nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026
    Facebook Twitter Instagram
    ಟ್ರೆಂಡಿಂಗ್
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    • ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ
    • ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
    • ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ
    • ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ
    • ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ
    • ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ
    • ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಡಹಗಲೇ ವೃದ್ಧ ದಂಪತಿಯನ್ನು ಯಾಮಾರಿಸಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ
    ಕೊರಟಗೆರೆ May 19, 2022

    ಹಾಡಹಗಲೇ ವೃದ್ಧ ದಂಪತಿಯನ್ನು ಯಾಮಾರಿಸಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ

    By adminMay 19, 2022No Comments2 Mins Read
    kotakare

    ಕೊರಟಗೆರೆ: ವಯೋವೃದ್ಧರಿಗೆ 10 ಸಾವಿರ ರೂಪಾಯಿಯ ಆಸೆ ತೋರಿಸಿ, ಸುಮಾರು 5 ಲಕ್ಷ ರೂಪಾಯಿಗಳಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಕೊರಟಗೆರೆ ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದ್ದು, ಇದೀಗ ಒಡವೆಗಳನ್ನು ಕಳೆದುಕೊಂಡ ವೃದ್ಧರು ಕಂಗಾಲಾಗಿದ್ದಾರೆ.

    ಕೊರಟಗೆರೆ ಪಟ್ಟಣದ ದೊಡ್ಡಪೇಟೆ ಬಡಾವಣೆಯ ಗಿರಿಜಮ್ಮ ರೇಣುಕಪ್ಪ ಎಂಬ ವೃದ್ಧ ದಂಪತಿಯ ಮನೆಗೆ ಬಂದ  ಅಪರಿಚಿತ ವ್ಯಕ್ತಿಯೊಬ್ಬ ಕಣ್ಣಿನ ಆಪರೇಶನ್ ಮಾಡಿಸಿದರೆ ಹತ್ತು ಸಾವಿರ ರೂಪಾಯಿ ಉಚಿತ ಹಣವನ್ನು ಕೊಡುತ್ತಾರೆ ಎಂದು ವೃದ್ಧರನ್ನು ನಂಬಿಸಿದ್ದಾನೆ. ಇವರ ಆಧಾರ್ ಕಾರ್ಡ್ ನಂಬರ್ ಪೆನ್ಷನ್ ಕ್ಲಿಪ್ ಪಡೆದುಕೊಂಡು ವೃದ್ಧರನ್ನು ನಂಬಿಸಿದ್ದಾನೆ.

    ಇದಾದ ಬಳಿಕ ಅಜ್ಜಿಯನ್ನು ತನ್ನ ಬೈಕ್ ನಲ್ಲಿ ಕೂರಿಸಿಕೊಂಡು  ಆಸ್ಪತ್ರೆಯ ಬಳಿಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಆಪರೇಷನ್ ಮಾಡುವಾಗ ಒಡವೆಯನ್ನು ಯಾರಾದರೂ ಕೊಂಡುಹೋಗುತ್ತಾರೆ. ನನ್ನ ಬಳಿಯಲ್ಲಿ ಕೊಡಿ ನಾನು ನೋಡಿಕೊಳ್ಳುತ್ತೇನೆ ಎಂದು ಅಜ್ಜಿಯನ್ನು ನಂಬಿಸಿದ್ದಾನೆ. ಈತನ ಮಾತು ನಂಬಿ ಅಜ್ಜಿ ತಮ್ಮ 5 ಲಕ್ಷ ರೂಪಾಯಿ ಬೆಲೆ ಬಾಳುವ ಒಡವೆಯನ್ನು ಕಳ್ಳನ ಕೈಗೆ ನೀಡಿದ್ದಾರೆ. ಈ ವೇಳೆ, ನೀವು ಆಸ್ಪತ್ರೆಯ ಒಳಗೆ ಹೋಗಿ ಕಾಯ್ತಾ ಇರಿ, ನಾನು ಈಗ ಬರುತ್ತೇನೆ ಎಂದು ಅಜ್ಜಿಯನ್ನು ಆಸ್ಪತ್ರೆಯೊಳಗೆ ಕಳುಹಿಸಿ ಕಳ್ಳ ಪರಾರಿಯಾಗಿದ್ದಾನೆ. ಆತ ವಾಪಸ್ ಬಾರದೇ ಇದ್ದಾಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ.

    ವಠಾರದ ಜನರ ಎದುರಲ್ಲೇ ಯುವಕ ಅಜ್ಜಿಯನ್ನು ಕರೆದುಕೊಂಡು ಹೋಗಿದ್ದಾನೆ. ದಂಪತಿಯ ದೂರದ ಸಂಬಂಧಿಕ ಎಂಬಂತೆ ವಠಾರದಲ್ಲಿ ಪೋಸು ನೀಡಿದ್ದ ಆರೋಪಿ ಸ್ಥಳೀಯರನ್ನೂ ನಂಬಿಸಿದ್ದ. ಹಾಡ ಹಗಲೇ ಇಂತಹದ್ದೊಂದು ಘಟನೆ ನಡೆದಿದ್ದು, ವೃದ್ಧರ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಆರೋಪಿಯು ಈ ಕೃತ್ಯ ನಡೆಸಿದ್ದಾನೆ. ಆರೋಪಿಯು ಈ ಕೃತ್ಯ ನಡೆಸುವುದಕ್ಕೆ ಸಾಕಷ್ಟು ಸಮಯಗಳಿಂದ ಹೊಂಚು ಹಾಕಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ  ಕೊರಟಗೆರೆ ಪೊಲೀಸ್ ಠಾಣೆಯ  ಅಧಿಕಾರಿಗಳು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ ಎನ್ನಲಾಗಿದೆ.

    ಇಂತಹ ಸುಳ್ಳು ನೆಪಗಳನ್ನು ಒಡ್ಡಿ ಅಪರಿಚಿತರು ನಿಮ್ಮ ಮನೆ ಬಾಗಿಲಿಗೆ ಬರುತ್ತಾರೆ ಅವರ ಬಗ್ಗೆ ಎಚ್ಚರವಿರಲಿ . ಹಾಡಹಗಲಲ್ಲೇ ಇಂಥ ಘಟನೆ ನಡೆದಿರುವುದು ಇದೇ ಮೊದಲೇನಲ್ಲ ಈ ಹಿಂದೆಯೂ ಅನೇಕ ಮನೆಗಳಲ್ಲಿ ಕಳ್ಳತನವಾಗಿದೆ. ಇಂತಹ ಕಳ್ಳರನ್ನು ಕೂಡಲೇ ಬಂಧಿಸಿ ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

    ಜನರು ಎಲ್ಲಿಯವರೆಗೂ  ಮೋಸಹೋಗುತ್ತಾರೊ ಅಲ್ಲಿವರಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ  ಇಂತಹ ಅಪರಿಚಿತರು ನೀಡುವ  ಹಣದ ಆಸೆಗೆ ಮರುಳಾಗಿ ನಿಮ್ಮಲ್ಲಿರುವ ಹಣ, ನೆಮ್ಮದಿಯನ್ನು ಕಳೆದುಕೊಳ್ಳಬೇಡಿ.  ಪೊಲೀಸರು ಅವರ ಕರ್ತವ್ಯ ಮಾಡುತ್ತಾರೆ. ಆದರೆ ಸಮಾಜ ಜಾಗೃತವಾಗಿದ್ದರೆ ಮಾತ್ರವೇ,  ಅಪರಾಧ ಪ್ರಕರಣಗಳು ನಡೆಯದಂತೆ ತಡೆಯಬಹುದಾಗಿದೆ.

    ಮೈಮೇಲೆ ಒಡವೆಗಳನ್ನು ಹಾಕಿಕೊಂಡು ಓಡಾಡುವ ವೇಳೆ ನಿಮ್ಮನ್ನು ಸಾಕಷ್ಟು ಸಂಖ್ಯೆಯ ಜನರು ಗಮನಿಸುತ್ತಿರುತ್ತಾರೆ. ಅದರಲ್ಲಿ ಕಳ್ಳರು ಕೂಡ ಇರಬಹುದು ಎನ್ನುವ ಪ್ರಜ್ಞೆ ಸದಾ ಇರಲಿ. ಕುಟುಂಬದ ಸಮಸ್ಯೆ ಗಳಿಗೆಂದು ಒಡವೆ ಮಾಡಿಸಿ ಇಂತಹ ಕಳ್ಳರಿಗೆ ಆಹಾರವಾಗದಿರಲಿ. ಸಾಧ್ಯವಾದರೆ ನಿಮ್ಮ ಒಡವೆ ಹಣವನ್ನು ಬ್ಯಾಂಕ್ ನಲ್ಲಿ ಭದ್ರವಾಗಿ ಇಡುವುದೇ ಉತ್ತಮ.  ಸದಾ ಜಾಗೃತವಾಗಿರಿ, ಎಚ್ಚರವಾಗಿರಿ.

    ವರದಿ:  ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ

    September 9, 2026

    ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ

    September 9, 2026

    ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ

    September 8, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಚಿಕ್ಕನಾಯಕನಹಳ್ಳಿ: ರೈತರು ಸಹಕಾರ ನೀಡಿದರೆ ಸಾದ್ಯವಾದಷ್ಟು ಬೇಗ ಕಾಮಗಾರಿಯನ್ನು ಮುಗಿಸಲಾಗುವುದು ಭೂಸ್ವಾಧೀನ ಪಡಿಸಿಕೊಂಡಿರುವ ರೈತರು ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ…

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.