nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    • ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಣಮಟ್ಟದ ಕಾಮಗಾರಿಗಳಾಗದಿದ್ದರೆ ಕ್ರಮ ಖಚಿತವೆಂದ ಸಚಿವ ಸತೀಶ್‌ ಜಾರಕಿಹೊಳಿ
    ರಾಜ್ಯ ಸುದ್ದಿ June 15, 2023

    ಗುಣಮಟ್ಟದ ಕಾಮಗಾರಿಗಳಾಗದಿದ್ದರೆ ಕ್ರಮ ಖಚಿತವೆಂದ ಸಚಿವ ಸತೀಶ್‌ ಜಾರಕಿಹೊಳಿ

    By adminJune 15, 2023No Comments2 Mins Read
    satheesh jarakiholi2

    ಗೋಕಾಕ: ನಗರದ ನಾಕಾ ನಂ. 1 ರಿಂದ ಡಿವೈಎಸ್ಪಿ ಕಚೇರಿವರೆಗೆ ನಿರ್ಮಿಸಿರುವ ಚರಂಡಿ ರಸ್ತೆಯಿಂದ 2 ಅಡಿ ಎತ್ತರವಾಗಿ ನಿರ್ಮಿಸಿದ್ದು, ಮಳೆ ನೀರು ಹೋಗಲು ತೊಂದರೆಯಾದರೆ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

    ಬುಧವಾರ ನಗರದ ತಾಪಂ ಸಭಾಂಗಣದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಸಂಪೂರ್ಣ ಜವಾಬ್ದಾರಿ ಗುತ್ತಿಗೆದಾರ ಮೇಲಿದ್ದು , ಕಾಮಗಾರಿಯಿಂದ ಸಾರ್ವಜನಿಕರಿಗೆ ತೊಂದರೆ ಆದರೆ ಕಠಿಣ ಕ್ರಮ ಜರುಗಿಸಲಾಗುವುದಲ್ಲದೆ, ಜನರಿಗೆ ಅನುಕೂಲವಾಗುವಂತೆ ಗುತ್ತಿಗೆದಾರರು ಕಾಮಗಾರಿಗಳನ್ನು ಕೈಗೊಂಡು ಅವಧಿ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕು.

    ಲೋಕೋಪಯೋಗಿ ಇಲಾಖೆಯಲ್ಲಿ ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರ ಪಟ್ಟಿ ಮಾಡಿ ಅಂತಹವರಿಗೆ ಕಾಮಗಾರಿ ಗುತ್ತಿಗೆಯನ್ನು ನೀಡದೆ, ಗುಣಮಟ್ಟದ ಕಾಮಗಾರಿ ಮಾಡುವ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆಯನ್ನು ನೀಡಿ ಗುಣಮಟ್ಟದ ರಸ್ತೆಗಳು ನಿರ್ಮಾಣವಾಗುವಂತೆ ಕ್ರಮ ಕೈಗೊಳ್ಳಬೇಕು . ಒಮ್ಮೆ ರಸ್ತೆ ಮಾಡಿದರೆ ಕನಿಷ್ಠ 10 ವರ್ಷಗಳ ವರೆಗೆ ಬಾಳಿಕೆ ಬರುವಂತೆ ನಿರ್ಮಾಣ ಮಾಡಬೇಕು ಎಂದು ಸೂಚಿಸಿದರು.

    ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮುತುವರ್ಜಿ ವಹಿಸಬೇಕು. ಲೋಳಸೂರ ಸೇತುವೆ , ವಸತಿ ನಿಲಯಗಳು, ನ್ಯಾಯಾಲಯ ಕಟ್ಟಡಕ್ಕೆ ಹೆಚ್ಚಿನ ಮಹತ್ವ ನೀಡಿ ಕಾರ್ಯ ಮಾಡುವುದರ ಜೊತೆಗೆ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ವಗೊಳಿಸಿ ಗ್ರಾಮೀಣ ಭಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬೇಗ ಪೂರ್ಣಗೊಳಿಸಬೇಕು ಎಂದರು.

    ನಗರದ ನಾಕಾ ನಂ. 1 ರ ರಸ್ತೆಯನ್ನು ಮಳೆಗಾಲ ಮುಗಿದ ತಕ್ಷಣ ಕಾಮಗಾರಿ ಕೈಗೊಳ್ಳಬೇಕು. ಅಲ್ಲಿಯವರೆಗೆ ಸಂಚಾರಕ್ಕೆ ತೊಂದರೆಯಾಗದಂತೆ ದುರಸ್ಥಿ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ನಗರಸಭೆ ಅಧೀನದಲ್ಲಿ ನಿರ್ಮಾಣವಾಗಿರುವ ವಾಣಿಜ್ಯ ಸಂರ್ಕೀಣಗಳನ್ನು ಜನರಿಗೆ ಉಪಯೋಗವಾಗುವಂತೆ ಕ್ರಮ ಕೈಗೊಳ್ಳಬೇಕು. ಇಲಾಖೆಯಿಂದ ಸಾಕಷ್ಟು ಬಂಡವಾಳ ಹಾಕಿ ವಾಣಿಜ್ಯ ಸಂರ್ಕೀಣಗಳನ್ನು ಕಟ್ಟಿದ್ದು, ಜನರಿಗೆ ಅನುಕೂಲವಾಗುವಂತೆ ಬಾಡಿಗೆ ಕೊಡದೆ ಬಾಕಿ ಉಳಿದಿರುವ ಸಂರ್ಕೀಣಗಳನ್ನು ಅತಿ ಶೀಘ್ರದಲ್ಲೇ ವ್ಯಾಪಾರಿಗಳಿಗೆ ಬಾಡಿಗೆ ನೀಡಲು ಕ್ರಮ ಕೈಗೊಳ್ಳಬೇಕು. ನಗರದಲ್ಲಿ ವಿವಿಧ ಬಡಾವಣೆಗಳಿಗೆ ಸಂಪರ್ಕ ಕಲ್ಟಿಸುವ ಮುಖ್ಯ ರಸ್ತೆಗಳನ್ನು ನಿರ್ಮಿಸಬೇಕು ಎಂದರು.

