nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

    February 4, 2026

    ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

    February 4, 2026

    ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

    February 4, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
    • ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ
    • ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ
    • ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ
    • ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ
    • ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು
    • ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ
    • ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಡಹಗಲೇ ವೃದ್ಧ ದಂಪತಿಯನ್ನು ಯಾಮಾರಿಸಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ
    ಕೊರಟಗೆರೆ May 19, 2022

    ಹಾಡಹಗಲೇ ವೃದ್ಧ ದಂಪತಿಯನ್ನು ಯಾಮಾರಿಸಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ

    By adminMay 19, 2022No Comments2 Mins Read
    kotakare

    ಕೊರಟಗೆರೆ: ವಯೋವೃದ್ಧರಿಗೆ 10 ಸಾವಿರ ರೂಪಾಯಿಯ ಆಸೆ ತೋರಿಸಿ, ಸುಮಾರು 5 ಲಕ್ಷ ರೂಪಾಯಿಗಳಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಕೊರಟಗೆರೆ ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದ್ದು, ಇದೀಗ ಒಡವೆಗಳನ್ನು ಕಳೆದುಕೊಂಡ ವೃದ್ಧರು ಕಂಗಾಲಾಗಿದ್ದಾರೆ.

    ಕೊರಟಗೆರೆ ಪಟ್ಟಣದ ದೊಡ್ಡಪೇಟೆ ಬಡಾವಣೆಯ ಗಿರಿಜಮ್ಮ ರೇಣುಕಪ್ಪ ಎಂಬ ವೃದ್ಧ ದಂಪತಿಯ ಮನೆಗೆ ಬಂದ  ಅಪರಿಚಿತ ವ್ಯಕ್ತಿಯೊಬ್ಬ ಕಣ್ಣಿನ ಆಪರೇಶನ್ ಮಾಡಿಸಿದರೆ ಹತ್ತು ಸಾವಿರ ರೂಪಾಯಿ ಉಚಿತ ಹಣವನ್ನು ಕೊಡುತ್ತಾರೆ ಎಂದು ವೃದ್ಧರನ್ನು ನಂಬಿಸಿದ್ದಾನೆ. ಇವರ ಆಧಾರ್ ಕಾರ್ಡ್ ನಂಬರ್ ಪೆನ್ಷನ್ ಕ್ಲಿಪ್ ಪಡೆದುಕೊಂಡು ವೃದ್ಧರನ್ನು ನಂಬಿಸಿದ್ದಾನೆ.


    Provided by
    Provided by

    ಇದಾದ ಬಳಿಕ ಅಜ್ಜಿಯನ್ನು ತನ್ನ ಬೈಕ್ ನಲ್ಲಿ ಕೂರಿಸಿಕೊಂಡು  ಆಸ್ಪತ್ರೆಯ ಬಳಿಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಆಪರೇಷನ್ ಮಾಡುವಾಗ ಒಡವೆಯನ್ನು ಯಾರಾದರೂ ಕೊಂಡುಹೋಗುತ್ತಾರೆ. ನನ್ನ ಬಳಿಯಲ್ಲಿ ಕೊಡಿ ನಾನು ನೋಡಿಕೊಳ್ಳುತ್ತೇನೆ ಎಂದು ಅಜ್ಜಿಯನ್ನು ನಂಬಿಸಿದ್ದಾನೆ. ಈತನ ಮಾತು ನಂಬಿ ಅಜ್ಜಿ ತಮ್ಮ 5 ಲಕ್ಷ ರೂಪಾಯಿ ಬೆಲೆ ಬಾಳುವ ಒಡವೆಯನ್ನು ಕಳ್ಳನ ಕೈಗೆ ನೀಡಿದ್ದಾರೆ. ಈ ವೇಳೆ, ನೀವು ಆಸ್ಪತ್ರೆಯ ಒಳಗೆ ಹೋಗಿ ಕಾಯ್ತಾ ಇರಿ, ನಾನು ಈಗ ಬರುತ್ತೇನೆ ಎಂದು ಅಜ್ಜಿಯನ್ನು ಆಸ್ಪತ್ರೆಯೊಳಗೆ ಕಳುಹಿಸಿ ಕಳ್ಳ ಪರಾರಿಯಾಗಿದ್ದಾನೆ. ಆತ ವಾಪಸ್ ಬಾರದೇ ಇದ್ದಾಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ.

