಲ ಒಂದು ದೈವ ಕಾರ್ಣಿಕಕ್ಕೆ ಸಾಕ್ಷಿಯಾಗುತ್ತಾ ಇರುತ್ತದೆ. ಇದೀಗ ದೈವ ಮುನಿಸಿಕೊಂಡ ಪರಿಣಾಮ ದೊಡ್ಡ ಅವಘಡದ ಮುನ್ಸೂಚನೆ ನೀಡಿದೆ.
ಈ ಗುಳಿಗನ ಕೋಪದಿಂದಾಗಿ ಕಳೆದ ಮೂರು ವರ್ಷಗಳಲ್ಲಿ ಕಾಮಗಾರಿ ಸ್ಥಳದಲ್ಲಿ ಪಿಲ್ಲರ್ ಎದ್ದಿರೋದು ಬಿಟ್ರೆ ಬಹುಅಂತಸ್ತಿನ ಕಾರು ಪಾರ್ಕಿಂಗ್ ಕಟ್ಟಡ ಮೇಲೆ ಏಳೆಲೆ ಇಲ್ಲ. 70ಕೋಟಿ ರೂ. ವೆಚ್ಚದ ಈ ಕಾಮಗಾರಿಯ, ಕೇವಲ ಹತ್ತು ಶೇಕಡಾ ಮಾತ್ರ ಕೆಲಸವಾಗಿದೆ.
ಇತ್ತೀಚೆಗೆ ಶರವು ಮಹಾ ಗುಳಿಗನಿಗೆ ನೀಡಲಾದ ಕೋಲದಲ್ಲಿ ಗುಳಿಗ ಇದೇ ಕಾಮಗಾರಿ ವಿಚಾರವಾಗಿ ತನ್ನ ಕೋಪವನ್ನು ಹೊರಹಾಕಿದೆಯಂತೆ. ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಾತನ ನಿರ್ಲಕ್ಷ್ಯದ ಬಗ್ಗೆ ಶರವು ಮಹಾ ಗುಳಿಗ ಕೋಪದಿಂದ ಮುಂದೆ ದೊಡ್ಡ ಅನಾಹುತ ನಡೆಯಲಿದೆ ಎಂದು ಎಚ್ಚರಿಸಿದೆಯಂತೆ.
ಕಾಮಗಾರಿ ಆರಂಭಿಸುವ ಮೊದಲೇ ಇಲ್ಲಿನ ಗುಳಿಗನಿಗೆ ಪೂಜೆ ಸಲ್ಲಿಸಿ ತಿಂಗಳ ಸಂಕ್ರಮಣದಂದು ಅಗೇಲು ನೀಡಲು ಗುತ್ತಿಗೆದಾರ ಕಂಪನಿಗೆ ಸಲಹೆ ನೀಡಲಾಗಿತ್ತು. ಆದ್ರೆ, ದೈವದ ಬಗ್ಗೆ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರ ದೈವಕ್ಕೆ ಕೊಡಬೇಕಾದ ಸೇವೆ ಕೊಡಲಿಲ್ಲ. ಇದು ಒಂದೆಡೆಯಾದರೆ, ಕನಿಷ್ಟ ದೈವಕ್ಕೆ ಕೈಮುಗಿದು ಕೆಲಸ ಆರಂಭಿಸಿಲ್ಲ. ಇದೇ ಕಾರಣದಿಂದ ಇದೀಗ ಆತನಿಗೆ ಅನಾರೋಗ್ಯ ಕೂಡ ಕಾಡಿದೆ ಎನ್ನುವ ವಿಚಾರ ಚರ್ಚೆಯಲ್ಲಿದೆ. ಇನ್ನು ಆತನ ಬದಲಿಗೆ ಗುಳಿಗನ ಕೋಲಕ್ಕೆ ಬಂದ ಆತನ ಮ್ಯಾನೇಜರ್ಗೆ ದೈವ ಆತನನ್ನೇ ಕರೆದುಕೊಂಡು ಬಾ ಎಂದು ಹೇಳಿದೆಯಂತೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


