ಸರಗೂರು: ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾದನೂರು ಗ್ರಾಮ ಪಂಚಾಯಿತಿ ವತಿಯಿಂದ ‘ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ’ ಬುಧವಾರ ರಂದು ಸಂಜೆ ಹಮ್ಮಿಕೊಳ್ಳಲಾಗಿತ್ತು.
75 ನೇ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ, ಸಂವಿಧಾನ ಜಾಗೃತಿ ಜಾಥಾ ಸ್ತಬ್ಧ ಚಿತ್ರಕ್ಕೆ ಹೂವಿನ ಮಾಲಾರ್ಪಣೆ ಮಾಡಿ, ಸಂವಿಧಾನ ಪೀಠಿಕೆಯ ಭಿತ್ತಿಪತ್ರಗಳನ್ನು ಹಿಡಿದು, ಪೂರ್ಣಕುಂಭ ಸ್ವಾಗತ ಕೋರಲಾಯಿತು.
ಇದೇ ವೇಳೆ ಒಕ್ಕೂರಲಿನಿಂದ ಸಂವಿಧಾನ ಪೀಠಿಕೆಯ ಪ್ರಮಾಣ ವಚನ ಬೋಧಿಸಿದರು. ನಂತರ ಉಪಾಧ್ಯಕ್ಷ ಪ್ರಕಾಶ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದ ಮಹತ್ವ ಹಾಗೂ ಪ್ರತಿಯೊಬ್ಬರು ಅರಿತು ಇತರರಿಗೂ ತಿಳಿಸುವ ಮೂಲಕ ಪ್ರತಿಯೊಬ್ಬರ ಭಾರತೀಯ ಪ್ರಜೆಯಲ್ಲೂ ಸಂವಿಧಾನದ ಜಾಗೃತಿ ಮೂಡಿಸಬೇಕಿದೆ ಎಂದರು.
ದೇಶದ ಸ್ವಾತಂತ್ರ್ಯ ನಂತರ ಅವಶ್ಯವಾಗಿರುವ ಎಲ್ಲ ಕಾನೂನು ಹಕ್ಕು ಮತ್ತು ಕರ್ತವ್ಯಗಳನ್ನು ಒಳಗೊಂಡ ಸಂವಿಧಾನ ಹೃದಯ ಮತ್ತು ತಾಯಿ ಇದ್ದಂತೆ ಎಂದರು. ಸಂವಿಧಾನವು ಶಿಕ್ಷಣ ಉದ್ಯೋಗ ಸಮಾನತೆ ಬದುಕು ಸಾಗಿಸಲು ಎಲ್ಲರಿಗೂ ಮುಕ್ತ ಅವಕಾಶ ನೀಡಿದೆ. ಯಾವಾಗಲಾದರೂ ನಮ್ಮ ಹಕ್ಕಿಗೆ ಧಕ್ಕೆಯಾದರೆ ಅದರ ವಿರುದ್ಧ ಹೋರಾಡಲು ಸಂವಿಧಾನ ಅವಕಾಶ ನೀಡಿದೆ. ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎಲ್ಲರೂ ಒಂದಾಗಿ ಸಂವಿಧಾನದ ಆಶಯವನ್ನು ಈಡೇರಿಸಿ ಘನತೆಯಿಂದ ಬದುಕು ಸಾಗಿಸಬೇಕು ಎಂದು ಹೇಳಿದರು.
ಹಾದನೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ನಾಗರೀಕರು ಆಟೋ,ಬೈಕ್, ಮೂಲಕ ರಸ್ತೆಯಲ್ಲಿ ರ್ಯಾಲಿ ನಡೆಸಿ ಗೌರವ ಸೂಚಿಸಿದರು. ಶಾಲೆಯ ಮಕ್ಕಳಿಯಿಂದ ರಾಷ್ಟ್ರ ನಾಯಕರ ವೇಷಭೂಷಣ ಮತ್ತು ಗ್ರಾಮದ ಮಹಿಳೆಯರಿಂದ ಕಳಸ ಹೊತ್ತು ಮೆರವಣಿಗೆ ಮೂಲಕ ವಿವಿಧ ಸಾಂಸ್ಕೃತಿಕ ತಂಡಗಳಿಂದ ಪ್ರಮುಖ ಬೀದಿಗಳಲ್ಲಿ ಕಲಾಪ್ರದರ್ಶನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಮಂಜುಳಾ ರಾಮಚಂದ್ರ, ಸದಸ್ಯರು ಗಂಗಾಧರ್, ರತ್ನಮ್ಮ ರಾಜೇಶ್, ಶಿವರಾಜು, ಶಿವಲಿಂಗಯ್ಯ, ಶಿವಕುಮಾರ್, ಭಾಗ್ಯ ಕೆಂಪಸಿದ್ದ, ಪ್ರಿಯಾಂಕ ನಾಗರಾಜು, ಜ್ಯೋತಿ ರಮೇಶ್, ಯಜಮಾನರು ಶಿವಮೂರ್ತಿ, ಸತೀಶ್, ಸಿದ್ದರಾಜು, ಮುಖಂಡರು ಚಿಕ್ಕ ಸಿದ್ದರಾಮಯ್ಯ,ಪುಟ್ಟಸ್ವಾಮಿ, ಶ್ರೀನಿವಾಸ, ನಾಗರಾಜು, ಮಹಾದೇವಯ್ಯ, ಮಹದೇವಸ್ವಾಮಿ, ಶಂಕರ್, ಚಿಕ್ಕಣ್ಣ, ಸ್ವಾಮಿ,ಶಿವು, ಶಶಿಕುಮಾರ್, ಗೋಪಾಲಯ್ಯ, ರಾಜಣ್ಣ, ಸಾಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಮಸ್ವಾಮಿ, ಪಿಡಿಓ ಶಿಲ್ಪ, ನೋಡಲ್ ಅಧಿಕಾರಿ ಹಿಂದುಳಿದ ವರ್ಗದ ಇಲಾಖೆ ಅಧಿಕಾರಿ ಶಶಿಕಲಾ,ಶಿಶು ಅಭಿವೃದ್ಧಿ ಇಲಾಖೆ ಸಿಬ್ಬಂದಿ ರಜೀನಿ,ಇನ್ನೂ ಮುಖಂಡರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಶಾಲೆಯ ಶಿಕ್ಷಕರು ಗ್ರಾಮದ ಮಹಿಳೆಯರು ಕೂಡ ಸೇರಿದಂತೆ ಭಾಗಿಯಾಗಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296