nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್

    February 19, 2026

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026
    Facebook Twitter Instagram
    ಟ್ರೆಂಡಿಂಗ್
    • ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಣದ ಕೊರತೆ: ಅಂಗನವಾಡಿ ಮಕ್ಕಳಿಗೆ ಮೊಟ್ಟೆಗಳ ಹಂಚಿಕೆಯಲ್ಲಿ ವ್ಯತ್ಯಯ
    ರಾಜ್ಯ ಸುದ್ದಿ December 12, 2022

    ಹಣದ ಕೊರತೆ: ಅಂಗನವಾಡಿ ಮಕ್ಕಳಿಗೆ ಮೊಟ್ಟೆಗಳ ಹಂಚಿಕೆಯಲ್ಲಿ ವ್ಯತ್ಯಯ

    By adminDecember 12, 2022No Comments2 Mins Read
    motte

    ಈ ವರ್ಷದ ಆಗಸ್ಟ್ ತಿಂಗಳಿಂದ ರಾಜ್ಯಾದ್ಯಂತ ಅನೇಕ ಅಂಗನವಾಡಿ ಕೇಂದ್ರಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಮಕ್ಕಳು ಹಾಗೂ ಗರ್ಭಿಣಿಯರಿಗೆ ‘ತಾಂತ್ರಿಕ’ ಕಾರಣಗಳಿಂದಾಗಿ ಮೊಟ್ಟೆಗಳನ್ನು ಹಂಚಿಕೆ ಮಾಡುವಲ್ಲಿ ತೊಂದರೆ ಅನುಭವಿಸುತ್ತಿವೆ.
    ಮಕ್ಕಳು ಹಾಗೂ ಮಹಿಳೆಯರಲ್ಲಿ ಅಪೌಷ್ಠಿಕತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಅಂಗನವಾಡಿ ಮಕ್ಕಳಿಗೆ ವಾರದಲ್ಲಿ ಮೂರು ಮೊಟ್ಟೆಗಳು ಹಾಗೂ ಗರ್ಭಿಣಿಯರಿಗೆ ವಾರದಲ್ಲಿ ಆರು ಮೊಟ್ಟೆಗಳನ್ನು ಹಂಚಿಕೆ ಮಾಡುತ್ತಿದೆ.

    ಆದರೆ ಹಣಕಾಸು ಇಲಾಖೆಯ ಸಮಗ್ರ ಹಣಕಾಸು ನಿರ್ವಹಣಾ ವ್ಯವಸ್ಥೆ ಖಜಾನೆ-|| ವತಿಯಿಂದ ಹಣ ಬಿಡುಗಡೆಯಲ್ಲಿ ಆಗಿರುವ ತೊಂದರೆಯಿಂದಾಗಿ ಹಲವು ಅಂಗನವಾಡಿ ಕೇಂದ್ರಗಳಲ್ಲಿ ಸಿಬ್ಬಂದಿಗಳೇ ತಮ್ಮ ಸ್ವಂತ ಖರ್ಚಿನಿಂದ ಮೊಟ್ಟೆಗಳ ಬಿಲ್ಲುಗಳನ್ನು ಪಾವತಿಸುತ್ತಿದ್ದಾರೆ, ಹಾಗೂ ಹಣ ಇಲ್ಲದಿರುವವರು ಫಲಾನುಭವಿಗಳಿಗೆ ಮೊಟ್ಟೆಗಳ ಹಂಚಿಕೆಯನ್ನು ನಿಲ್ಲಿಸಿದ್ದಾರೆ.


