ತುಮಕೂರು;ಕ್ಷುಲ್ಲಕ ಕಾರಣಕ್ಕೆ ಕಾರು ಅಡ್ಡಗಟ್ಟಿ ವ್ಯಕ್ತಿಗೆ ಬೈಕ್ ಸವಾರರಿಬ್ಬರು ಚಾಕುವಿನಿಂದ ಇರಿದಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಬೈರೇನಹಳ್ಳಿಯಲ್ಲಿ ನಡೆದಿದೆ.
ನೆನ್ನೆ ಸಂಜೆ ಈ ಘಟನೆ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ಹೇಮಂತ್ ಎಂಬುವವರೇ ಚಾಕು ಇರಿತಕ್ಕೊಳಗಾಗಿರುವವರು. ಬೆಂಗಳೂರು ಮೂಲದ ಯುವಕ ಹೇಮಂತ್ ಕಾರಿನಲ್ಲಿ ತೆರಳುಯತ್ತಿದ್ದ ವೇಳೆ ಹಾರನ್ ಮಾಡಿದ್ದಾರೆ.
ಹಾರನ್ ಮಾಡಿದ್ದಕ್ಕೆ ಸಿಟ್ಟಿಗೆದ್ದ ಬೈಕ್ ಸವಾರರಿಬ್ಬರು ಏಕಾಏಕಿ ಕಾರು ಅಡ್ಡಗಟ್ಟಿ ಹೇಮಂತ್ ಗೆ 4 ರಿಂದ 5 ಬಾರಿ ಚಾಕುವಿನಿಂದ ಇರಿದಿದ್ದು ಯುವಕ ಹೇಮಂತ್ ಸ್ಥಿತಿ ಗಂಭೀರವಾಗಿದೆ. ಹೇಮಂತ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಕೊರಟಗೆರೆ ಠಾಣಾ ಪೊಲೀಸರು ಬಲೆ ಬೀಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy