ಶಿವಮೊಗ್ಗ: ಕೋಟೆ ಪ್ರಖಂಡದ ಬಜರಂಗದಳ ಸಹಸಂಯೋಜಕ ಹರ್ಷ ಕಗ್ಗೊಲೆ ಖಂಡಿಸಿ ಬಜರಂಗದಳ ತಾಲೂಕು ಪ್ರಖಂಡದಿಂದ ಶನಿಮಹಾತ್ಮ ವೃತದಿಂದ ತಾಲೂಕು ಕಚೇರಿಯ ವರೆಗೆ ತೆರಳಿ ಪ್ರತಿಭಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ ಸುಮನ್ ಮಾತನಾಡಿ, ಹರ್ಷ ಕೊಲೆಯ ಹಿಂದೆ SDPI , PFI, CFI ಸಂಘಟನೆಗಳ ಕೈವಾಡವಿದೆ ಎಂದು ಆರೋಪಿಸಿದರು.
ಆರೋಪಿಗಳನ್ನು ಗಲ್ಲಿಗೇರಿಸಬೇಕು ಹರ್ಷರವರ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಇದೇ ವೇಳೆ ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶ್ರೀರಾಮ ಸೇನೆ ರಾಮಾಂಜಿ, ಅಲಕುಂದ್ರಾಜ್, ಬಜರಂಗದಳ ಪದಾಧಿಕಾರಿಗಳಾದ ರಾಕೇಶ್ , ವಾಸು, ಕಾರ್ತಿಕ್, ವಿನೋದ್ , ಶ್ರೀನಾಥ್ , ನಾಗೇಶ್ ಇದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB