ಪಾವಗಡ: ಆಂಧ್ರಪ್ರದೇಶದ ರೊದ್ದಂ ನಿಂದ ಕರ್ನಾಟಕದ ಕೊಡುಮಡುಗು ಗ್ರಾಮದ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಕೊಡಮಡುಗು ಗ್ರಾಮದಿಂದ ಆಂಧ್ರ ಕಡೆ ಹೋಗುತ್ತಿದ್ದ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಂಧ್ರಪ್ರದೇಶದ ಪೆದ್ದಗುವ್ವಲಪಲ್ಲಿ ಗ್ರಾಮದ 56 ವರ್ಷದ ರಾಮಾಂಜನೇಯಲು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಬುಧವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಪಾವಗಡ ತಾಲೂಕಿನ ಕೊಡುಮಡುಗು ಗ್ರಾಮದ ಹೊರವಲಯದ ಆಂಧ್ರ ಮತ್ತು ಕರ್ನಾಟಕ ಗಡಿ ರೇಖೆಯ ಸಮೀಪದಲ್ಲಿ ಜರುಗಿದೆ.
ರಾಮಾಂಜನೇಯಲು ಅವರ ಪುತ್ರ ಕೋಟೇಶ್ವರಲು ಅವರಿಗೂ ಸಹ ಗಂಭೀರ ಗಾಯಗಳಾಗಿದ್ದು, ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಪಾತ್ರಪಲ್ಲಿ ಮೊದ್ಲೇಟಪ್ಪ ಅವರಿಗೂ ಸಹ ಕಾಲು ಮುರಿದು ಗಂಭೀರ ಗಾಯಗಳಾಗಿದ್ದು ಇವರನ್ನ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ರವಾನಿಸಲಾಗಿದೆ .
ಘಟನಾ ಸ್ಥಳಕ್ಕೆ ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ್ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296