nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026
    Facebook Twitter Instagram
    ಟ್ರೆಂಡಿಂಗ್
    • ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
    • ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
    • ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
    • ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
    • ಹುಯಿಲ್‌ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
    • ತುಮಕೂರು: ಗಾಜಿನ ಮನೆಯಲ್ಲಿ  ‘ಸಿರಿಧಾನ್ಯ ಖಾದ್ಯಗಳ’ ಘಮಲು!
    • 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್‌ ಗೆ ಪದೋನ್ನತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಂಸಲೇಖ ಅವರಿಂದ ಕ್ಷಮೆ ಕೇಳಿಸಿದ ಜಾತಿಗ್ರಸ್ತರೇ ನೀವು ಇದಕ್ಕೇನು ಹೇಳುವಿರಿ…
    ಲೇಖನ November 16, 2021

    ಹಂಸಲೇಖ ಅವರಿಂದ ಕ್ಷಮೆ ಕೇಳಿಸಿದ ಜಾತಿಗ್ರಸ್ತರೇ ನೀವು ಇದಕ್ಕೇನು ಹೇಳುವಿರಿ…

    By adminNovember 16, 2021No Comments2 Mins Read
    hamsalekha

    ಡಾ.ವಡ್ಡಗೆರೆ ನಾಗರಾಜಯ್ಯ
    8722724174

    ಸಾವಿರಾರು ವರ್ಷಗಳಿಂದ ಅಸ್ಪೃಶ್ಯತೆ ಆಚರಿಸುತ್ತಾ, ಮಹಿಳೆಯರ ವಿರುದ್ಧ ಕ್ರೌರ್ಯ ಎಸಗುತ್ತಾ, ‘ವಸುದೈವ ಕುಟುಂಬಂ’ ‘ಸರ್ವೇಜನ ಸುಖಿನೋ ಭವಂತು’, ‘ಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೇ ದೇವತಾಃ’ ಎಂದು ಬರಿದೇ ಪುಂಖಾನುಪುಂಖವಾಗಿ ಮಾತನಾಡುವ ನೀವು, ಜಾತಿ ಕ್ರೌರ್ಯಕ್ಕೆ ಸಿಲುಕಿ ದಲಿತರ ಹೆಣಗಳು ಉರುಳಿದಾಗ ಅಂತಹ ಅಮಾನವೀಯ ರಾಕ್ಷಸೀ ಕೃತ್ಯ ನಡೆಸಿದವರ ವಿರುದ್ಧ ಒಂದಕ್ಷರವನ್ನೂ ಮಾತಾಡುವುದಿಲ್ಲ.


    Provided by
    Provided by

    ಕೆಳಜಾತಿಗಳಿಗೆ ಕೊಡಲಾಗುತ್ತಿದ್ದ ಮೀಸಲಾತಿ ಸೌಲಭ್ಯದ ವಿರುದ್ಧ ಬೊಬ್ಬಿಡುತ್ತಿದ್ದ ನೀವು, ಆರ್ಥಿಕ ಹಿಂದುಳಿದಿರುವಿಕೆಯ ಕಾರಣವನ್ನು ಮುಂದೊಡ್ಡಿ ಸಂವಿಧಾನದ ಆಶಯದ ವಿರುದ್ಧ ಕೇವಲ 4% ಜನ 10% ಮೀಸಲಾತಿ ಕಬಳಿಸಿರುವ ಸಾಮಾಜಿಕ ಅನ್ಯಾಯದ ವಿರುದ್ಧ ತುಟಿ ಪಿಟಿಕ್ ಎನ್ನುವುದಿಲ್ಲ.

    ಶೂದ್ರ ಗೊಲ್ಲನಾದ ಕೃಷ್ಣನಿಗೆ ಗುಡಿ ಕಟ್ಟಿ ಗರ್ಭಗುಡಿಯಲ್ಲಿ ನೀವು ನಿಂತು ಶೂದ್ರರನ್ನು ಆಚೆಗಿರಿಸಿರುವ ಬಗ್ಗೆಯಾಗಲೀ ಪಂಕ್ತಿಭೇದದ ವಿರುದ್ಧವಾಗಲೀ ಮಾತಾಡಲು ನಿಮಗೆ ಬಾಯಿಲ್ಲ.

    ಮಾಂಸಾಹಾರಿ ಶೂದ್ರರ ಬೆವರ ದುಡಿಮೆಯ ಕಾಣಿಕೆಗಳಿಂದಲೇ ಮಠಮಾನ್ಯ ಗುಡಿಗುಂಡಾರಗಳ ಸಾಮ್ರಾಜ್ಯವನ್ನು ಕಟ್ಟಿಕೊಂಡಿದ್ದೀರಿ. ಮಾಂಸಾಹಾರ ಸಂಸ್ಕೃತಿಯ ಜನರನ್ನು ಹೀನಾಯಿಸಿ ಮಾತಾಡುವ ನೀವು ಮಾಂಸಾಹಾರಿ ಶಿವನನ್ನೇಕೆ ಪೂಜಿಸುವಿರಿ? ಮಾಂಸಾಹಾರಿ ಗೊಲ್ಲರ ಕೃಷ್ಣನನ್ನೇಕೆ ಆರಾಧಿಸುವಿರಿ? ಮಾಂಸಾಹಾರಿ ಕುರುಬ ಜನಾಂಗದಲ್ಲಿ ಹುಟ್ಟಿದ ಸಂತಕವಿ ಕನಕದಾಸರ ಹೆಸರಿನಲ್ಲಿ ಕಿಂಡಿ ಕೊರೆದು ಕಿಂಡಿಕಾಸು ತಟ್ಟೆಕಾಸು ಯಾಕಾಗಿ ಪಡೆಯುವಿರಿ?

    ಬ್ರಾಹ್ಮಣ್ಯದ ಅಮಲನ್ನು ಶೂದ್ರರಿಗೂ ಏರಿಸಿ ಧರ್ಮದ ವ್ಯಸನಿಗಳನ್ನು ಸೃಷ್ಟಿಸಿ ವೈದಿಕಾರ್ಯರ ಕೋಟೆ ಕಾಯಲು ತ್ರಿಶೂಲ ದೀಕ್ಷೆ ಕೊಡುತ್ತಿರುವ ಹೇಯಕೃತ್ಯವು ಅಂಬೇಡ್ಕರ್ ಅವರ ಕಲ್ಪನೆಯ ಜಾತ್ಯತೀತ ನೆಲದಲ್ಲಿ ನಿಮ್ಮಿಂದಾಗಿ ತಾಂಡವವಾಡುತ್ತಿದೆ. ಅತ್ತ ಮುಸ್ಲಿಮರ ವಿರುದ್ಧ ಇತ್ತ ಕ್ರಿಶ್ಚಿಯನ್ನರ ವಿರುದ್ಧ ಶೂದ್ರರನ್ನು ನಿಲ್ಲಿಸಿ ಕೋಮು ಧ್ವೇಷದ ಬಿಸಿ ರಕ್ತವನ್ನು ಕುಡಿಯುತ್ತಿದ್ದೀರಿ. ಸಹಜವಾದ ಮತಾಂತರವನ್ನು ನೋಡಿ ಕೆರಳುವ ನಿಮಗೆ ಇಲ್ಲಿಯ ಅಸ್ಪೃಶ್ಯತೆ, ಸ್ತ್ರೀ ಶೋಷಣೆ, ಅಲೆಮಾರಿಗಳ ಬದುಕಿನ ಗೋಳಿನ ಪಾಡು ಕಾಣಿಸುವುದಿಲ್ಲ ಯಾಕೆ?

    ಮಾಂಸಾಹಾರ ಸಂಸ್ಕೃತಿಯ ಬುಡಕಟ್ಟು ಮತ್ತು ಕೆಳಜಾತಿಗಳ ದ್ರಾವಿಡ ದೇವರುಗಳಾದ ಶಿವ, ಚಾಮುಂಡಿ, ಕೃಷ್ಣ ಮುಂತಾದವರನ್ನು ಆರಾಧಿಸುವುದನ್ನು ನಿಮಗೆ ವರ್ಜಿಸಲು ಸಾಧ್ಯವಿಲ್ಲವೇ? ಮಾಂಸಾಹಾರಿ ದೇವರುಗಳನ್ನು ಮಾತ್ರ ನಿಮಗೆ ಬೇಕಾದ ಗುಡಿಗುಂಡಾರ ಮಠಮಾನ್ಯ ಕಟ್ಟಿಕೊಳ್ಳಲು ಸ್ವೀಕರಿಸಿರುವ ನೀವು ಹಾಗೂ ಮಾಂಸಾಹಾರಿಗಳು ಕೊಡುವ ಕಾಣಿಕೆಗಳನ್ನು ಸ್ವೀಕರಿಸುವ ನೀವು, ಮಾಂಸಾಹಾರಿಗಳನ್ನು ನಿಮ್ಮೊಳಕ್ಕೆ ಸ್ವೀಕರಿಸದಿರುವುದು ಯಾವ ನ್ಯಾಯ? ಮಾಂಸಾಹಾರಿ ದೇವರು ಮತ್ತು ಮಾಂಸಾಹಾರಿಗಳ ದುಡಿಮೆಯನ್ನು ಹಾಗೆ ವರ್ಜಿಸಲು ನಿಮಗೆ ಸಾಧ್ಯವಿಲ್ಲವೆಂದ ಮೇಲೆ ಮಾಂಸಾಹಾರದ ಸಂಗತಿಯನ್ನು ಕುರಿತು ಇದೇ ದೇವರುಗಳ ಅಸಲಿ ವಾರಸುದಾರರು ಮಾತಾಡುವುದರಲ್ಲಾಗಲೀ ಅಥವಾ ನಿಮಗೆ ಒಗ್ಗುವುದಾದರೆ ಮಾಂಸಾಹಾರ ಸೇವಿಸಿರೆಂದು ಕೇಳುವುದರಲ್ಲಾಗಲೀ ತಪ್ಪೇನಿದೆ?

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ

    December 31, 2025

    ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ  14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!

    December 29, 2025

    ಸದ್ದುಗದ್ದಲವಿರದ ಮೌನ ಸಾಧಕ ಕಾಯಕಯೋಗಿ ಎಂ.ಶಿವಕುಮಾರ್:  ಸಸ್ಯ ಸೇವೆಯನ್ನೇ ಶಿವಪೂಜೆ ಎಂದು ಭಾವಿಸಿದ ಪತ್ರಕರ್ತ

    December 13, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ಕೊರಟಗೆರೆ : ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಮುಖ್ಯಮಂತ್ರಿಯಾಗಲಿ ಎಂದು ಹೊಸ ವರ್ಷದ ಮೊದಲ ದಿನವೇ ಕ್ಯಾಮೇನಹಳ್ಳಿ ಆಂಜಿನೇಯ ಸ್ವಾಮಿ…

    ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    January 1, 2026

    ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ

    January 1, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.