ತುರುವೇಕೆರೆ: ತಾಲೂಕಿನ ದೊಡ್ಡ ಶೆಟ್ಟಿ ಕೆರೆ ಶ್ರೀರಂಗನಾಥ ಸ್ವಾಮಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆ ವತಿಯಿಂದ ದೊಡ್ಡ ಶೆಟ್ಟಿ ಕೆರೆ ಗ್ರಾಮದ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸಹಾಯಧನದ ಚೆಕ್ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಸ್ಥೆಯ ಗ್ರಾಮಾಂತರ ಯೋಜನಾಧಿಕಾರಿಗಳಾದ ಅನಿತಾ ಶೆಟ್ಟಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮೋಹನ್ ಕುಮಾರಿ ಮತ್ತು ಕಾರ್ಯದರ್ಶಿ ಶೀಲ ರವರಿಗೆ ಒಂದು ಲಕ್ಷದ ಸಹಾಯಧನದ ಚೆಕ್ಕನ್ನು ಹಸ್ತಾಂತರಿಸಿದರು
ಇನ್ನು ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಗ್ರಾಮದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು
ಇದರ ಮಧ್ಯೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಮಧು ಸೇವಾ ಪ್ರತಿನಿಧಿ ಗಿರೀಶ್ ಮಹಿಳಾ ಹಾಲು ಸಹಕಾರ ಸಂಘದ ನಿರ್ದೇಶಕರುಗಳು ಶ್ರೀ ಧರ್ಮಸ್ಥಳ ಸಂಸ್ಥೆಯ ವಿವಿಧ ಸಂಘಗಳ ಸದಸ್ಯರುಗಳು ಹಾಜರಿದ್ದರು
ವರದಿ: ಸುರೇಶ್ ಬಾಬು ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz