nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025
    Facebook Twitter Instagram
    ಟ್ರೆಂಡಿಂಗ್
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    • ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಡಹಗಲೇ ವೃದ್ಧ ದಂಪತಿಯನ್ನು ಯಾಮಾರಿಸಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ
    ಕೊರಟಗೆರೆ May 19, 2022

    ಹಾಡಹಗಲೇ ವೃದ್ಧ ದಂಪತಿಯನ್ನು ಯಾಮಾರಿಸಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ

    By adminMay 19, 2022No Comments2 Mins Read
    kotakare

    ಕೊರಟಗೆರೆ: ವಯೋವೃದ್ಧರಿಗೆ 10 ಸಾವಿರ ರೂಪಾಯಿಯ ಆಸೆ ತೋರಿಸಿ, ಸುಮಾರು 5 ಲಕ್ಷ ರೂಪಾಯಿಗಳಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಕೊರಟಗೆರೆ ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದ್ದು, ಇದೀಗ ಒಡವೆಗಳನ್ನು ಕಳೆದುಕೊಂಡ ವೃದ್ಧರು ಕಂಗಾಲಾಗಿದ್ದಾರೆ.

    ಕೊರಟಗೆರೆ ಪಟ್ಟಣದ ದೊಡ್ಡಪೇಟೆ ಬಡಾವಣೆಯ ಗಿರಿಜಮ್ಮ ರೇಣುಕಪ್ಪ ಎಂಬ ವೃದ್ಧ ದಂಪತಿಯ ಮನೆಗೆ ಬಂದ  ಅಪರಿಚಿತ ವ್ಯಕ್ತಿಯೊಬ್ಬ ಕಣ್ಣಿನ ಆಪರೇಶನ್ ಮಾಡಿಸಿದರೆ ಹತ್ತು ಸಾವಿರ ರೂಪಾಯಿ ಉಚಿತ ಹಣವನ್ನು ಕೊಡುತ್ತಾರೆ ಎಂದು ವೃದ್ಧರನ್ನು ನಂಬಿಸಿದ್ದಾನೆ. ಇವರ ಆಧಾರ್ ಕಾರ್ಡ್ ನಂಬರ್ ಪೆನ್ಷನ್ ಕ್ಲಿಪ್ ಪಡೆದುಕೊಂಡು ವೃದ್ಧರನ್ನು ನಂಬಿಸಿದ್ದಾನೆ.


    Provided by
    Provided by

    ಇದಾದ ಬಳಿಕ ಅಜ್ಜಿಯನ್ನು ತನ್ನ ಬೈಕ್ ನಲ್ಲಿ ಕೂರಿಸಿಕೊಂಡು  ಆಸ್ಪತ್ರೆಯ ಬಳಿಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಆಪರೇಷನ್ ಮಾಡುವಾಗ ಒಡವೆಯನ್ನು ಯಾರಾದರೂ ಕೊಂಡುಹೋಗುತ್ತಾರೆ. ನನ್ನ ಬಳಿಯಲ್ಲಿ ಕೊಡಿ ನಾನು ನೋಡಿಕೊಳ್ಳುತ್ತೇನೆ ಎಂದು ಅಜ್ಜಿಯನ್ನು ನಂಬಿಸಿದ್ದಾನೆ. ಈತನ ಮಾತು ನಂಬಿ ಅಜ್ಜಿ ತಮ್ಮ 5 ಲಕ್ಷ ರೂಪಾಯಿ ಬೆಲೆ ಬಾಳುವ ಒಡವೆಯನ್ನು ಕಳ್ಳನ ಕೈಗೆ ನೀಡಿದ್ದಾರೆ. ಈ ವೇಳೆ, ನೀವು ಆಸ್ಪತ್ರೆಯ ಒಳಗೆ ಹೋಗಿ ಕಾಯ್ತಾ ಇರಿ, ನಾನು ಈಗ ಬರುತ್ತೇನೆ ಎಂದು ಅಜ್ಜಿಯನ್ನು ಆಸ್ಪತ್ರೆಯೊಳಗೆ ಕಳುಹಿಸಿ ಕಳ್ಳ ಪರಾರಿಯಾಗಿದ್ದಾನೆ. ಆತ ವಾಪಸ್ ಬಾರದೇ ಇದ್ದಾಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ.