    Provided by
    Provided by

    ಗದಗ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಕನಿಷ್ಠ ಮೂರು ಅಂಗನವಾಡಿ ಕೇಂದ್ರಗಳಲ್ಲಿ ಹಣಕಾಸಿನ ಕೊರತೆಯಿಂದಾಗಿ ಮಕ್ಕಳಿಗೆ ಮೊಟ್ಟೆಗಳನ್ನು ಕೊಡುವುದು ಸಾಧ್ಯವಾಗುತ್ತಿಲ್ಲವಂತೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತರೆಯರ ಮತ್ತು ಸಹಾಯಕಿಯರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಎಂ. ಜಯಮ್ಮ ಅವರ ಪ್ರಕಾರ ಕರ್ನಾಟಕದಲ್ಲಿರುವ ಸುಮಾರು ೬೪,೦೦೦ಕ್ಕೂ ಹೆಚ್ಚಿನ ಸಂಖ್ಯೆಯ ಅಂಗನವಾಡಿ ಕೇಂದ್ರಗಳ ಪೈಕಿ ಕೇವಲ ೬,೦೦೦ ದಿಂದ ೭,೦೦೦ ಕೇಂದ್ರಗಳಲ್ಲಿ ಮಾತ್ರ ಮಕ್ಕಳಿಗೆ ಮೊಟ್ಟೆಗಳನ್ನು ನೀಡಲಾಗುತ್ತಿದೆಯಂತೆ. ಉಳಿದ ಕೇಂದ್ರಗಳಲ್ಲಿ ಹಣದ ಕೊರತೆಯಿಂದಾಗಿ ಮೊಟ್ಟೆಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲವಂತೆ.
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಅವರು ತಿಳಿಸಿದಂತೆ, ಹೊಸ ಜಿಲ್ಲೆ ವಿಜಯನಗರದಲ್ಲಿ ಮಾತ್ರ ಈ ರೀತಿ ಸಮಸ್ಯೆಯಾಗಿದೆಯಂತೆ. ಒಕ್ಕೂಟದ ಖಜಾಂಚಿ ಎಂ.ಬಿ. ಶಾರದಮ್ಮ ಅವರು, “ಸರ್ಕಾರ ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆಗಳನ್ನು ಸರಬರಾಜು ಮಾಡಲು ಟೆಂಡರ್ ಆಹ್ವಾನಿಸಿತ್ತು. ಆದರೆ ಯಾವುದೋ ತಾಂತ್ರಿಕ ಸಮಸ್ಯೆಯಿಂದಾಗಿ ಆ ಟೆಂಡರ್ ಅನ್ನು ರದ್ದುಪಡಿಸಲಾಯಿತು. ಇದರಿಂದಾಗಿ ಆಗಸ್ಟ್ ೨೦೨೨ರಿಂದ ಗುತ್ತಿಗೆದಾರರು ಮೊಟ್ಟೆಗಳ ಸರಬರಾಜನ್ನು ಸ್ಥಗಿತಗೊಳಿಸಿದ್ದಾರೆ,” ಎಂದು ಮಾಹಿತಿ ನೀಡಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಿಯಾಂಗ ಎಂ. ಅವರು ಈ ಸಂಬಂಧ ಮಾತನಾಡಿ, ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಮೊಟ್ಟೆಗಳ ಸರಬರಾಜಿನ ಸಮಸ್ಯೆಯನ್ನು ಎರಡು ತಿಂಗಳ ಹಿಂದೆಯೇ ಬಗೆಹರಿಸಲಾಗಿತ್ತು. ಆದರೆ ತಾಲ್ಲೂಕು ಮಟ್ಟದಲ್ಲಿ ಅಂಗನವಾಡಿ ಕೇಂದ್ರಗಳ ವಿಭಜನೆಯಾದ ನಂತರ, ಎಲ್ಲಾ ತಾಲ್ಲೂಕುಗಳಿಗೂ ಏಕರೂಪದ ಹಣಕಾಸು ಲಭಿಸುತ್ತಿರುವ (ಅಂಗನವಾಡಿ ಕೇಂದ್ರದಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದರೂ ಸಹ) ಕಾರಣದಿಂದಾಗಿ ದೊಡ್ಡ ತಾಲ್ಲೂಕುಗಳು ಸಮಸ್ಯೆಯನ್ನು ಎದುರಿಸುತ್ತಿವೆ ಎಂದರು

    “ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತರಿಗೆ, ಹೊಸ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮಕ್ಕಳಿಗೆ ಮೊಟ್ಟೆಗಳನ್ನು ಒದಗಿಸಿ, ಬಿಲ್ಲುಗಳನ್ನು ಸಲ್ಲಿಸುವಂತೆ ಸೂಚಿಸಿದ್ದೇವೆ. ಇತರೆ ಶೀರ್ಷಿಕೆಗಳ ಅಡಿ ಲಭ್ಯವಿರುವ ನಿಧಿಯನ್ನು ಉಪಯೋಗಿಸಿಕೊಂಡು ಈ ಬಿಲ್ಲುಗಳನ್ನು ಪಾವತಿಸುವಂತೆ ಮಕ್ಕಳ ಅಭಿವೃದ್ಧಿ ಯೊಜನಾ ಅಧಿಕಾರಿಗಳಿಗೆ ಸೂಚಿಸಲಾಗಿದೆ,” ಎಂದು ಅರುಂಧತಿ ಮಾಹಿತಿ ನೀಡಿದ್ದಾರೆ.

    ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್


     

    admin
    • Website

    Related Posts

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್

    February 19, 2026

    ಗುಬ್ಬಿ: ನಾನು ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ ಎಂದು ಕೆಎಸ್ ಆರ್‌ ಟಿಸಿ ನಿಗಮ ಮಂಡಳಿ…

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.