    ವಠಾರದ ಜನರ ಎದುರಲ್ಲೇ ಯುವಕ ಅಜ್ಜಿಯನ್ನು ಕರೆದುಕೊಂಡು ಹೋಗಿದ್ದಾನೆ. ದಂಪತಿಯ ದೂರದ ಸಂಬಂಧಿಕ ಎಂಬಂತೆ ವಠಾರದಲ್ಲಿ ಪೋಸು ನೀಡಿದ್ದ ಆರೋಪಿ ಸ್ಥಳೀಯರನ್ನೂ ನಂಬಿಸಿದ್ದ. ಹಾಡ ಹಗಲೇ ಇಂತಹದ್ದೊಂದು ಘಟನೆ ನಡೆದಿದ್ದು, ವೃದ್ಧರ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಆರೋಪಿಯು ಈ ಕೃತ್ಯ ನಡೆಸಿದ್ದಾನೆ. ಆರೋಪಿಯು ಈ ಕೃತ್ಯ ನಡೆಸುವುದಕ್ಕೆ ಸಾಕಷ್ಟು ಸಮಯಗಳಿಂದ ಹೊಂಚು ಹಾಕಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ  ಕೊರಟಗೆರೆ ಪೊಲೀಸ್ ಠಾಣೆಯ  ಅಧಿಕಾರಿಗಳು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ ಎನ್ನಲಾಗಿದೆ.

    ಇಂತಹ ಸುಳ್ಳು ನೆಪಗಳನ್ನು ಒಡ್ಡಿ ಅಪರಿಚಿತರು ನಿಮ್ಮ ಮನೆ ಬಾಗಿಲಿಗೆ ಬರುತ್ತಾರೆ ಅವರ ಬಗ್ಗೆ ಎಚ್ಚರವಿರಲಿ . ಹಾಡಹಗಲಲ್ಲೇ ಇಂಥ ಘಟನೆ ನಡೆದಿರುವುದು ಇದೇ ಮೊದಲೇನಲ್ಲ ಈ ಹಿಂದೆಯೂ ಅನೇಕ ಮನೆಗಳಲ್ಲಿ ಕಳ್ಳತನವಾಗಿದೆ. ಇಂತಹ ಕಳ್ಳರನ್ನು ಕೂಡಲೇ ಬಂಧಿಸಿ ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

    ಜನರು ಎಲ್ಲಿಯವರೆಗೂ  ಮೋಸಹೋಗುತ್ತಾರೊ ಅಲ್ಲಿವರಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ  ಇಂತಹ ಅಪರಿಚಿತರು ನೀಡುವ  ಹಣದ ಆಸೆಗೆ ಮರುಳಾಗಿ ನಿಮ್ಮಲ್ಲಿರುವ ಹಣ, ನೆಮ್ಮದಿಯನ್ನು ಕಳೆದುಕೊಳ್ಳಬೇಡಿ.  ಪೊಲೀಸರು ಅವರ ಕರ್ತವ್ಯ ಮಾಡುತ್ತಾರೆ. ಆದರೆ ಸಮಾಜ ಜಾಗೃತವಾಗಿದ್ದರೆ ಮಾತ್ರವೇ,  ಅಪರಾಧ ಪ್ರಕರಣಗಳು ನಡೆಯದಂತೆ ತಡೆಯಬಹುದಾಗಿದೆ.

    ಮೈಮೇಲೆ ಒಡವೆಗಳನ್ನು ಹಾಕಿಕೊಂಡು ಓಡಾಡುವ ವೇಳೆ ನಿಮ್ಮನ್ನು ಸಾಕಷ್ಟು ಸಂಖ್ಯೆಯ ಜನರು ಗಮನಿಸುತ್ತಿರುತ್ತಾರೆ. ಅದರಲ್ಲಿ ಕಳ್ಳರು ಕೂಡ ಇರಬಹುದು ಎನ್ನುವ ಪ್ರಜ್ಞೆ ಸದಾ ಇರಲಿ. ಕುಟುಂಬದ ಸಮಸ್ಯೆ ಗಳಿಗೆಂದು ಒಡವೆ ಮಾಡಿಸಿ ಇಂತಹ ಕಳ್ಳರಿಗೆ ಆಹಾರವಾಗದಿರಲಿ. ಸಾಧ್ಯವಾದರೆ ನಿಮ್ಮ ಒಡವೆ ಹಣವನ್ನು ಬ್ಯಾಂಕ್ ನಲ್ಲಿ ಭದ್ರವಾಗಿ ಇಡುವುದೇ ಉತ್ತಮ.  ಸದಾ ಜಾಗೃತವಾಗಿರಿ, ಎಚ್ಚರವಾಗಿರಿ.

    ವರದಿ:  ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಗ್ರಾಮೀಣ ಏಕತೆ ದೇಶದ ಶಕ್ತಿಯ ಮೂಲ: ಹನುಮಂತನಾಥ ಸ್ವಾಮೀಜಿ

    February 3, 2026

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026

    ಕೊಡಿಗೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಡಿಕೆ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳ ಬಂಧನ, 7.30 ಲಕ್ಷ ಮೌಲ್ಯದ ಸ್ವತ್ತು ವಶ

    January 31, 2026

    Leave A Reply Cancel Reply

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

    February 4, 2026

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ.…

    ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

    February 4, 2026

    ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

    February 4, 2026

    ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

    February 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.