    ವಠಾರದ ಜನರ ಎದುರಲ್ಲೇ ಯುವಕ ಅಜ್ಜಿಯನ್ನು ಕರೆದುಕೊಂಡು ಹೋಗಿದ್ದಾನೆ. ದಂಪತಿಯ ದೂರದ ಸಂಬಂಧಿಕ ಎಂಬಂತೆ ವಠಾರದಲ್ಲಿ ಪೋಸು ನೀಡಿದ್ದ ಆರೋಪಿ ಸ್ಥಳೀಯರನ್ನೂ ನಂಬಿಸಿದ್ದ. ಹಾಡ ಹಗಲೇ ಇಂತಹದ್ದೊಂದು ಘಟನೆ ನಡೆದಿದ್ದು, ವೃದ್ಧರ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡು ಆರೋಪಿಯು ಈ ಕೃತ್ಯ ನಡೆಸಿದ್ದಾನೆ. ಆರೋಪಿಯು ಈ ಕೃತ್ಯ ನಡೆಸುವುದಕ್ಕೆ ಸಾಕಷ್ಟು ಸಮಯಗಳಿಂದ ಹೊಂಚು ಹಾಕಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ  ಕೊರಟಗೆರೆ ಪೊಲೀಸ್ ಠಾಣೆಯ  ಅಧಿಕಾರಿಗಳು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ ಎನ್ನಲಾಗಿದೆ.

    ಇಂತಹ ಸುಳ್ಳು ನೆಪಗಳನ್ನು ಒಡ್ಡಿ ಅಪರಿಚಿತರು ನಿಮ್ಮ ಮನೆ ಬಾಗಿಲಿಗೆ ಬರುತ್ತಾರೆ ಅವರ ಬಗ್ಗೆ ಎಚ್ಚರವಿರಲಿ . ಹಾಡಹಗಲಲ್ಲೇ ಇಂಥ ಘಟನೆ ನಡೆದಿರುವುದು ಇದೇ ಮೊದಲೇನಲ್ಲ ಈ ಹಿಂದೆಯೂ ಅನೇಕ ಮನೆಗಳಲ್ಲಿ ಕಳ್ಳತನವಾಗಿದೆ. ಇಂತಹ ಕಳ್ಳರನ್ನು ಕೂಡಲೇ ಬಂಧಿಸಿ ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

    ಜನರು ಎಲ್ಲಿಯವರೆಗೂ  ಮೋಸಹೋಗುತ್ತಾರೊ ಅಲ್ಲಿವರಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ  ಇಂತಹ ಅಪರಿಚಿತರು ನೀಡುವ  ಹಣದ ಆಸೆಗೆ ಮರುಳಾಗಿ ನಿಮ್ಮಲ್ಲಿರುವ ಹಣ, ನೆಮ್ಮದಿಯನ್ನು ಕಳೆದುಕೊಳ್ಳಬೇಡಿ.  ಪೊಲೀಸರು ಅವರ ಕರ್ತವ್ಯ ಮಾಡುತ್ತಾರೆ. ಆದರೆ ಸಮಾಜ ಜಾಗೃತವಾಗಿದ್ದರೆ ಮಾತ್ರವೇ,  ಅಪರಾಧ ಪ್ರಕರಣಗಳು ನಡೆಯದಂತೆ ತಡೆಯಬಹುದಾಗಿದೆ.

    ಮೈಮೇಲೆ ಒಡವೆಗಳನ್ನು ಹಾಕಿಕೊಂಡು ಓಡಾಡುವ ವೇಳೆ ನಿಮ್ಮನ್ನು ಸಾಕಷ್ಟು ಸಂಖ್ಯೆಯ ಜನರು ಗಮನಿಸುತ್ತಿರುತ್ತಾರೆ. ಅದರಲ್ಲಿ ಕಳ್ಳರು ಕೂಡ ಇರಬಹುದು ಎನ್ನುವ ಪ್ರಜ್ಞೆ ಸದಾ ಇರಲಿ. ಕುಟುಂಬದ ಸಮಸ್ಯೆ ಗಳಿಗೆಂದು ಒಡವೆ ಮಾಡಿಸಿ ಇಂತಹ ಕಳ್ಳರಿಗೆ ಆಹಾರವಾಗದಿರಲಿ. ಸಾಧ್ಯವಾದರೆ ನಿಮ್ಮ ಒಡವೆ ಹಣವನ್ನು ಬ್ಯಾಂಕ್ ನಲ್ಲಿ ಭದ್ರವಾಗಿ ಇಡುವುದೇ ಉತ್ತಮ.  ಸದಾ ಜಾಗೃತವಾಗಿರಿ, ಎಚ್ಚರವಾಗಿರಿ.

    ವರದಿ:  ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊರಟಗೆರೆ: ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ  ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಬ್ರಹ್ಮ ರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಲಕ್ಷದೀಪೋತ್ಸವ…

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.