nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025
    Facebook Twitter Instagram
    ಟ್ರೆಂಡಿಂಗ್
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    • ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾರ್ದಿಕ್‌ ಪಾಂಡ್ಯ ವಿಶ್ವಕಪ್‌ ನಲ್ಲಿ ವಿಶೇಷ ಪ್ರದರ್ಶನ ನೀಡಲಿದ್ದಾರೆ: ಯುವರಾಜ್‌ ಸಿಂಗ್‌
    ರಾಷ್ಟ್ರೀಯ ಸುದ್ದಿ May 24, 2024

    ಹಾರ್ದಿಕ್‌ ಪಾಂಡ್ಯ ವಿಶ್ವಕಪ್‌ ನಲ್ಲಿ ವಿಶೇಷ ಪ್ರದರ್ಶನ ನೀಡಲಿದ್ದಾರೆ: ಯುವರಾಜ್‌ ಸಿಂಗ್‌

    By adminMay 24, 2024No Comments2 Mins Read
    yuvaraj singh pandya

    ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಐದು ಬಾರಿಯ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿ ವೈಫಲ್ಯ ಕಂಡ ಸ್ಟಾರ್‌ ಆಲ್‌ ರೌಂಡರ್‌ ಹಾರ್ದಿಕ್‌ ಪಾಂಡ್ಯ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

    ಆದರೆ, ಬರೋಡಾ ಆಲ್‌ ರೌಂಡರ್‌ ಮುಂದಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾಗೆ ವಿಶ್ವಕಪ್‌ ಗೆದ್ದುಕೊಡಬಲ್ಲ ವಿಶೇಷ ಆಟವನ್ನು ಆಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಮಾಜಿ ಆಲ್‌ ರೌಂಡರ್‌ ಯುವರಾಜ್‌ ಸಿಂಗ್‌ ವಿಶ್ವಾಸ ಹೊರಹಾಕಿದ್ದಾರೆ.


    Provided by
    Provided by

    ಐಪಿಎಲ್‌ 2024 ಟೂರ್ನಿಯಲ್ಲಿ ಕೇವಲ ಕ್ಯಾಪ್ಟನ್ಸಿಯಲ್ಲಿ ಮಾತ್ರವಲ್ಲ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ನಲ್ಲಿಯೂ ಹಾರ್ದಿಕ್‌ ಪಾಂಡ್ಯ ನೀರಸ ಪ್ರದರ್ಶನ ನೀಡಿದ್ದಾರೆ. ಕಳಪೆ ಪ್ರದರ್ಶನದ ಹೊರತಾಗಿಯೂ ಟೀಮ್ ಇಂಡಿಯಾ ಸೆಲೆಕ್ಟರ್ಸ್‌ ಭಾರತದ ಟಿ20 ವಿಶ್ವಕಪ್‌ ತಂಡ ರಚಿಸುವಾಗ 15 ಆಟಗಾರರ ಬಳಗದಲ್ಲಿ ಹಾರ್ದಿಕ್‌ ಗೆ ಸ್ಥಾನ ನೀಡಿದ್ದಾರಲ್ಲದೆ ವೈಸ್‌ ಕ್ಯಾಪ್ಟನ್ ಪಟ್ಟವನ್ನೂ ನೀಡಿದ್ದಾರೆ.

    ಮುಂಬೈ ಇಂಡಿಯನ್ಸ್‌ ಈ ಬಾರಿ ಅಂಕಪಟ್ಟಿಯ ಕೊನೇ ಸ್ಥಾನದಲ್ಲಿ ತನ್ನ ಅಭಿಯಾನ ಅಂತ್ಯಗೊಳಿಸಿತು. ಹಾರ್ದಿಕ್‌ ಪಾಂಡ್ಯ ಆಡಿದ 14 ಪಂದ್ಯಗಳಲ್ಲಿ ಗಳಿಸಿದ್ದು ಕೇವಲ 216 ರನ್‌ಗಳನ್ನು ಮಾತ್ರ. ಬೌಲಿಂಗ್‌ ನಲ್ಲಿ 14 ವಿಕೆಟ್‌ ಗಳನ್ನು ಪಡೆಯಲಷ್ಟೇ ಶಕ್ತರಾದರು. 2023ರ ಸಾಲಿನ ಐಸಿಸಿ ಒಡಿಐ ವಿಶ್ವಕಪ್ ಟೂರ್ನಿಯಲ್ಲಿ ಗಾಯದ ಸಮಸ್ಯೆ ಎದುರಿಸಿ 6 ತಿಂಗಳ ವಿಶ್ರಾಂತಿ ಪಡೆದಿದ್ದ ಪಾಂಡ್ಯ, ಬಳಿಕ ಐಪಿಎಲ್‌ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‌ ಗೆ ಕಮ್‌ ಬ್ಯಾಕ್‌ ಮಾಡಿದರು.

    ಆದರೆ ಶ್ರೇಷ್ಠ ಲಯ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. “ಸದ್ಯಕ್ಕೆ ಅವರನ್ನು ಟೀಮ್ ಇಂಡಿಯಾ ಸೇವೆಗೆ ಆಯ್ಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಟಗಾರರು ನೀಡಿರುವ ಪ್ರದರ್ಶನದ ಬಗ್ಗೆಯೂ ಸೆಲೆಕ್ಟರ್ಸ್‌ ಗೌರವಿಸಿದ್ದಾರೆ. ಕೇವಲ ಐಪಿಎಲ್ ಲಯವೊಂದರ ಆಧಾರದ ಮೇಲೆ ಆಟಗಾರನ ಆಯ್ಕೆ ಮಾಡಲಾಗುವುದಿಲ್ಲ. ಐಪಿಎಲ್‌ನಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲ ಎಂದು ಹಾರ್ದಿಕ್ ಪಾಂಡ್ಯ ಅವರನ್ನು ಕಡೆಗಣಿಸಲಾಗದು. ಟೀಮ್ ಇಂಡಿಯಾ ಪರ ಅವರು ಈವರೆಗೆ ನೀಡಿರುವ ಪ್ರದರ್ಶನಗಳನ್ನು ಗಮನಿಸಿದರೆ ಅವರ ಸೇವೆ ತಂಡಕ್ಕೆ ಅತ್ಯಗತ್ಯ. ಅವರ ಬೌಲಿಂಗ್ ಸಾಮರ್ಥ್ಯ ಮತ್ತು ಫಿಟ್ನೆಸ್‌ ಇಲ್ಲಿ ಮುಖ್ಯವಾಗುತ್ತದೆ. ಖಂಡಿತಾ ಮುಂವರುವ ವಿಶ್ವಕಪ್‌ನಲ್ಲಿ ಅವರು ವಿಶೇಷ ಪ್ರದರ್ಶನ ನೀಡಲಿದ್ದಾರೆ,” ಎಂದು ಯುವರಾಜ್‌ ಸಿಂಗ್‌ ವಿಶ್ವಾಸ ಹೊರಹಾಕಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊರಟಗೆರೆ: ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ  ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಬ್ರಹ್ಮ ರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಲಕ್ಷದೀಪೋತ್ಸವ…

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.