ಬೆಂಗಳೂರು: ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಹಸ್ತದ ಗುರುತೇ ಅಭ್ಯರ್ಥಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರವಾಗಿ ಸಮುದಾಯದ ನಾಯಕರುಗಳ ಜತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಭೆಯ ಕುರಿತು ಮಾತನಾಡಿ, ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕಾಲಮಿತಿಯಲ್ಲಿ ಮೀಸಲಾತಿ ನೀಡಬೇಕು ಎಂದರೆ, ಅದು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಬೇರೆ ಸಮಾಜಗಳಿಗೆ ನೋವಾಗುವಂತೆ ತೀರ್ಮಾನ ಮಾಡಿತ್ತು. ನಂತರ ಆ ಸರ್ಕಾರವೇ ನಾವು ಯಾವುದೇ ಮೀಸಲಾತಿ ಜಾರಿ ಮಾಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವಾಗ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಈಗ ಚುನಾವಣಾ ನೀತಿ ಸಂಹಿತೆ ಇದೆ. ಇದಾದ ನಂತರ ಸಭೆ ಕರೆದು ಮಾತನಾಡುತ್ತೇವೆ ಎಂದು ಸಮುದಾಯದ ಮುಖಂಡರುಗಳಿಗೆ ಗೌರವಯುತವಾಗಿ ಹೇಳಿದ್ದೇವೆ ಅವರ ಭಾವನೆ, ಕಳಕಳಿ ನಮಗೆ ಅರ್ಥವಾಗುತ್ತದೆ. ಮುಂದಿನ ದಿನಗಳಲ್ಲಿ ನಾವು ಅವರ ವಿಚಾರವನ್ನು ಪರಿಗಣಿಸುತ್ತೇವೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296