nammatumakuru

    Subscribe to Updates

    Get the latest creative news from FooBar about art, design and business.

    What's Hot

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026
    Facebook Twitter Instagram
    ಟ್ರೆಂಡಿಂಗ್
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ”: ಹಾಶಿಂ ಬನ್ನೂರು ಅವರ ಅಂಕಣ ಬರಹ
    ಲೇಖನ June 17, 2024

    “ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ”: ಹಾಶಿಂ ಬನ್ನೂರು ಅವರ ಅಂಕಣ ಬರಹ

    By adminJune 17, 2024No Comments2 Mins Read
    Hashim Bannur

    ಮುಸ್ಲಿಮರು ಆಚರಿಸುವ ಹಬ್ಬಗಳ ಪೈಕಿ ಈದುಲ್ ಅಝ್ಹಾ ಹಬ್ಬವು ಒಂದು. ಇದು ಬಹಳ ವಿಶೇಷತೆಯನ್ನು ಹೊಂದಿದೆ. ಜಾಗತಿಕ ವಲಯದಲ್ಲಿ ಸರ್ವ ಮುಸಲ್ಮಾನರು ಎಲ್ಲಾ ಹಬ್ಬಗಳ ಹಾಗೆ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ.

    ಇದು ತ್ಯಾಗ ಮತ್ತು ಬಲಿದಾನ ಸಾವಿರಾರು ಹಿಂದಿನ ಐತಿಹಾಸಿಕ ಚಾರಿತ್ರಿಕ ಘಟನೆಯನ್ನು ಸ್ಮರಿಸುವ ಹಬ್ಬ. ಈ ಕುರಿತಾದ ಚರಿತ್ರೆಗಳು ಮತ್ತು ನೈಜ ಘಟನೆಗಳು ಖುರ್ ಆನ್ ಹಾಗೂ ಇಸ್ಲಾಮಿನ ಧಾರ್ಮಿಕ ಗ್ರಂಥದಲ್ಲಿ ಪುರಾವೆ ಸಮೇತ ಉಲ್ಲೇಖವಿದೆ.

    ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಅರೇಬಿಕ್ ತಿಂಗಳ ಕೊನೆಯ ತಿಂಗಳ ಝುಲ್ ಹಿಜ್ಜ ಬಹಳ ಪವಿತ್ರ ತಿಂಗಳು. ಆರೋಗ್ಯ, ಸಂಪತ್ತು,  ಸೌಕರ್ಯ ಹೊಂದಿ  ಜವಾಬ್ದಾರಿ ಮುಕ್ತನಾಗಿರುವ ಮುಸ್ಲಿಂ ವ್ಯಕ್ತಿಯ ಮೇಲೆ ಇಸ್ಲಾಮಿನ ಐದು ಪಂಚ ಕರ್ಮಗಳಲ್ಲಿ ಒಂದಾದ ಹಜ್ ಕಡ್ಡಾಯವಾಗಿದೆ. ಅದರ ನಿರ್ವಹಣೆಗಿರುವ ಸಮಯ ಮತ್ತು ತಿಂಗಳು ಇದೇ ಝುಲ್ ಹಜ್  ಆಗಿರುತ್ತದೆ.

    ಆಧ್ಯಾತ್ಮಿಕ ಶುದ್ಧೀಕರಣದೊಂದಿಗೆ ಮಕ್ಕಾದಲ್ಲಿರುವ ಪವಿತ್ರ್ ಭವನ ಕಅಬಾ ಗೆ ತೆರಳಿ ಕಅಬಾ ಭವನಕ್ಕೆ ಪ್ರದಕ್ಷಿಣೆ, ಸಫಾ ಮರ್ವಾ ಬೆಟ್ಟಗಳ ಮಧ್ಯೆ ನಡೆಯೂದು, ಮಿನಾದಲ್ಲಿ ತಂಗೂದು, ಅರಫಾ ಮೈದಾನಕ್ಕೆ ತೆರಳೂದು, ಮುಝ್ದಲಿಫಾದಲ್ಲಿ ತಂಗೂದು, ಜಮ್ರಾದಲ್ಲಿ ಕಲ್ಲೆಸೆಯೂದು, ಮತ್ತೆ ಮಿನಾದಲ್ಲಿ ತಂಗಿ ಬಲಿ ನೀಡೂದು ಈ ರೀತಿ ಕೆಲವೊಂದು ಕರ್ಮಗಳನ್ನು ಒಳಗೊಂಡ ಮಕ್ಕಾ ಪುಣ್ಯ ಯಾತ್ರೆಗೆ ಹಜ್ ಎಂದು ಕರೆಯುತ್ತೇವೆ. ಹಜ್ ನಂತೆಯೇ ಉಮ್ರಾ ಕೂಡ ಇದೇ ಕರ್ಮಗಳನ್ನು ಒಳಗೊಂಡಿವೆ. ಆದರೆ ಹಜ್ ವರ್ಷಕ್ಕೆ ಒಂದು ಬಾರಿ ಝುಲ್ ಹಿಜ್ಜ ತಿಂಗಳಲ್ಲಿ ಮಾತ್ರ. ಉಮ್ರಾ ವರ್ಷದ ಎಲ್ಲಾ ದಿನವು ಮಾಡಬಹುದಾಗಿದೆ.

