ಚಿಕ್ಕಮಗಳೂರು: ಮೂಡಿಗೆರೆ ಪಟ್ಟಣದ ಸಮೀಪವೇ ಹಸುವೊಂದನ್ನು ಹುಲಿ ಕೊಂದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ಮೂಡಿಗೆರೆ ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಕುನ್ನಹಳ್ಳಿ ಗ್ರಾಮದಲ್ಲಿ ಹುಲಿದಾಳಿಗೆ ಹಸು ಬಲಿಯಾಗಿದೆ. ಕುನ್ನಹಳ್ಳಿ ಗ್ರಾಮದ ಕೃಷಿಕ ಹಳೇಮೂಡಿಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೆ.ಆರ್.ಶಿವಾನಂದ ಅವರ ಭತ್ತದ ಗದ್ದೆಯಲ್ಲಿ ಭಾನುವಾರ ಹಸುವೊಂದರ ಕಳೆಬರ ಪತ್ತೆಯಾಗಿತ್ತು. ಪರಿಶೀಲಿಸಲಾಗಿ ಅದು ಗ್ರಾಮದ ಕೆ.ಸಿ.ಪ್ರದೀಪ್ ಎಂಬುವವರ ಸಿಂಧಿ ಹಸುವಾಗಿತ್ತು. ಸ್ಥಳದಲ್ಲಿ ಹುಲಿ ಹೆಜ್ಜೆ ಹೋಲುವ ಗುರುತುಗಳು ಕಂಡಬಂದಿದ್ದರಿಂದ ಅನುಮಾನಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಮೂಡಿಗೆರೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪಶುಸಂಗೋಪನಾ ಇಲಾಖೆ ವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದಾಗ ಇದು ಹುಲಿ ಹೆಜ್ಜೆ ಎಂಬುದು ಖಚಿತವಾಗಿದ್ದು, ಹುಲಿದಾಳಿಯಿಂದ ಹಸು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಹಸುವಿನ ಕುತ್ತಿಗೆ ಭಾಗದಲ್ಲಿ ಹುಲಿದಾಳಿ ಮಾಡಿರುವ ಗುರುತು ಪತ್ತೆಯಾಗಿದೆ. ಪಶುಸಂಗೋಪನಾ ಇಲಾಖೆ ವೈದ್ಯರು ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW