ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಡಾ.ಕೆ.ಸುಧಾಕರ್ ಗೆ ನೀಡಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ’ ಎಂದು ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್,ಬಿಜೆಪಿ ಆತ್ಮವಲೋಕನಸಭೆಯಲ್ಲಿ ಸುಧಾಕರ್ ವಿರುದ್ಧ ಆರೋಪ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಉಸ್ತುವಾರಿ ಸ್ಥಾನದ ಜವಾಬ್ದಾರಿಯನ್ನು ಡಾ.ಕೆ.ಸುಧಾಕರ್ ಸಮರ್ಥವಾಗಿ ನಿಭಾಯಿಸಲಿಲ್ಲ. ನನ್ನ,ಚಿಂತಾಮಣಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಅವರೇ ಕಾರಣ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಆದರೆ ಕಾಂಗ್ರೆಸ್ ನಲ್ಲಿರುವಾಗ ಮೂರು ಬಾರಿ ಗೆದ್ದಿದ್ದ ನಾನು ಬಿಜೆಪಿ ಸೇರಿದ ನಂತರ ಎರಡು ಬಾರಿಯೂ ಸೋಲನ್ನು ಅನುಭವಿಸಿದೆ’ ಎಂದು ಅಳಲು ತೋಡಿಕೊಂಡರು ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್ ನ ಶೇ.40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಪ್ರತಿಯಾಗಿ ಬಿಜೆಪಿ ಏನೂ ಮಾಡಲಿಲ್ಲ.ನಾವು ಕೇವಲ ಸಿದ್ದರಾಮಯ್ಯರಿಗೆ ಮಾತ್ರ ಬೈದೆವು. ವಿಧಾನಸಭೆ ಚುನಾವಣೆ ವೇಳೆ ಬಿಪಿಎಲ್ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಣೆ ಕಡಿಮೆ ಮಾಡಿದ್ದು ಸೋಲಿಗೆ ಪ್ರಮುಖ ಕಾರಣ. ಆದರೆ, ಇದೇ ವೇಳೆ ಕಾಂಗ್ರೆಸ್ ಪಕ್ಷದ 10 ಕೆಜಿ ಅಕ್ಕಿ ಗ್ಯಾರಂಟಿಯೂ ನಮ್ಮಸೋಲಿಗೆ ಕಾರಣವಾಯಿತು’ ಎಂದು ಅವರುತಿಳಿಸಿದರು ಎಂದು ಹೇಳಲಾಗಿದೆ.
ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ, ಕಾರ್ಯಕರ್ತರ ಆಗು-ಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲೇ ಇಲ್ಲ. ಇದರಿಂದ ಕಾರ್ಯಕರ್ತರು ಸಿಟ್ಟಾಗಿದ್ದರು.ಡಾ.ಸುಧಾಕರಿಂದಾಗಿಯೇ ನಾನು ಸೋತಿದ್ದು ನಾನು ಹಣ, ಅಧಿಕಾರದ ಆಸೆಗಾಗಿ ಬಿಜೆಪಿಗೆ ಬಂದವನಲ್ಲ’ ಎಂದು ಎಂಟಿಬಿ ನಾಗರಾಜ್ ಮುಖಂಡರ ಮುಂದೆಯೆ ತಿಳಿಸಿದ್ದಾರೆಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