    ಇಸ್ಲಾಂ ದರ್ಮದ ಪ್ರಚಾರಕರಾಗಿ ಆಯುಕ್ತರಾಗಿದ್ದ ಒಂದು ಲಕ್ಷಂಕ್ಕಿಂತಲೂ ಅಧಿಕ ಪ್ರವಾದಿಗಳ ಪೈಕಿ ಅಲ್ಲಾಹನ ಇಷ್ಟ ದಾಸರಾಗಿ ವಿಶೇಷ ಸ್ಥಾನಮಾನ ಪಡೆದ ಮಹಾನರಾಗಿದ್ದರು ಹಜ್ರತ್ ಇಬ್ರಾಹಿಮ್ ಅಲೈಹಿಸ್ಸಲಾಮ್, ಅವರು ಪ್ರವಾದಿಯಾದ ಬಳಿಕ, ಧರ್ಮ ಪ್ರಚಾರಕ್ಕಿಳಿಯುತ್ತಾರೆ. ಈ ವೇಳೆ ದೇವರು ಇಬ್ರಾಹಿಮ್ ,ಅ ರವರನ್ನು ಹಲವಾರು ಪರೀಕ್ಷೆಗಳಿಗೆ ಒಳಪಡಿಸುತ್ತಾನೆ . ಏಕದೇವ ವಿಶ್ವಾಸದ ಅನುಷ್ಠಾನಕ್ಕಾಗಿ ಸ್ವಂತ ಹೆತ್ತವರು, ಕುಟುಂಬ, ಮನೆ, ಆಸ್ತಿ, ಊರು ಎಲ್ಲವನ್ನೂ ತ್ಯಾಗ ಮಾಡಿ ದೇಶಾಂತರ ಹೊರಟು, ಸಂತಾನ ಭಾಗ್ಯ ಇಲ್ಲದೆ ಕೊರಗುತ್ತಿದ ಪ್ರವಾದಿ ಇಬ್ರಾಹಿಂ ಮತ್ತು ಹಾಜರ ಬೀವಿ ಅವರಿಗೆ ಪವಾಡದಂತೆ ವೃದ್ಧಾಪ್ಯದಲ್ಲಿ ಲಭಿಸಿದ ಗಂಡು ಮಗು ಇಸ್ಮಾಯಿಲ್ ಸ್ವಂತ ಮಗನನ್ನೂ ದೇವರ ಆದೇಶದಂತೆ  ಬಲಿ ಕೊಡಲು ಮುಂದಾಗುತ್ತಾರೆ. ನಿರ್ಜಲ,ನಿರ್ಜನ ಮರುಭೂಮಿಯಲ್ಲಿ ಪುಟ್ಟ ಮಗುವನ್ನು ಮಡದಿಯನ್ನು ಏಕಾಂಗಿಯಾಗಿ ಬಿಟ್ಟು ಬಿಡುತ್ತಾರೆ. ಅಲ್ಲಾಹನ ಎಲ್ಲಾ ಆಜ್ಞೆಗಳನ್ನು ಈಡೇರಿಸಿ ಪರೀಕ್ಷೆಗಳನ್ನು ಎದುರಿಸಿ ದೇವ ಪ್ರೀತಿಗೆ ಪಾತ್ರರಾಗಿ ಪ್ರವಾದಿ ಇಬ್ರಾಹಿಂ ಮತ್ತು ಮಡದಿ ಹಾಜರ ಮಗ ಇಸ್ಮಾಯಿಲ್ ತ್ಯಾಗ ಮತ್ತು ಅಛ್ಛಲ ವಿಶ್ವಾಸ ಸ್ನೇಹ ನಂಬಿಕೆಯ ಬದುಕನ್ನು ರೂಪಿಸಿಕೊಳ್ಳುತ್ತಾರೆ. ಪ್ರವಾದಿ ಇಬ್ರಾಹಿಂ ಅವರ ನಂತರ ತನ್ನ ಮಗ ಇಸ್ಮಾಯಿಲ್ ಪ್ರವಾದಿ ಪಟ್ಟವನ್ನು ಸ್ವೀಕರಿಸುತ್ತಾರೆ. ಹಝ್ರತ್ ಇಬ್ರಾಹಿಂ ಅವರಿಗೆ ಖಲೀಲುಲ್ಲಾಹ್ ಅಲ್ಲಾಹನ ಸ್ನೇಹಿತ ಎಂಬ ಗೌರವ ಪದವಿಯನ್ನು ನೀಡಿ ಗೌರವಿಸುತ್ತಾನೆ. ಪ್ರವಾದಿ ಇಬ್ರಾಹಿಂ   ರವರ ಜೀವನ ಬದುಕು ಇತಿಹಾಸವನ್ನು ನೆನಪಿಸುವುದೇ ಹಜ್ ಬಕ್ರೀದ್‌ ಆಚರಣೆಯ ಉದ್ದೇಶ.

