nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ

    January 18, 2026

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!

    January 18, 2026
    Facebook Twitter Instagram
    ಟ್ರೆಂಡಿಂಗ್
    • ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ
    • ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ
    • ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!
    • ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    • ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ
    • ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
    • ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮಾಜಿಕ ನ್ಯಾಯದ ಹರಿಕಾರದೇವರಾಜ ಅರಸು: ಪ್ರೊ.ಎಂ.ಗುರುಲಿಂಗಯ್ಯ
    ರಾಜ್ಯ ಸುದ್ದಿ August 21, 2024

    ಸಾಮಾಜಿಕ ನ್ಯಾಯದ ಹರಿಕಾರದೇವರಾಜ ಅರಸು: ಪ್ರೊ.ಎಂ.ಗುರುಲಿಂಗಯ್ಯ

    By adminAugust 21, 2024No Comments2 Mins Read
    M Gurulingaiah

    ತುಮಕೂರು: ನಾಡಿನ ಸಾಮಾಜಿಕನ್ಯಾಯದ ಹರಿಕಾರರಾಗಿ, ದೀನ ದುರ್ಬಲರಆಶಾಕಿರಣವಾಗಿ, ಜೀತ ಹಾಗೂ ಮಲ ಹೊರುವ ಪದ್ಧತಿಯನ್ನು ನಿರ್ಮೂಲನೆ ಮಾಡಿದ ಧೀಮಂತ ನಾಯಕ ದೇವರಾಜ ಅರಸು ಚಿರಸ್ಮರಣೀಯ ಎಂದು ಕುವೆಂಪು ವಿವಿಯ ಕಲಾ ನಿಕಾಯದ ಡೀನ್ ಪ್ರೊ. ಎಂ.ಗುರುಲಿಂಗಯ್ಯ ಹೇಳಿದರು.

    ತುಮಕೂರು ವಿಶ್ವವಿದ್ಯಾನಿಲಯದ ಡಿ.ದೇವರಾಜ ಅರಸುಅಧ್ಯಯನ ಪೀಠ ಮತ್ತು ಹಿಂದುಳಿದ ವರ್ಗಗಳ ಕೋಶವು ಮಂಗಳವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 109ನೇ ಜಯಂತಿಯಲ್ಲಿ‘ಪ್ರಸಕ್ತ ಸನ್ನಿವೇಶದಲ್ಲಿ ಡಿ.ದೇವರಾಜ ಅರಸು ಅವರ ಸಾಮಾಜಿಕ ನ್ಯಾಯ ಪರಿಕಲ್ಪನೆಯ ಪ್ರಸ್ತುತತೆ’ ಕುರಿತು ಮಾತನಾಡಿದರು.


    Provided by
    Provided by

    12ನೆಯ ಶತಮಾನದ ಸಾಮಾಜಿಕ ನ್ಯಾಯದ ಪರಿಪಾಲಕ ಬಸವಣ್ಣನವರ ಆದರ್ಶವನ್ನು ಪ್ರತಿಪಾದಿಸಿದ ನಾಯಕ ದೇವರಾಜ ಅರಸು ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಸಮಾಜಕ್ಕೆ ತಲುಪಿಸಿ ಸಮ ಸಮಾಜವನ್ನುರೂಪಿಸುವ, ಸಮಾಜಕ್ಕಾಗಿ ದುಡಿದು ಬದುಕುವ ವಿಕಾಸ ಮನಸ್ಥಿತಿಯಿದ್ದವರು ಎಂದರು.

    ಸಾಮಾಜಿಕ ನ್ಯಾಯವು ಸಂವಿಧಾನಕ್ಕೆ ಕಿರೀಟವಿದ್ದಂತೆ. ಉಳ್ಳವರು ಮತ್ತುಇರದವರ ನಡುವಿನ ವ್ಯತ್ಯಾಸವನ್ನು ಸಮಾನತೆಯ ಧ್ಯೇಯದೊಂದಿಗೆ, ಮೇಲ್ವರ್ಗದವರ ಶೋಷಣೆಯಿಂದ ತುಳಿತಕ್ಕೊಳಗಾದವರ ಧ್ವನಿಯಾಗಿ ಅರಸು ಹಿಂದುಳಿದ ಸಮುದಾಯಗಳ ನಾಯಕರಾಗಿ ಸದಾ ಮೇಲ್ಪಂಕ್ತಿಯಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.

    ಮಿಲ್ಲರ್ ಸಮಿತಿಯವರದಿ ಪ್ರಕಾರ1921ರಲ್ಲಿ ಸಾಮಾಜಿಕ ನ್ಯಾಯದ ಕಾನೂನನ್ನು ದೇಶದಲ್ಲಿ ಅನುಷ್ಠಾನಗೊಳಿಸಲಾಯಿತು. ಎಲ್.ಜಿ.ಹಾವನೂರ್ ಅವರ ಸಮಿತಿಯ ವರದಿಯ ಪ್ರಕಾರ ಕರ್ನಾಟಕದಲ್ಲಿ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ1977ರಲ್ಲಿ ಸಾಮಾಜಿಕ ನ್ಯಾಯದ ಕಾನೂನನ್ನು ಬಲಿಷ್ಠವಾಗಿ ಅನುಷ್ಠಾನಗೊಳಿಸಿದರು. ತಬ್ಬಲಿಗಳ, ಅಲೆಮಾರಿಗಳ, ರೈತರ ಧ್ವನಿಯಾದರು ಎಂದು ತಿಳಿಸಿದರು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಸಮಾಜದ ಏಳ್ಗೆಗಾಗಿ ಬದುಕಿದ ಅರಸು ಅವರ ನಾಯಕತ್ವ, ಗ್ರಾಮೋದ್ಧಾರದ ದೃಷ್ಟಿಕೋನ, ಸಮಾನತೆ, ಶಿಕ್ಷಣ, ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ, ಅಭಿವೃದ್ಧಿಯ ವಿಭಿನ್ನ ವಿಚಾರಧಾರೆಗಳು ವಿಕಾಸ ಪಥದ ಹೆಜ್ಜೆಯಾಗಿ ದೇಶಕ್ಕೆ ಮಾದರಿಯಾಗಿವೆ ಎಂದರು.

    ವಿವಿಯ ಡಿ.ದೇವರಾಜ ಅರಸು ಅಧ್ಯಯನ ಪೀಠದ ಸಂಯೋಜಕ ಡಾ.ಗುಂಡೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಹಿಂದುಳಿದ ವರ್ಗಗಳ ಕೋಶದ ನಿರ್ದೇಶಕ ಪ್ರೊ.ಪರಶುರಾಮ ಕೆ.ಜಿ. ವಂದಿಸಿದರು. ಕುಲಸಚಿವೆ ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ಕೆ. ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಜರುಗಲಿರುವ 33ನೇ ವರ್ಷದ ಹೊನಲು ಬೆಳಕಿನ…

    ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ

    January 18, 2026

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!

    January 18, 2026

    ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ

    January 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.