ಸರಗೂರು: ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದ ಬಳಿ ಇರುವ ಹಾಲುಗಡಿ ಕಬಿನಿ ಹೊಳೆ ಕಾವಲಿಯಲ್ಲಿ ಹಸುವಿಗೆ ನೀರು ಕುಡಿಸಲು ತೆರಳಿದ್ದ ಯುವಕ ಕಾಲು ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ನಡೆದಿದೆ.
ತಾಲ್ಲೂಕಿನ ಲಂಕೆ ಗ್ರಾಮದ 23 ವರ್ಷದ ಯುವಕ ಮನು ಮೃತ ಯುವಕನಾಗಿದ್ದು, ಈತ ತನ್ನ ಜಮೀನು ಬಳಿ ಇರುವ ಕಬಿನಿ ಹೊಳೆಯಲ್ಲಿ ಹುಸುವಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ ಎನ್ನಲಾಗಿದೆ.
ನಂತರ ತಾಲ್ಲೂಕಿನ ಜೆಡಿಎಸ್ ಯುವ ಮುಖಂಡ ಜಯಪ್ರಕಾಶ್ ಅವರು ಘಟನೆಯ ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಅಗ್ನಿಶಾಮಕ ದಳದ ಸಿಬ್ಬಂದಿ ಕರೆ ಮಾಡಿ, ಪಿಎಸ್ಐ ಶ್ರಾಮಣದಾಸ ರೆಡ್ಡಿ ಅವರಿಗೂ ವಿಷಯ ಮುಟ್ಟಿಸಿದ್ದು, ಸದ್ಯ ಯುವಕ ಮೃತದೇಹ ಹೊರ ತೆಗೆಯಲಾಗಿದೆ.
ಹಸುಗಳಿಗೆ ನೀರು ಕುಡಿಸಿ ಬರುತ್ತೇನೆ ಎಂದು ಹೋಗಿದ್ದ ಯುವಕ ಬಹಳಷ್ಟು ಹೊತ್ತಾದರೂ ಮರಳಿ ಬಂದಿರಲಿಲ್ಲ. ಇದರಿಂದಾ ಆತಂಕಗೊಂಡ ಪೋಷಕರು ಸಾಕಷ್ಟು ಹುಡುಕಾಟ ನಡೆಸಿದ್ದರೂ ಮನುವಿನ ಪತ್ತೆಯಾಗಿರಲಿಲ್ಲ. ಘಟನೆ ಸಂಬಂಧ ಸರಗೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5