    ಈದುಲ್ ಅಝ್ಹಾ ಝುಬಾ ಮಾಡುವ ಹಬ್ಬ, ಕುರಿ ಮೇಕೆ ದೇವರ ಹೆಸರಿನಲ್ಲಿ ಬಲಿ ಕೊಡೂದು ಈ ಹಬ್ಬದ ವಿಶೇಷ. ಹಬ್ಬದ ನಂತರ ಮೂರು ದಿನಗಳ ಕಾಲ ಬಲಿ ನೀಡಲು ಸಮಯಾವಾಕಾಶ ಇರುತ್ತದೆ. ಈದ್ ದಿನದಂದು ಹೊಸ ಉಡುಪುಗಳನ್ನು ಧರಿಸೂದು, ಸುಗಂಧ ಹಚ್ಚೂದು, ಈದ್ಗಾ ಮಸೀದಿಗೆ ತೆರಳಿ ನಮಾಝ್, ಪ್ರವಚನ, ಪ್ರಾರ್ಥನೆಯಲ್ಲಿ ಪಾಲ್ಗೊಳ್ಳೂದು ಬಡವರಿಗೆ ಧಾನ ನೀಡೂದು ಮನೆಯಲ್ಲಿ ಸಿಹಿ ತಿಂಡಿ ಮಾಡೂದು ಸ್ನೇಹಿತರ ಕುಟುಂಬಸ್ಥರ ಮನೆಗೆ ತೆರಳಿ ಈದ್ ಸಂದೇಶ ಸಾರೂದು ಕುರಿ ಅಥವಾ ಮೇಕೆ ದೇವರ ಹೆಸರಿನಲ್ಲಿ ಬಲಿ ಕೊಟ್ಟರೆ ಅದನ್ನು ಬಡವರಿಗೆ ನೆರೆಕರೆಯವರಿಗೆ ಹಂಚೂದು ಇವೆಲ್ಲವೂ ಈದ್ ದಿನದ ವಿಶೇಷ ಕಾರ್ಯಗಳಾಗಿವೆ. ಪರಸ್ಪರ ಶಾಂತಿ ಸೌಹಾರ್ದತೆ ಪ್ರೀತಿ ಸ್ನೇಹ ಹಂಚುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಹಾತ್ಮರು ನಡೆದ ಹಾದಿಯಲ್ಲಿ ಸಾಗಿ ದೇವ ಪ್ರೀತಿಗೆ ಪಾತ್ರರಾಗೂದೇ ಹಬ್ಬದ ಮುಖ್ಯ ಉದ್ದೇಶ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2…

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.