    ನಗರದಲ್ಲಿ ನೀರು ಸರಬರಾಜು ಮಾಡುವಲ್ಲಿ ಸೂಕ್ತ ಕ್ರಮ ಕೈಗೊಂಡು, ಮೀಟರಗಳು ಗಾಳಿಯಿಂದ ತಿರುಗುತ್ತಿದ್ದು ಜನರಿಗೆ ಹೆಚ್ಚಿನ ಶುಲ್ಕ ಬರುತ್ತಿದ್ದು, ಮೀಟರಗಳನ್ನು ಸರಿಪಡಿಸಬೇಕು. ಮುಂದೆ ಗೋಕಾಕ ಜನತೆಗೆ ಉಪಯೋಗವಾಗುವ ನಿಟ್ಟಿನಲ್ಲಿ ಯೋಗಿಕೋಳ ಹತ್ತಿರ ಹೊಸದಾಗಿ ನಿರ್ಮಿಸುತ್ತಿರುವ ಡ್ಯಾಂನ ಪಕ್ಕದಲ್ಲಿ ಪಿಲ್ಟರ ಹೌಸ ನಿರ್ಮಿಸಲು ಅರಣ್ಯ ಇಲಾಖೆಯ ಜಾಗೆ ಗುರುತಿಸಿ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಇರುವ ಹಳ್ಳಗಳನ್ನು ಗುರುತಿಸಿ ಸ್ವಚ್ಛ ಮಾಡಬೇಕು.  ನಗರಸಭೆ ಅಧಿಕಾರಿ ಗಣಾಚಾರಿ ಅವರನ್ನು ತೀವ್ರ ತರಾಟೆಗೆ ತಗೆದುಕೊಂಡ ಸಚಿವರು ಮನೆಗಳ ಜೆ.ಪಿ.ಎಸ್. ಮಾಡವಲ್ಲಿ ಎಡವಟ್ಟು ಮಾಡಿದ್ದನ್ನು ಸರಿಪಡಿಸಿ ಸರಕಾರದಿಂದ ಬೇಗನೆ ಮನೆ ಕಟ್ಟಲು ಹಣ ಬರುವಂತೆ ಸಚಿವರು ಗಣಾಚಾರಿಗೆ ತೀವ್ರ ತರಾಟೆಗೆ ತಗೆದುಕೊಂಡರು.

    ನಗರದಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವ ಸಲುವಾಗಿ ಜನದಟ್ಟಣೆ ನಿಯಂತ್ರಿಸಲು ನಗರದ ಹೊರಬಾಗದಲ್ಲಿ ಬಸ್ ನಿಲ್ದಾಣ ನಿರ್ಮಿಸಿ , ಇಗಿರುವ ಬಸ ನಿಲ್ದಾಣವನ್ನು ಸಿಟಿ ಬಸ್ ನಿಲ್ದಾಣ ಮಾಡಬೇಕು. ಅಲ್ಲಿಯವರೆಗೆ ತಾತ್ಕಾಲಿಕ ಜಾಗವನ್ನು ಗುರುತಿಸಿ ಎಕ್ಸಪ್ರೆಸ್ ವಾಹನಗಳು ನಗರದಲ್ಲಿ ಬಾರದಂತೆ ನೋಡಿಕೊಳ್ಳಿ ಎಂದು ಕೆಎಸ್ ಆರ್ ಟಿ.ಸಿ ಅಧಿಕಾರಿಗಳಿಗೆ ಸೂಚಿಸಿದರು.

    ನಗರೋತ್ಥಾನ ಅಡಿಯಲ್ಲಿ ಕಾಮಗಾರಿ ಮತ್ತು ನೀರು ಸರಬರಾಜು ಮಾಡಬೇಕು. ಮಾಸ್ಟರ್ ಪ್ಲ್ಯಾನ್ ಬಣಗಾರಗಲ್ಲಿ , ಕಿಲ್ಲಾಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. 15 ಹಣಕಾಸು ಯೋಜನೆಯಲ್ಲಿ ಪ್ರಸ್ತುತ 5 ಕಾಮಗಾರಿಗಳು ಪ್ರಗತಿಯಲ್ಲಿದ್ದು ಅವುಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಸಭೆಯಲ್ಲಿ ಗೋಕಾಕ ತಹಶೀಲ್ದಾರ್ ಕೆ.ಮಂಜುನಾಥ್ , ಮೂಡಲಗಿ ತಹಶೀಲ್ದಾರ್ , ಪ್ರಶಾಂತ್ ಚನ್ನಗೊಂಡ, ಗೋಕಾಕ ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ , ಮೂಡಲಗಿ ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚನ್ನನವರ ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನ ವಿಭಾಗದಲ್ಲಿ ಐಸಿಎಸ್‌ ಎಸ್‌ ಆರ್–ಪ್ರಾಯೋಜಿತ ಸಂಶೋಧನ ಯೋಜನೆಗೆ ಸಂಶೋಧನ ಸಹಾಯಕರ…

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.