nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025
    Facebook Twitter Instagram
    ಟ್ರೆಂಡಿಂಗ್
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರು  ಇಂದು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ:  ಮುರುಳಿಧರ್ ಹಾಲಪ್ಪ
    ಮಧುಗಿರಿ December 30, 2021

    ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರು  ಇಂದು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ:  ಮುರುಳಿಧರ್ ಹಾಲಪ್ಪ

    By adminDecember 30, 2021No Comments2 Mins Read
    halapa boat

    ಮಧುಗಿರಿ: ವಿದ್ಯಾರ್ಥಿಗಳು ದೇಶದ ನಿಜವಾದ ಭವಿಷ್ಯ,  ಅಬ್ದುಲ್ ಕಲಾಂ ಸೇರಿದಂತೆ ಮಹನೀಯರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಯಶಸ್ಸು ಗಳಿಸಿ ತುಮಕೂರು ಶ್ರೀ ರಾಮಕೃಷ್ಣ ಆಶ್ರಮದ ವೀರೇಶಾನಂದ ಸರಸ್ವತಿ  ಸ್ವಾಮೀಜಿ ತಿಳಿಸಿದರು.

    ಪಟ್ಟಣದ ಎಂ ಜಿ ಎಂ  ಶಾಲೆಯಲ್ಲಿ  ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಹಾಲಪ್ಪ ಪ್ರತಿಷ್ಠಾನ ವತಿಯಿಂದ ಸರ್ಕಾರಿ ಶಾಲೆಗಳ ಉನ್ನತಿಕರಣ ಹಾಗೂ ಶಾಲಾ ಪೀಠೋಪಕರಣಗಳು ಮತ್ತು ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ  ಅವರು, ವಿದ್ಯಾರ್ಥಿ ದೆಸೆ ಜೀವನದ ಅತ್ಯಂತ ಶ್ರೇಷ್ಠ ಘಟ್ಟ. ಜೀವನದಲ್ಲಿ ಅರ್ಥಹೀನವಾಗಿ ಕಳೆದ ಸಮಯ ಅತ್ಯಮೂಲ್ಯ ಕಾಲಘಟ್ಟದ ನಷ್ಟ. ಸಮಯ ಎಲ್ಲಕ್ಕಿಂತ ಶ್ರೇಷ್ಠ. ದೇವರು ಎಲ್ಲರಿಗೂ ಕೊಟ್ಟ ಶ್ರೇಷ್ಠ ಸಂಪನ್ಮೂಲ ಸಮಯ.  ಇಂದು ಒಂದು ಉತ್ತಮ ಶಾಲೆ ತೆರೆದರೆ ನಾಳೆ ನೂರು ಜೈಲುಗಳನ್ನು ಮುಚ್ಚಬಹುದು. ಶಿಕ್ಷಕರು ಮಕ್ಕಳಿಗೆ ನೈತಿಕತೆಯ ಚೌಕಟ್ಟಿನಲ್ಲಿ ಸುಂದರವಾದ ಪರಿಸರವನ್ನು ಪರಿಚಯಿಸಬೇಕಿದೆ ಎಂದರು.


    Provided by
    Provided by
    Provided by

    ರಾಷ್ಟ್ರ ಕವಿ ಕುವೆಂಪು ರಾಮಕೃಷ್ಣ ಆಶ್ರಮದ ಶಿಶು ಮತ್ತು ಹಳೇಯ ವಿದ್ಯಾರ್ಥಿ.  ಅವರಿಗೆ ಜ್ಞಾನ ಪೀಠ ಪ್ರಶಸ್ತಿ ಬಂದಾಗ ಆಶ್ರಮವನ್ನು ಸ್ಮರಿಸಿ ಸ್ವೀಕರಿಸಿದರು ಎಂದು ಸ್ಮರಿಸಿದ ಅವರು, ಮಧುಗಿರಿಗೆ ಎಂ.ಜಿ.ಎಂ. ಶಾಲೆ ಮೈಸೂರಿನ ಮಹಾರಾಣಿ ಶಾಲೆಯಂತೆ ಮಾದರಿಯಾಗಿದೆ. ಮುರಳೀಧರ ಹಾಲಪ್ಪನವರು ಉತ್ತಮ ಕೆಲಸ ಮಾಡುತ್ತಿದ್ದು, ಇದು ಇತರರಿಗೆ ಪ್ರೇರಣೆಯಾಗಲಿ ಎಂದರು.

    ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಅವಕಾಶಗಳಿವೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರು ಇಂದು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ.   ಸರ್ಕಾರದ ವತಿಯಿಂದ ಇಂದು ಆಂಗ್ಲ ಮಾದ್ಯಮ ಆರಂಬಿಸಿ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ ಪೀಟೋಪಕರಣಗಳು ಮತ್ತು ಇತರೆ ಕ್ರೀಡಾ ಸಾಮಗ್ರಿಗಳ ಕೊರತೆ ಕಂಡು ಬರುತ್ತಿದೆ ಎಂದರು.

    ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮವಿದ್ದರೆ ಏನು ಬೇಕಾದರೂ ಸಾಧಿಸಬಹುದು. ಪೋಷಕರು ತಮ್ಮ ಮಕ್ಕಳ ಬಗ್ಗೆ ಹಲವಾರು ಕನಸುಗಳನ್ನು ಕಂಡಿದ್ದು,  ಪೋಷಕರ ಕನಸುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪಣತೊಡಬೇಕು.ಹಣ ಇರುವವರೆಲ್ಲಾ ದಾನಿಗಳಲ್ಲ. ಉಳ್ಳವರು ಬಡವರಿಗೆ ದೀನ-ದಲಿತರಿಗೆ ಮಾನವೀಯತೆಯ ರೂಪದಲ್ಲಿ ಸಹಾಯಹಸ್ತ ಚಾಚಬೇಕು ಇದನ್ನು ಮನಗಂಡು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಹಾಲಪ್ಪ ಪ್ರತಿಷ್ಠಾನ ಹಾಗೂ ಶ್ರೀ ಸತ್ಯಸಾಯಿ ಟ್ರಸ್ಟ್ ವತಿಯಿಂದ ಪೀಟೋಪಕರಣಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಸೆಂಟ್ರಲ್ ಮುಸ್ಲಿಂ  ಅಸೋಸಿಯೇಶನ್ ಕಾರ್ಯದರ್ಶಿ ಮನ್ಸೂರ್ ಅಹಮದ್, ಎಂ.ಜಿ.ಎಂ  ಶಾಲೆಯ ಅಧ್ಯಕ್ಷ ಡಿ.ಜಿ. ಶಂಕರನಾರಾಯಣ ಶೆಟ್ಟಿ, ಕಾರ್ಯದರ್ಶಿ ಎಂ.ಎಸ್. ಶಂಕರನಾರಾಯಣ್, ಧಾರ್ಮಿಕ ಮುಖಂಡ ಎಂ.ಜಿ. ಶೀನಿವಾಸ ಮೂರ್ತಿ, ಫ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ. ವೆಂಕಟರಾಮು , ಬಿಇಓ ನಂಜುಂಡಯ್ಯ, ಸಂದೀಪ್ ನಾರಾಯಣ್, ಸಮಾಜ ಸೇವಕರಾದ ರಿಜ್ವಾನ್ ಪಾಷ    ಹಾಜರಿದ್ದರು.

    ವರದಿ: ಅಬಿದ್ ಮಧುಗಿರಿ 

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಧುಗಿರಿ: ಅಪರಿಚಿತ ವಾಹನ ಡಿಕ್ಕಿ: ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಾವು

    September 25, 2025

    ಮಧುಗಿರಿ: ಯೂರಿಯಾ ಖರೀದಿಗೆ ಮುಗಿಬಿದ್ದ ರೈತರು

    September 24, 2025

    ಮಧುಗಿರಿಯಲ್ಲಿ ಜೆಡಿಎಸ್ ಸದೃಢವಾಗಿದ್ದು 2028ರ ಗೆಲುವು ನಮ್ಮದೇ : ಬಿಜವರ ಶ್ರೀನಿವಾಸ್

    September 23, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ತಿಪಟೂರು: ತಾಲ್ಲೂಕಿನ ಸಾರ್ಥವಳ್ಳಿ ವಲಯದ ಹಾಲೇನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾರತಾಂಬೆ ಸಂಘದ 5ನೇ ವರ್ಷದ…

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.